Parliament Special Session 2023: ದೇಶದ 140 ಕೋಟಿ ಜನರಿಗೆ ಅಭಿನಂದನೆ ತಿಳಿಸಿ ಮೋದಿ ಟ್ವೀಟ್
ದೆಹಲಿ ಸೆಪ್ಟೆಂಬರ್ 22: ಬುಧವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಮಸೂದೆಯ ಪರವಾಗಿ 454 ಮತಗಳು ಚಲಾವಣೆಗೊಂಡರೆ, ಅಸಾದುದ್ದೀನ್ ಓವೈಸಿ ಮತ್ತು 2 ಸಂಸದರು ವಿರುದ್ಧವಾಗಿ ಮತ ಚಲಾಯಿಸಿದರು. ಈಗ ಈ ಮಸೂದೆ ಮೇಲ್ಮನೆ ಅಂದರೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕರಿಸಲಾಗಿದೆ. ನಮ್ಮ ದೇಶದ ಪ್ರಜಾಸತ್ತಾತ್ಮಕ ಪಯಣದಲ್ಲಿ ಒಂದು ಐತಿಹಾಸಿಕ ಕ್ಷಣ ಇದಾಗಿದೆ. 140 ಕೋಟಿ ಭಾರತೀಯರಿಗೆ ಅಭಿನಂದನೆಗಳು. ನಾರಿ ಶಕ್ತಿ ವಂದನ್ ಕಾಯ್ದೆಗೆ ಸಂಬಂಧಿಸಿದ ಮಸೂದೆಗೆ ಮತ ಚಲಾಯಿಸಿದ ಎಲ್ಲಾ ರಾಜ್ಯಸಭಾ ಸಂಸದರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಅದರ ಸರ್ವಾನುಮತದ ಅಂಗೀಕಾರವು ತುಂಬಾ ಉತ್ತೇಜನಕಾರಿಯಾಗಿದೆ' ಎಂದು ಬರೆದಿದ್ದಾರೆ.

'ಈ ಮಸೂದೆಯ ಅಂಗೀಕಾರದೊಂದಿಗೆ ಮಹಿಳಾ ಶಕ್ತಿಯ ಪ್ರಾತಿನಿಧ್ಯವು ಮತ್ತಷ್ಟು ಬಲಗೊಳ್ಳುತ್ತದೆ. ಅವರ ಸಬಲೀಕರಣದ ಹೊಸ ಯುಗ ಪ್ರಾರಂಭವಾಗಲಿದೆ. ಇದು ಕೇವಲ ಕಾನೂನಲ್ಲ. ಅದರ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಪಾತ್ರ ವಹಿಸುವ ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳು ತಮ್ಮ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ಈ ಐತಿಹಾಸಿಕ ಹೆಜ್ಜೆಯಿಂದ ಕೋಟ್ಯಂತರ ಮಹಿಳೆಯರ ಧ್ವನಿ ಗಟ್ಟಿಯಾಗಲಿದ್ದು, ಅವರ ಶಕ್ತಿ, ಧೈರ್ಯ ಮತ್ತು ಸಾಮರ್ಥ್ಯಕ್ಕೆ ಹೊಸ ಗುರುತು ಸಿಗಲಿದೆ' ಎಂದು ಹೇಳಿದ್ದಾರೆ.
हमारे देश की लोकतांत्रिक यात्रा का एक ऐतिहासिक क्षण! 140 करोड़ भारतवासियों को बहुत-बहुत बधाई!
— Narendra Modi (@narendramodi) September 21, 2023
नारी शक्ति वंदन अधिनियम से जुड़े बिल को वोट देने के लिए राज्यसभा के सभी सांसदों का हृदय से आभार। सर्वसम्मति से इसका पास होना बहुत उत्साहित करने वाला है।
इस बिल के पारित होने से जहां…
ಕೇಂದ್ರ ಸಚಿವ ಅರ್ಜುನ್ರಾಮ್ ಮೇಘವಾಲ್ ಮಸೂದೆಯನ್ನು ಮಂಡಿಸಿದರು. ಈ ಮಸೂದೆಗೆ ಬಹುತೇಕ ಎಲ್ಲ ಪಕ್ಷಗಳ ಬೆಂಬಲ ಸಿಕ್ಕಿದೆ. 13 ವರ್ಷಗಳ ಹಿಂದೆ ಈ ಮಸೂದೆಯನ್ನು ಮಂಡಿಸಿದಾಗ ಇದಕ್ಕೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಅವುಗಳಲ್ಲಿ ಪಕ್ಷಗಳಲ್ಲಿ ಒಂದು ಎಸ್ಪಿ ಕೂಡ ಒಂದು. ಆದರೆ ಈ ಬಾರಿ ಅವರು ಮಸೂದೆಯನ್ನು ಬೆಂಬಲಿಸುತ್ತಿರುವುದು ಕಂಡುಬಂದಿದೆ.

1996ರ ಸೆಪ್ಟೆಂಬರ್ನಲ್ಲಿ ಮಸೂದೆಯನ್ನು ಲೋಕಸಭೆಯಲ್ಲಿ ಪರಿಚಯಿಸಲಾಗಿದ್ದು 1966ರ ಸೆಪ್ಟೆಂಬರ್ 12ರಂದು ಅಂಗೀಕರಿಸಲಾಯಿತು. ಆದರೆ ಆ ಸಮಯದಲ್ಲಿ ಸರ್ಕಾರಕ್ಕೆ ಬಹುಮತದ ಕೊರತೆಯಿದ್ದ ರಾಜ್ಯಸಭೆಯಲ್ಲಿ ಅದು ಸ್ಥಗಿತಗೊಂಡಿತು. 1997ರಲ್ಲಿ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗುವ ಮುನ್ನವೇ ಸರ್ಕಾರ ಪತನಗೊಂಡಿತು.
ನಂತರ, 1998,1999,2008 ಮತ್ತು 2010ರಲ್ಲಿ ಲೋಕಸಭೆಯಲ್ಲಿ ಮಸೂದೆಯನ್ನು ಪುನ: ಪರಿಚಯಿಸಲಾಯಿತು. ಆದರೆ ಹೆಚ್ಚಿನ ಪ್ರಮುಖ ರಾಷ್ಟ್ರೀಯ ಪಕ್ಷಗಳ ಬೆಂಬಲದ ಹೊರತಾಗಿಯೂ ಅಂಗೀಕಾರವಾಗಲಿಲ್ಲ. 2014ರಲ್ಲಿ 15ನೇ ಲೋಕಸಭೆಯ ವಿಸರ್ಜನೆಯ ನಂತರ ಮಸೂದೆ ರದ್ದಾಗಿತ್ತು.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications