Rajya Sabha elections: ಗುಜರಾತ್ನಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ವಿದೇಶಾಂಗ ಸಚಿವ ಎಸ್ ಜೈಶಂಕರ್
ಅಹಮದಾಬಾದ್, ಜುಲೈ. 10: ಗುಜರಾತ್ನಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ಗುಜರಾತ್ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಅವರು ಜೈಶಂಕರ್ ಅವರೊಂದಿಗೆ ರಾಜ್ಯ ವಿಧಾನಸಭೆ ಸಂಕೀರ್ಣಕ್ಕೆ ತೆರಳಿ ಅಲ್ಲಿ ಚುನಾವಣಾಧಿಕಾರಿ ರೀಟಾ ಮೆಹ್ತಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಜುಲೈ 13 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಜುಲೈ 17 ಕೊನೆಯ ದಿನವಾಗಿದೆ. ಅಗತ್ಯ ಬಿದ್ದರೆ ಜುಲೈ 24 ರಂದು ಮತದಾನ ನಡೆಯಲಿದೆ. ನಾಲ್ಕು ವರ್ಷಗಳ ಹಿಂದೆ, ವಿದೇಶಾಂಗ ಸಚಿವ ಜೈಶಂಕರ್ ಅವರು ಗುಜರಾತ್ನಿಂದ ರಾಜ್ಯಸಭೆಗೆ ಮೊದಲ ಬಾರಿಗೆ ನಾಮಪತ್ರ ಸಲ್ಲಿಸಿದ್ದರು.

ಗುಜರಾತ್ನ 11 ರಾಜ್ಯಸಭಾ ಸ್ಥಾನಗಳಲ್ಲಿ ಪ್ರಸ್ತುತ ಎಂಟು ಸ್ಥಾನಗಳು ಬಿಜೆಪಿ ಮತ್ತು ಉಳಿದವು ಕಾಂಗ್ರೆಸ್ನ ಕೈಯಲ್ಲಿವೆ. ಬಿಜೆಪಿ ಹೊಂದಿರುವ ಎಂಟು ಸ್ಥಾನಗಳ ಪೈಕಿ ಎಸ್ ಜೈಶಂಕರ್, ಜುಗಲ್ಜಿ ಠಾಕೂರ್ ಮತ್ತು ದಿನೇಶ್ ಅನವಾಡಿಯಾ ಅವರ ಅವಧಿ ಆಗಸ್ಟ್ 18 ರಂದು ಕೊನೆಗೊಳ್ಳಲಿದೆ. ಈ ಮೂರು ಸ್ಥಾನಗಳಿಗೆ ಪ್ರಸ್ತುತ ಚುನಾವಣೆ ನಡೆಯಲಿದೆ.
182 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಸಾಕಷ್ಟು ಶಾಸಕರನ್ನು ಹೊಂದಿಲ್ಲದ ಕಾರಣ ಗುಜರಾತ್ನಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂದು ಕಾಂಗ್ರೆಸ್ ಶುಕ್ರವಾರ ಮಾಹಿತಿ ನೀಡಿದೆ.

ಕಳೆದ ವರ್ಷದ ಕೊನೆಯಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ದಾಖಲೆ ಬರೆದಿದ್ದು, ಬರೋಬ್ಬರಿ 156 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ ಕಾಂಗ್ರೆಸ್ ಕೇವಲ 17 ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್ ರಾಜ್ಯ ರಚನೆಯಾದ ನಂತರ ಅದರ ಅತ್ಯಂತ ಕಳಪೆ ಪ್ರದರ್ಶನ ತೋರಿಸಿದೆ. ಈಗ ಮತ್ತೆ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications