ರಾಜ್ಯಸಭೆಯಲ್ಲಿ ಕಾಶ್ಮೀರ ಪುನರ್ ರಚನೆ ವಿಧೇಯಕ ಅಂಗೀಕಾರ
ನವದೆಹಲಿ, ಆಗಸ್ಟ್ 05: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಇನ್ಮುಂದೆ ರಾಜ್ಯವಾಗಿರುವುದಿಲ್ಲ. ವಿಶೇಷ ಸ್ಥಾನಮಾನ ನೀಡುವ ಸಂವಿಧಾನ ಪರಿಚ್ಛೇದ 370 ರದ್ದು ಸೇರಿದಂತೆ ಮೋದಿ ಸರ್ಕಾರ ಇಂದು ತೆಗೆದುಕೊಂಡಿರುವ ಐತಿಹಾಸಿಕ ವಿಧೇಯಕಕ್ಕೆ ರಾಜ್ಯಸಭೆಯಲ್ಲಿಂದು(ಆಗಸ್ಟ್ 05) ಅಂಗೀಕಾರ ಸಿಕ್ಕಿದೆ. ಈ ಮೂಲಕ ಭಾರತದ ಮುಕುಟವನ್ನು ಕಾಪಾಡುವ ಜವಾಬ್ದಾರಿ ಸಂಪೂರ್ಣವಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಿಕ್ಕಿದೆ.
ಕಾಶ್ಮೀರ ಪುನರ್ ರಚನೆ ವಿಧೇಯಕ 2019 ರಾಜ್ಯಸಭೆಯಲ್ಲಿಂದು ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದರು. ಈ ಬಗ್ಗೆ ಭಾರಿ ಗದ್ದಲ, ಗೊಂದಲ, ಪ್ರತಿಭಟನೆ ಎದುರಾಯಿತು. ಸಂಜೆ ವೇಳೆಗೆ ಕೊನೆಗೂ ಮತದಾನ ಪ್ರಕ್ರಿಯೆಗೆ ಸ್ಪೀಕರ್ ಎಂ ವೆಂಕಯ್ಯ ನಾಯ್ಡು ಸೂಚಿಸಿದರು.
ಅಮಿತ್ ಶಾ ಮಂಡಿಸಿದ ವಿಧೇಯಕಗಳ ಪರ 125 ಹಾಗೂ ವಿರೋಧವಾಗಿ 61 ಧ್ವನಿ ಮತಗಳು ಬಿದ್ದವು. ಜಮ್ಮು ಮತ್ತು ಕಾಶ್ಮೀರ, ಲಡಾಕ್ ಪ್ರತ್ಯೇಕ ಕೇಂದ್ರಾಡಳಿತ ವಿಧೇಯಕ, ಕಾಶ್ಮೀರದಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೆ ಶೇ10ರಷ್ಟು ಮೀಸಲಾತಿ ನೀಡುವ Jammu and Kashmir Reservation Bill, 2019 ಬಿಲ್ ಕೂಡಾ ಪಾಸ್ ಆಗಿದೆ.

ಜಮ್ಮುಮತ್ತು ಕಾಶ್ಮೀರ ಹೊಸ ಕೇಂದ್ರಾಡಳಿತ ಪ್ರದೇಶವಾಗಿದ್ದರೂ ವಿಧಾನಸಭೆ ಹೊಂದಲಿದೆ, ಲಡಾಕ್ ಹೊಸ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಯಾವುದೇ ವಿಧಾನಸಭೆ ಹೊಂದಿರುವುದಿಲ್ಲ. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಪುದುಚೇರಿಯಂತೆ ಚುನಾವಣೆ ಎದುರಿಸಿ ಜನಾದೇಶ ಪಡೆದ ಸರ್ಕಾರ ರಚನೆಯಾಗಿ ಹೊಸ ಮುಖ್ಯಮಂತ್ರಿ ಹೊಂದಬಹುದು. ಆದರೆ, ಲಡಾಕ್ ಮಾತ್ರ ಅಂಡಮಾನ್ ಮತ್ತು ನಿಕೋಬಾರ್ ಇನ್ನಿತರ ಕೇಂದ್ರಾಡಳಿತ ಪ್ರದೇಶಗಳಂತೆ ಉಳಿಯಲಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications