ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೀನಾ ಗಡಿ ತಂಟೆ: ಶುಕ್ರವಾರ ಸರ್ವ ಪಕ್ಷಗಳ ಸಭೆ ಕರೆದ ಕೇಂದ್ರ

ಚೀನಾ ಗಡಿ ವಿವಾದ, ಕಾಶ್ಮೀರ ಗಲಭೆ ವಿಚಾರಗಳನ್ನು ಚರ್ಚಿಸಲು ಕೇಂದ್ರ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದಿದೆ. ಶುಕ್ರವಾರ ಬೆಳಗ್ಗೆ ಈ ಸಭೆ ನವದೆಹಲಿಯಲ್ಲಿ ನಡೆಯಲಿದೆ ಎಂದು ಮೂಲಗಳು ಹೇಳಿವೆ.

|
Google Oneindia Kannada News

ನವದೆಹಲಿ, ಜುಲೈ 13: ಸಿಕ್ಕಿಂ ಗಡಿ ವಿಚಾರದಲ್ಲಿ ಹಾಗೂ ಕಾಶ್ಮೀರ ಗಲಭೆ ಕುರಿತಂತೆ ಕೇಂದ್ರ ಸರ್ಕಾರವು ಕೈಗೊಳ್ಳಬೇಕಿರುವ ನಿಲುವುಗಳ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಶುಕ್ರವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ಮರಾಜ್ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಚೀನಾದ ಸಿಟ್ಟಿಗೆ ಎಷ್ಟೊಂದು ಕಾರಣ, ಪಾಕಿಸ್ತಾನದಂತೆ ಗತಿಗೆಟ್ಟಿಲ್ಲ ಭಾರತಚೀನಾದ ಸಿಟ್ಟಿಗೆ ಎಷ್ಟೊಂದು ಕಾರಣ, ಪಾಕಿಸ್ತಾನದಂತೆ ಗತಿಗೆಟ್ಟಿಲ್ಲ ಭಾರತ

Rajnath, Sushma to brief Oppn on China standoff, Kashmir issue

ಸೋಮವಾರದಿಂದ (ಜುಲೈ 17) ಸಂಸತ್ ಅಧಿವೇಶನ ಶುರುವಾಗಲಿದೆ. ಅಧಿವೇಶದಲ್ಲಿ ಚೀನಾ ಹಾಗೂ ಭಾರತ ನಡುವಿನ ಯುದ್ಧದ ಸನ್ನಿವೇಶ ಹಾಗೂ ಕಾಶ್ಮೀರ ಕಣಿವೆಯಲ್ಲಿ ಕೊನೆಯಿಲ್ಲದೆ ನಡೆಯುತ್ತಿರುವ ಹಿಂಸಾಚಾರಗಳನ್ನು ಹತ್ತಿಕ್ಕುವಲ್ಲಿ ಸರ್ಕಾರ ವಿಫಲವಾಗಿರುವ ಕುರಿತಾಗಿ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ.

ಅದರಲ್ಲೂ ಇತ್ತೀಚೆಗೆ ಅಮರನಾಥ್ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿ 7 ಯಾತ್ರಿಕರ ಸಾವಿಗೆ ಕಾರಣವಾಗಿದ್ದರು. ಈ ವಿಚಾರವನ್ನೇ ವಿಪಕ್ಷಗಳು ಅಸ್ತ್ರವನ್ನಾಗಿ ಉಪಯೋಗಿಸಲು ನಿರ್ಧರಿಸಿವೆ ಎಂದು ಹೇಳಲಾಗಿದೆ.

ಟಾರ್ಗೆಟ್ ಚೀನಾː ಕ್ಷಿಪಣಿ ತಯಾರಿಕೆಯಲ್ಲಿ ಭಾರತ ಟಾರ್ಗೆಟ್ ಚೀನಾː ಕ್ಷಿಪಣಿ ತಯಾರಿಕೆಯಲ್ಲಿ ಭಾರತ

ಈ ಹಿನ್ನೆಲೆಯಲ್ಲಿ, ವಿಪಕ್ಷಗಳ ಮುಖಂಡರೊಂದಿಗೆ ಸಮಾಲೋಚನೆ ಸಭೆಯನ್ನು ನಡೆಸಿ ಒಂದು ನಿರ್ಧಾರಕ್ಕೆ ಬಂದರೆ, ಸದನದಲ್ಲಿ ಎದುರಾಗುವ ಭಾರೀ ವಿರೋಧವನ್ನು ಅಲ್ಪಮಟ್ಟಿಗಾದರೂ ತಗ್ಗಿಸುವ ಇರಾದೆಯೂ ಕೇಂದ್ರಕ್ಕಿದೆ ಎಂದು ಹೇಳಲಾಗಿದೆ.

English summary
Home Minister Rajnath Singh and External Affairs Minister Sushma Swaraj will brief leaders of opposition parties on the standoff with China and the situation in Kashmir on Friday, official sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X