ರಾಜ್ಯಸಭೆ ಚುನಾವಣಾ ಫಲಿತಾಂಶ 2018
ಬೆಂಗಳೂರು, ಮಾರ್ಚ್ 23 : 59 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಶುಕ್ರವಾರ ಚುನಾವಣೆ ನಡೆಯಿತು. ಕರ್ನಾಟಕ ವಿಧಾನಸಭೆಯಿಂದ 4 ಅಭ್ಯರ್ಥಿಗಳು ರಾಜ್ಯಸಭೆಗೆ ಆಯ್ಕೆಯಾದರು.
ಕರ್ನಾಟಕ ವಿಧಾನಸಭೆಯಿಂದ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಒಬ್ಬರು, ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಜಯಗಳಿಸಿದರು. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಿ.ಎಂ.ಫಾರೂಕ್ ಸೋಲು ಅನುಭವಿಸಿದರು.
ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನ ಡಾ.ಎಲ್.ಹನುಮಂತಯ್ಯ, ಡಾ.ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್ ರಾಜ್ಯಸಭೆಗೆ ಆಯ್ಕೆಯಾದರು. ಕಳೆದ ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದರು.

ದೇಶದ 16 ರಾಜ್ಯಗಳ ವಿಧಾನಸಭೆಯಿಂದ ಆಯ್ಕೆಯಾದ 58 ಸದಸ್ಯರ ಅವಧಿ ಏಪ್ರಿಲ್ 3ಕ್ಕೆ ಅಂತ್ಯಗೊಳ್ಳಿದೆ. ತೆರವಾಗುವ ಸ್ಥಾನಗಳನ್ನು ಭರ್ತಿ ಮಾಡಲು ಇಂದು ಮತದಾನ ನಡೆಯಿತು. 58 ಸ್ಥಾನಗಳ ಪೈಕಿ 33 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಮತದಾನ ನಡೆಯಿತು.
ಇಂದು ಉತ್ತರ ಪ್ರದೇಶದ 10, ಪಶ್ಚಿಮ ಬಂಗಾಳದ 5, ಕರ್ನಾಟಕದ 4, ತೆಲಂಗಾಣದ 3, ಜಾರ್ಖಂಡ್ನ 2, ಛತ್ತೀಸ್ಗಢದ 1, ಕೇರಳದ 1 ಸ್ಥಾನಗಳಿಗೆ ಚುನಾವಣೆ ನಡೆಯಿತು.
ಚುನಾವಣಾ ಫಲಿತಾಂಶ
* ಪಶ್ಚಿಮ ಬಂಗಾಳ 5 ಸ್ಥಾನ : ಟಿಎಂಸಿ 4, ಕಾಂಗ್ರೆಸ್ 1ರಲ್ಲಿ ಜಯಗಳಿಸಿದೆ.
* ಕರ್ನಾಟಕ 4 ಸ್ಥಾನ : ಕಾಂಗ್ರೆಸ್ 3, ಬಿಜೆಪಿ 1 ಸ್ಥಾನದಲ್ಲಿ ಜಯ.
* ತೆಲಂಗಾಣ 3 ಸ್ಥಾನ : ಟಿಆರ್ಎಸ್ 3 ಸ್ಥಾನಗಳಲ್ಲಿ ಜಯ.
* ಜಾರ್ಖಂಡ್ 2 ಸ್ಥಾನ : ಬಿಜೆಪಿ ಮತ್ತು ಕಾಂಗ್ರೆಸ್ ತಲಾ 1 ಸ್ಥಾನದಲ್ಲಿ ಜಯ.
* ಛತ್ತೀಸ್ಗಢ 1 ಸ್ಥಾನ : ಬಿಜೆಪಿಗೆ ಜಯ
* ಕೇರಳ 1 ಸ್ಥಾನ : ಎಲ್ಡಿಎಫ್ ಜಯ.
* ಉತ್ತರ ಪ್ರದೇಶ 10 ಸ್ಥಾನ : 9 ಬಿಜೆಪಿ, 1 ಎಸ್ಪಿ ಜಯ
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications