ಭಾರತದ ಶತಕೋಟಿ ರಾಮನ ಭಕ್ತರು ಕಂಡಿದ್ದ ಕನಸು ಇಂದು ನನಸಾಗಿದೆ. ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಸಂಪನ್ನಗೊಂಡಿದ್ದು, ಭಗವಾನ್ ಶ್ರೀರಾಮನು ಅಯೋಧ್ಯೆಯ ರಾಮ ಮಂದಿರದಲ್ಲಿ ನೆಲೆಸಲಿದ್ದಾನೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದೆ.
ದೇಶದ ಸಾವಿರಾರು ಗಣ್ಯರ ಸಮ್ಮುಖದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ವಿರಾಜಮಾನನಾಗಿದ್ದಾನೆ.
ಮಧ್ಯಾಹ್ನ 12.20ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು 12:45ರವರೆಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಅಯೋಧ್ಯೆಯಲ್ಲಿ ಇಂದು ಸುಮಾರು 2 ಗಂಟೆಗಳ ಕಾಲ 25 ರಾಜ್ಯಗಳ ವಿವಿಧ ಸಂಗೀತ ವಾದ್ಯಗಳ ಕಾರ್ಯಕ್ರಮ ನಡೆದಿದೆ. ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕೋಟ್ಯಂತರ ಭಕ್ತರು ಅಯೋಧ್ಯೆ ರಾಮನನ್ನು ಕಣ್ತುಂಬಿಕೊಂಡಿದ್ದಾರೆ.
Jan 22, 2024, 9:53 pm IST
ವಾರ್ನರ್ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅವರ ಪೋಸ್ಟ್ ಈಗಾಗಲೇ ವೈರಲ್ ಆಗಿದೆ. "ಜೈ ಶ್ರೀ ರಾಮ್ ಇಂಡಿಯಾ" ಎಂದು ವಾರ್ನರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದು ಭಗವಾನ್ ರಾಮನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.
Jan 22, 2024, 9:05 pm IST
ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಬಾಲರಾಮನ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 'ರಾಮ ಜ್ಯೋತಿ' ಬೆಳಗಿಸಿದರು.
Jan 22, 2024, 8:17 pm IST
ಅಯೋಧ್ಯೆಯಿಂದ ವಾಪಸಾದ ಬಳಿಕ "ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ" ಯನ್ನು ಪ್ರಾರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಯೋಜನೆಯಲ್ಲಿ 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಫಲಕ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. "ಜಗತ್ತಿನ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ" ಎನ್ನುವ ಉದ್ದೇಶದಿಂದ ಈ ಯೋಜನೆ ಆರಂಭಿಸುವುದಾಗಿ ಹೇಳಿದ್ದಾರೆ.
Jan 22, 2024, 7:52 pm IST
ಅಯೋಧ್ಯೆ ರಾಮ ಮಂದಿರದಲ್ಲಿ ಸೋಮವಾರ ನಡೆದ 'ಪ್ರಾಣ ಪ್ರತಿಷ್ಠಾ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರೊಬ್ಬರಿಗೆ ಹೃದಯಾಘಾತವಾಗಿದ್ದು. ಭಾರತೀಯ ವಾಯುಪಡೆಯ (ಐಎಎಫ್) ಕ್ಷಿಪ್ರ ಕಾರ್ಯಾಚರಣೆ ತಂಡದ ಸಂಚಾರಿ ಆಸ್ಪತ್ರೆಯ ತಕ್ಷಣ ಸ್ಪಂದಿಸಿದ ಕಾರಣ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ.
Jan 22, 2024, 4:03 pm IST
ಮುಸ್ಲಿಂ ಬಾಂಧವರಿಂದ ಶ್ರೀರಾಮನಿಗೆ ಪೂಜೆ
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟಾಪನೆ ಆಗುತ್ತಿದ್ದಂತೆಯೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾಮನ ಪೂಜೆ ಪುನಸ್ಕಾರ ಜೋರಾಗಿ ನಡೆದಿದೆ. ಹಿಂದೂಗಳು ಭಾಗವಹಿಸುವುದು ಸಹಜ ಆದರೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದವರು ಕೂಡ ಶ್ರೀರಾಮನ ಪೂಜೆ ಮಾಡಿದ್ದಾರೆ. ಅಲ್ಲದೇ ರಾಮನ ಮುಂದೆ ಸಖತ್ ಹೆಜ್ಜೆ ಕೂಡ ಹಾಕಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿ ಅನ್ವರ ಮುಲ್ಲಾ ಹಾಗೂ ಕುಟುಂಬದ ಸದಸ್ಯರು ಓಣಿಯ ಜನರ ಜೊತೆಗೆ ಸೇರಿ ಪೂಜೆ ಮಾಡಿದ್ದಾರೆ.
Jan 22, 2024, 3:36 pm IST
ಧಾರವಾಡದಲ್ಲಿ ಉಚಿತ ಕಟಿಂಗ್ ಮಾಡಿ ರಾಮಸೇವೆ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯ ನಿಮಿತ್ತ ಇಂದು ಧಾರವಾಡದಲ್ಲಿ ಕಟಿಂಗ್ ಶಾಪ್ ಮಾಲೀಕರೊಬ್ಬ ಉಚಿತವಾಗಿ ಕಟಿಂಗ್ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು. ಶಿವಾನಂದ ಹಡಪದ ಎನ್ನುವವರು ಇಂದು ದಿನಪೂರ್ತಿ ಕಟಿಂಗ್ ಮಾಡುವ ಮೂಲಕ (ಕಾಯಕ) ರಾಮನಸೇವೆ ಮಾಡುತ್ತಿದ್ದಾರೆ. ಜೊತೆಗೆ ಸಾರ್ವಜನಿಕ ಉಚಿತ ಪಲಾವ್ ವಿತರಣೆ ಮಾಡಿದ್ದಾರೆ.
Jan 22, 2024, 3:03 pm IST
ಗಣ್ಯರಿಗೆ ಅಯೋಧ್ಯೆ ಶ್ರೀರಾಮನ ದರ್ಶನ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಂಡಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ವಿಶೇಷ ಆಹ್ವಾನಿತರಿಗೆ ಇಂದು ಪ್ರಾಣ ಪ್ರತಿಷ್ಠಾಪನೆಗೊಂಡ ಶ್ರೀರಾಮಲಲ್ಲಾನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಾಧುಗಳು, ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಹಾಗೂ ಕ್ರೀಡಾ ಸಾಧಕರನ್ನು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.
Jan 22, 2024, 3:02 pm IST
ಬೆಂಗಳೂರಿನಲ್ಲಿ ಎಎಪಿಯಿಂದ ರಾಮ ಭಜನೆ
ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ಕೇಂದ್ರ ಕಾರ್ಯಾಲಯದಲ್ಲಿ ರಾಮ ಭಜನೆ ಹಾಗೂ ಸುಂದರ ಕಾಂಡ ಸ್ತೋತ್ರ ಪಠಣ ಕಾರ್ಯಕ್ರಮ ನಡೆಯಿತು. ಈ ವೇಳೆ ಪಕ್ಷದ ಮುಖಂಡರು, ನಾಯಕರು ಶ್ರದ್ಧಾಭಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಮನಿಗೆ ಪೂಜೆ ಸಲ್ಲಿಸಿದರು. ರಾಮನ ಭಜನೆ ಮತ್ತು ಸ್ತೋತ್ರವನ್ನು ಎಲ್ಲರೂ ಪಠಿಸುವ ಮೂಲಕ ಅಯೋಧ್ಯೆ ರಾಮನಿಗೆ ಪ್ರಾರ್ಥನೆ ಸಲ್ಲಿಸಿದರು.
Jan 22, 2024, 2:58 pm IST
ರಾಮ ಮಂದಿರದಿಂದ ತೆರಳಿದ ಪ್ರಧಾನಿ ನರೇಂದ್ರ ಮೋದಿ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಪಸ್ ಆಗಿದ್ದಾರೆ. ಸುಮಾರು ಐದು ಗಂಟೆಗಳ ಕಾಲ ಅಯೋಧ್ಯೆ ರಾಮಮಂದಿರದಲ್ಲಿ ಕಳೆದ ಪ್ರಧಾನಿ ಮೋದಿ, ರಾಮಮಂದಿರ ಉದ್ಘಾಟನೆಗೆ ಆಗಮಿಸಿದ ಗಣ್ಯರಿಗೆ ವಂದಿಸಿ ರಾಮ ಮಂದಿರದಿಂದ ತೆರಳಿದ್ದಾರೆ.
Jan 22, 2024, 2:40 pm IST
ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಚೆನ್ನೈನಲ್ಲಿ ಹಿರಿಯ ವೃದ್ಧೆಯೊಬ್ಬರು ರಾಮನ ಫೋಟೋಗೆ ಪೂಜೆ ಸಲ್ಲಿಸಿ ಭಕ್ತಿ ಮೆರೆದರು.
Jan 22, 2024, 2:36 pm IST
ಮಂತ್ರಾಲಯದಿಂದ ಬೃಹತ್ ಶೋಭಾಯಾತ್ರೆಗೆ ಚಾಲನೆ
ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಆಂಧ್ರಪ್ರದೇಶ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಮಠದಲ್ಲಿ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು ಶೋಭಾಯಾತ್ರೆಗೆ ಮುಸ್ಲಿಮರು ಚಾಲನೆ ನೀಡಿದರು. ಕೇಸರಿ ಧ್ವಜ ಹಾರಿಸುವ ಮೂಲಕ ಮುಸ್ಲಿಮರು ಚಾಲನೆ ನೀಡಿದರು. ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರಿಂದ ಭಾವೈಕ್ಯತೆ ಸಂದೇಶ ರವಾನೆ ಆಯಿತು.
Jan 22, 2024, 2:31 pm IST
ಇಂದು ನಮ್ಮ ರಾಮ ಬಂದಿದ್ದಾನೆ: ಪ್ರಧಾನಿ ಮೋದಿ
ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Jan 22, 2024, 2:14 pm IST
ಪ್ರಧಾನಿ ಮೋದಿಗೆ ರಾಮಮಂದಿರದ ಸ್ಮರಣಿಕೆ ಗಿಫ್ಟ್ ಕೊಟ್ಟ ಯೋಗಿ ಆದಿತ್ಯನಾಥ್
Jan 22, 2024, 2:10 pm IST
ಸೀತಾರಾಮ ಲಕ್ಷ್ಮಣ ದೇವಾಲಯ ಉದ್ಘಾಟಿಸಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
Jan 22, 2024, 2:07 pm IST
ಪ್ರಧಾನಿ ಮೋದಿಗೆ ರಾಮಮಂದಿರದ ಸ್ಮರಣಿಕೆ ಗಿಫ್ಟ್
ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿಯವರಿಗೆ ರಾಮಮಂದಿರದ ಪ್ರತಿಕೃತಿಯನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ಮರಣಿಕೆಯಾಗಿ ನೀಡಿದರು. ಜೊತೆಗೆ, ವೇದಿಕೆಯಲ್ಲಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಸಿಎಂ ಯೋಗಿ ರಾಮಮಂದಿರದ ಮಾದರಿಯ ನೆನಪಿನ ಕಾಣಿಕೆಯನ್ನು ನೀಡಿದರು.
Jan 22, 2024, 2:04 pm IST
11 ದಿನ ಉಪವಾಸ ಅಂತ್ಯಗೊಳಿಸಿದ ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಉಪವಾಸ ಅಂತ್ಯಗೊಳಿಸಿದ್ದಾರೆ. 11 ದಿನಗಳಿಂದ ಕಠಿಣ ಉಪವಾಸ ಕೈಗೊಂಡಿದ್ದ ಮೋದಿ, ಇದೀಗ ರಾಮಲಲ್ಲಾನ ಎದುರು ಉಪವಾಸ ಅಂತ್ಯಗೊಳಿಸಿದರು.
Jan 22, 2024, 1:57 pm IST
ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ; ಇದು ಭಾವನಾತ್ಮಕ ಕ್ಷಣ ಎಂದ ಮೋದಿ
ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಅಸಾಧಾರಣ ಮತ್ತು ಭಾವನಾತ್ಮಕ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Jan 22, 2024, 1:23 pm IST
ಅವನ ಪಾದಗಳು ನಮ್ಮ ಮೋಕ್ಷ-ನಟ ಕಿಚ್ಚ ಸುದೀಪ್
'ಅವನ ಭುಜಗಳು ನಮ್ಮ ಶಕ್ತಿ, ಅವನ ಎದೆ ನಮ್ಮ ಮಹತ್ವಾಕಾಂಕ್ಷೆ, ಅವನ ಕೈಗಳು ನಮ್ಮ ಶೌರ್ಯ, ಅವನ ಪಾದಗಳು ನಮ್ಮ ಮೋಕ್ಷ, ಅವನ ರೂಪದಲ್ಲಿ, ಎಲ್ಲಾ ಸೃಷ್ಟಿಯ ಸಾರ'ಎಂದು ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಶ್ರೀರಾಮನ ವರ್ಣನೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ನಟ ಸುದೀಪ್ 500 ವರ್ಷಗಳ ಕತ್ತಲೆಯ ನಂತರ ಒಂದು ರಾಷ್ಟ್ರದ ಜನರ, ಬೆಳಕಿನ ಪ್ರಾಣ-ಪ್ರತಿಷ್ಠೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
His shoulders our strength, His chest our ambition, His hands our valour, His feet our salvation, In his form, the essence of all creation. So it begins, From here we rise! The prana-prathishta Of a nation, Of a people, Of light after 500 years of dark.#JaiShriRampic.twitter.com/LzzJ1Ohx2c
ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ಸಂಭ್ರಮಾಚರಣೆಯ ಮುಗಿಲು ಮುಟ್ಟಿತ್ತು. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳು ನಡೆದವು. ಅದರಂತೆ ಚಿತ್ರದುರ್ಗದಲ್ಲಿ ವಿಶೇಷ ಕಾರ್ಯಕ್ರಮವೊಂದು ನಡೆದಿದೆ. ಚಿತ್ರದುರ್ಗ ಗಾಂಧಿನಗರದ ಸಾಗರ್ ಹಾಗೂ ಭಾವನಾ ದಂಪತಿ ರಾಮಮಂದಿರ ಉದ್ಘಾಟನೆಗೊಂಡ ದಿನವೇ ತಮ್ಮ ಮಗುವಿಗೆ ನಾಮಕರಣ ಮಾಡಿದ್ದು, ಶ್ರೀರಾಮ್ ಎಂದು ಹೆಸರಿಟ್ಟಿದ್ದಾರೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಅರ್ಚಕರು ವೇದ-ಮಂತ್ರ ಪಠಿಸಿ ಮೂರ್ತಿಯೊಳಗೆ ದೇವರನ್ನು ಆವಾಹನೆ ಮಾಡಿದ್ದು, ಮೊದಲು ನೇತ್ರೋನ್ಮಿಲನ, ಚಿನ್ನದ ಸೂಜಿಯಿಂದ ಕಣ್ಣು ತೆರೆದು ಕನ್ನಡಿ, ಹಸು, ಹಣ್ಣು-ಹಂಪಲು ತೋರಿಸಿ ರಾಮನ ಮೂರ್ತಿಗೆ ನೈವೆೇದ್ಯ ನೀಡಿದ ಬಳಿಕ ಪ್ರಾಣ ಪ್ರತಿಷ್ಠಾಪನೆ ಪೂರ್ಣವಾಗಿದೆ.
Jan 22, 2024, 12:35 pm IST
ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ನೋಡಬೇಕೆಂಬ ಶತಕೋಟಿ ಭಕ್ತರ ಕಸನು ನನಸಾಗುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನಗೊಳ್ಳಲಿದೆ. ಈಗಾಗಲೇ ಪೂಜಾ ವಿಧಿವಿಧಾನಗಳು ನಡೆಯುತ್ತಿದ್ದು, ದೇಶದ ಕೋಟ್ಯಂತರ ರಾಮನ ಭಕ್ತರ ಚಿತ್ತ ಅಯೋಧ್ಯೆ ಮೇಲಿದೆ.
Jan 22, 2024, 12:28 pm IST
ಕೆಲವೇ ಕ್ಷಣಗಳಲ್ಲಿ ರಾಮನಿಗೆ ಪ್ರಾಣ ಪ್ರತಿಷ್ಠಾಪನೆ
ಕೆಲವೇ ಕ್ಷಣಗಳಲ್ಲಿ ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು, ಗರ್ಭಗುಡಿಯಲ್ಲಿ ಐವರು ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಸೇರಿದಂತೆ ಐವರು ಗಣ್ಯರು ಹಾಗೂ ಪ್ರಧಾನ ಅರ್ಚರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಸಂಪನ್ನಗೊಳ್ಳುತ್ತಿದೆ.
Jan 22, 2024, 12:20 pm IST
2,500 ಕ್ವಿಂಟಾಲ್ ಹೂಗಳಿಂದ ರಾಮಮಂದಿರ ಅಲಂಕಾರ
ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಗಲಿದೆ. ಸಂಪೂರ್ಣ ದೇಶದ ಚಿತ್ತ ಅಯೋಧ್ಯೆಯ ಮೇಲಿದೆ. ಇಂದು ಲೋಕಾರ್ಪಣೆಗೊಳ್ಳಲಿರುವ ಅಯೋಧ್ಯೆ ರಾಮ ಮಂದಿರವನ್ನು ಸುಮಾರು 2500 ಕ್ವಿಂಟಾಲ್ಗೂ ಹೆಚ್ಚು ಹೂವಿನಿಂದ ಅಲಂಕರಿಸಲಾಗಿದೆ.
Jan 22, 2024, 12:07 pm IST
ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಪೂಜಾ ವಿಧಿವಿಧಾನಗಳು ಆರಂಭ
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿವಿಧಾನಗಳು ಆರಂಭಗೊಂಡಿದೆ. 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ರಾಜ್ಯಪಾಲರು ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಗರ್ಭಗುಡಿಯಲ್ಲಿ ಅವಕಾಶ ನೀಡಲಾಗಿದೆ.
Jan 22, 2024, 12:01 pm IST
5,000ಕ್ಕೂ ಅಧಿಕ ದೀಪ ಬೆಳಗಲು ಸಿದ್ಧತೆ
ಬೆಂಗಳೂರಿನ ವಿಜಯನಗರದ ಮಾರುತಿ ಮಂದಿರದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನೆರವೇರಿದ್ದು, ಭಕ್ತ ಸಾಗರ ಕಂಡು ಬಂತು. ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಸುಮಾರು 5,000ಕ್ಕೂ ಅಧಿಕ ದೀಪಗಳನ್ನು ಬೆಳಗಿಸಿ ಮಂದಿರದ ಆಡಳಿತ ಮಂಡಳಿ ಸಿದ್ದಗೊಂಡಿದೆ. ಭಕ್ತರು ದೀಪ ಬೆಳಗಿಸಲು ಕಾತುರರಾಗಿದ್ದಾರೆ.
Jan 22, 2024, 11:55 am IST
ರಾಮ ಮಂದಿರದಲ್ಲಿ ಪುಷ್ಪವೃಷ್ಟಿ
ಇನ್ನೇನು ಕೆಲವೇ ಕ್ಷಣದಲ್ಲಿ ಉದ್ಘಾಟನೆಗೊಳ್ಳಲಿರುವ ಅಯೋಧ್ಯೆ ರಾಮ ಮಂದಿರದ ಮೇಲೆ ಪುಷ್ಪವೃಷ್ಟಿ ಸುರಿಸಲಾಗಿದೆ. ಸಾವಿರಾರು ಭಕ್ತರು ಈ ಸುಂದರ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ. ದೇಶದಾದ್ಯಂತ ರಾಮನ ಜಪ ಜೋರಾಗಿದೆ.
Jan 22, 2024, 11:48 am IST
ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬದ ಸದಸ್ಯರಿಗೆ ಪ್ರತಾಪ್ ಸಿಂಹ ಸನ್ಮಾನ
ದೇಶ ಎಲ್ಲೆಡೆ ರಾಮೋತ್ಸವದ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವ ಬಾಲರಾಮನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು. ಬಸವೇಶ್ವರ ವೃತ್ತದ ಬಳಿ ಇರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ನಿವಾಸಕ್ಕೆ ತೆರಳಿದ ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್.ಶ್ರೀವತ್ಸಹಾಗೂ ಬಿಜೆಪಿ ಮುಖಂಡರು, ಅರುಣ್ ಯೋಗಿರಾಜ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ, ಅಣ್ಣ ಸೂರ್ಯಪ್ರಕಾಶ್ ಅವರಿಗೆ ಹೂಗುಚ್ಛ ನೀಡಿ ಗೌರವಿಸಿದರು.
Jan 22, 2024, 11:36 am IST
ರಾಮನೂರಿನಲ್ಲಿ ಕ್ರಿಕೆಟ್ ದೇವರು
ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಚಿನ್ ತೆಂಡೂಲ್ಕರ್ ಅಯೋಧ್ಯೆಗೆ ಆಗಮಿಸಿದ್ದಾರೆ. ಅಯೋಧ್ಯೆಯ ಬಾಲರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾಗವಹಿಸಲಿದ್ದಾರೆ.
Jan 22, 2024, 11:22 am IST
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ: ರಾಮ ಮಂದಿರ ವೀಕ್ಷಣೆ ಆರಂಭ
ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಮ ಜನ್ಮಭೂಮಿಗೆ ಆಗಮಿಸಿದ್ದು, 12 ರವರೆಗೆ ರಾಮ ಮಂದಿರವನ್ನು ಸಂಪೂರ್ಣ ವೀಕ್ಷಣೆ ಮಾಡಲಿದ್ದಾರೆ. ಬಳಿಕ 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.
Jan 22, 2024, 11:11 am IST
ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಆರ್. ಟಿ. ನಗರದ ತಮ್ಮ ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು.
READ MORE
4:03 PM, 21 Jan
ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿಗಳ ಕುಟುಂಬ
ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ (ಸೋಮವಾರ) ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅಮ್ಮನವರು, ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.
4:03 PM, 21 Jan
ಬಾಲರಾಮ ಶಿಲೆ ಸಿಕ್ಕ ಜಾಗದಲ್ಲಿ ರಾಮಮಂದಿರ ನಿರ್ಮಾಣ: ಜಿಟಿಡಿ
ಬಾಲರಾಮ ಶಿಲೆ ಸಿಕ್ಕ ಜಾಗದಲ್ಲಿಯೇ ರಾಮಮಂದಿರ ನಿರ್ಮಾಣ ಮಾಡಲಾಗುವುದು. ಅಯೋಧ್ಯೆಯ ರಾಮಲಲ್ಲಾ ವಿಗ್ರಹದ ಮಾದರಿಯಲ್ಲಿಯೇ ಮೂರ್ತಿ ಇರಲಿದೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡರು ಹೇಳಿದ್ದಾರೆ.
4:05 PM, 21 Jan
ಮುಸ್ಲಿಂ, ಕ್ರೈಸ್ತರೂ ವಿಶೇಷ ಪ್ರಾರ್ಥನೆ ಸಲ್ಲಿಸಿ: ಅಸ್ಸಾಂ ಸಿಎಂ ಮನವಿ
ಅಯೋಧ್ಯಾ ಶ್ರೀರಾಮ ಮಂದಿರದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಟಾಪನೆ ನಡೆಯಲಿರುವ ಜನವರಿ 22 ರಂದು ದೇಶಾದ್ಯಂತ ಎಲ್ಲಾ ಜನರು (ಮುಸ್ಲಿಮರು ಹಾಗೂ ಕ್ರೈಸ್ತ ಸಮುದಾಯಕ್ಕೆ ಸೇರಿದವರೂ ಕೂಡಾ) ವಿಶೇಷ ಪ್ರಾರ್ಥನೆ ಸಲ್ಲಿಸಬೇಕೆಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಸರ್ಮಾ ಮನವಿ ಮಾಡಿದ್ದಾರೆ.
4:11 PM, 21 Jan
ರಾಮಸೇತು ನಿರ್ಮಿಸಿದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
5:30 PM, 21 Jan
ಹೂವಿನ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ರಾಮ ಮಂದಿರ
6:11 PM, 21 Jan
ಸೋಮವಾರ ನಡೆಯಲಿರುವ ರಾಮಮಂದಿರ ಕಾರ್ಯಕ್ರಮಗಳ ನೇರ ಪ್ರಸಾರವನ್ನು ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ನಿಷೇಧಿಸಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಆರೋಪಿಸಿದ್ದಾರೆ. ಇದಕ್ಕೆ ಉತ್ತರ ನೀಡಿರುವ ತಮಿಳುನಾಡು ಸರ್ಕಾರ ಸೇಲಂನಲ್ಲಿ ನಡೆಯುತ್ತಿರುವ ಡಿಎಂಕೆ ಯುವ ಸಮಾವೇಶದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ತಪ್ಪು ಮಾಹಿತಿಗಳನ್ನು ಪ್ರಚಾರ ಮಾಡುತ್ತಿದೆ ಎಂದು ಹೇಳಿದೆ.
6:33 PM, 21 Jan
ಅಯೋಧ್ಯೆ ರಾಮ ಮಂದಿರವನ್ನು ಸ್ಫೋಟಿಸುವುದಾಗಿ ಪೊಲೀಸರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ 21 ವರ್ಷದ ಯುವಕನನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ತಾನು ದಾವೂದ್ ಇಬ್ರಾಹಿಂ ಆಪ್ತ ಎಂದು ಕರೆ ಮಾಡಿದ್ದ ಇಂತೆಖಾಬ್ ಆಲಂ ದೇವಸ್ಥಾನ ಸ್ಫೋಟಿಸುವ ಬೆದರಿಕೆ ಹಾಕಿದ್ದ.
7:06 PM, 21 Jan
ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಒನ್ ಇಂಡಿಯಾ ಹಿಂದಿ ವಿಭಾಗದ ವತಿಯಿಂದ ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಸೆಲ್ಫಿ ಪಾಯಿಂಟ್ ನಿರ್ಮಾಣ ಮಾಡಲಾಗಿದೆ. ರಾಮ ಭಕ್ತರು ಇಲ್ಲಿ ನಿಂತು ಫೋಟೊ ತೆಗೆಸಿಕೊಂಡು ಸಂತಸಪಟ್ಟರು.
8:33 PM, 21 Jan
ರಾಮಮಂದಿರದ ಲೋಕಾರ್ಪಣೆ, ಶ್ರೀರಾಮನ ಪ್ರಾಣಪ್ರತಿಷ್ಠೆಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಮೇಳದ ಯಕ್ಷಗಾನ ಪ್ರಸಂಗದಲ್ಲಿ ಶನಿವಾರ, ಭಾನುವಾರ ಮತ್ತು ಸೋಮವಾರ ಶ್ರೀರಾಮಪಟ್ಟಾಭಿಷೇಕ ಮಹೋತ್ಸವದ ವಿಶೇಷ ಸನ್ನಿವೇಶವನ್ನು ಪ್ರದರ್ಶಿಸಲಾಗುತ್ತಿದೆ.
9:06 PM, 21 Jan
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ಕೇವಲ ಹಿಂದೂಗಳ ವಿಜಯವಲ್ಲ, ಭಾರತೀಯ ನಾಗರಿಕತೆಯ ವಿಜಯವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ, ಸೋಮವಾರ ವಿಶೇಷ ಪ್ರಾರ್ಥನೆಗಳನ್ನು ಆಯೋಜಿಸುವಂತೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಮನವಿ ಮಾಡಿದ್ದಾರೆ.
9:47 PM, 21 Jan
ಸೋಮವಾರ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೆ ರಾತ್ರಿ ದೃಷ್ಟಿ ಸಾಧನಗಳಿಂದ ಹಿಡಿದು ಕೃತಕ ಬುದ್ಧಿಮತ್ತೆ (AI) ಹೊಂದಿರುವ ಸಿಸಿಟಿವಿ ಕ್ಯಾಮೆರಾಗಳವರೆಗೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ದೇವಾಲಯವನ್ನು ಟನ್ಗಟ್ಟಲೆ ಹೂವುಗಳು ಮತ್ತು ಬಣ್ಣಬಣ್ಣದ ದೀಪಗಳಿಂದ ಅಲಂಕರಿಸಲಾಗಿದೆ.
10:17 PM, 21 Jan
ರಾಮ ಮಂದಿರ ಪ್ರಾಣ ಪ್ರತಿಷ್ಠಾನ ಸಂದರ್ಭದಲ್ಲಿ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಸೋಮವಾರವನ್ನು ಸಾರ್ವಜನಿಕ ರಜಾದಿನ ಎಂದು ಘೋಷಿಸಲಾಗಿದೆ.
10:30 PM, 21 Jan
ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಮತ್ತು ರವೀಂದ್ರ ಜಡೇಜಾ ಅಯೋಧ್ಯೆಗೆ ಆಗಮಿಸಿದ್ದಾರೆ. ಸೋಮವಾರ ನಡೆಯಲಿರುವ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಹಲವು ಸೆಲೆಬ್ರೆಟಿಗಳು ಭಾಗವಹಿಸಲಿದ್ದಾರೆ.
11:01 PM, 21 Jan
ರಾಷ್ಟ್ರಪತಿ ಮುರ್ಮು ಅವರು ರಾಮ ಮಂದಿರ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಪ್ರಾಣ ಪ್ರತಿಷ್ಠಾಪನೆಗೆ ತೆರಳಲಿರುವುದರಿಂದ, ಪ್ರತಿಯೊಂದೂ ಸಾಧಿಸುವ ವಿಶಿಷ್ಟ ನಾಗರಿಕತೆಯ ಪ್ರಯಾಣದ ಬಗ್ಗೆ ಮಾತ್ರ ಯೋಚಿಸಬಹುದು ಎಂದು ಹೇಳಿದ್ದಾರೆ.
11:32 PM, 21 Jan
ಅಯೋಧ್ಯೆಯಲ್ಲಿ ನಟ ರಿಷಬ್ ಶೆಟ್ಟಿ.
ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ..
ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದ ಮುನ್ನಾದಿನದಂದು ವಿವಿಧ ಸಾಧುಗಳು ಮತ್ತು ವಿವಿಐಪಿಗಳು ಅಯೋಧ್ಯೆಗೆ ಆಗಮಿಸಿದ್ದಾರೆ. ಯೋಗ ಗುರು ರಾಮ್ ದೇವ್ ಬಾಬಾ ಕೂಡ ಅಯೋಧ್ಯೆಗೆ ಆಗಮಿಸಿದ್ದು, ಸೋಮವಾರದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
11:41 PM, 21 Jan
ನಟ ರಜನಿಕಾಂತ್ ಕುಟುಂಬದ ಸಮೇತ ಅಯೋಧ್ಯೆಗೆ ತೆರಳಿದ್ದಾರೆ. ಅನೇಕ ನಟ, ನಟಿಯರು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
11:43 PM, 21 Jan
ಅಯೋಧ್ಯೆಯ ರಾಮಮಂದಿರದ ಬಹು ನಿರೀಕ್ಷಿತ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಗತ್ತಿನಾದ್ಯಂತ ಹಿಂದೂ ಸಮುದಾಯದವರು ಈ ಐತಿಹಾಸಿಕ ಸಂದರ್ಭದಲ್ಲಿ ಭವ್ಯವಾದ ಆಚರಣೆಗಳಿಗೆ ಸಜ್ಜಾಗುತ್ತಿದ್ದಾರೆ. ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
11:52 PM, 21 Jan
ಅಯೋಧ್ಯೆಯ ರಾಮಮಂದಿರದ ಬಹು ನಿರೀಕ್ಷಿತ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೂವು, ದೀಪಗಳಿಂದ ಇಡೀ ಅಯೋಧ್ಯೆ ನಗರ ಸಿಂಗಾರಗೊಂಡಿದೆ. ಭಾನುವಾರ ರಾತ್ರಿ ದೀಪಗಳ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ರಾಮ ಮಂದಿರ.
11:54 PM, 21 Jan
ಸೋಮವಾರ ನಡೆಯಲಿರುವ ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಜನಸೇನಾ ಮುಖ್ಯಸ್ಥ, ತೆಲುಗು ನಟ ಪವನ್ ಕಲ್ಯಾಣ್ ಲಕ್ನೋಗೆ ಆಗಮಿಸಿದ್ದಾರೆ. "ಇದು ಜನರ ಬಹುದಿನಗಳ ಕನಸಾಗಿದ್ದು, 500 ವರ್ಷಗಳ ನಂತರ ಅಂತಿಮವಾಗಿ ನನಸಾಗುತ್ತಿದೆ, ತುಂಬಾ ಸಂತೋಷವಾಗಿದ್ದೇವೆ" ಎಂದು ಹೇಳಿದ್ದಾರೆ.
12:03 AM, 22 Jan
ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಅಂಗವಾಗಿ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಎಂಡಿ ಮುಖೇಶ್ ಅಂಬಾನಿ ಅವರ ಮನೆ 'ಆಂಟಿಲಿಯಾ' ಗೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಮನೆ ಮೇಲೆ 'ಜೈ ಶ್ರೀ ರಾಮ್' ಬರಹಗಳು ಗಮನ ಸೆಳೆದವು.
6:24 AM, 22 Jan
ರಾಮಮಂದಿರ ಉದ್ಘಾಟನೆ: ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಇಂದು(ಜನವರಿ 22) ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಮಂದಿರಗಳಲ್ಲಿ ಹೋಮ-ಹವನ, ಪೂಜೆ, ಪ್ರವಚನ ನಡೆಯಲಿದೆ. ಅಲ್ಲದೇ ಕೆಲವು ದೇವಾಲಯಗಳಲ್ಲಿ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆ ಸಹ ಇರಲಿದೆ.
6:34 AM, 22 Jan
ಮೈಸೂರಿನಲ್ಲಿ 23 ದಿನಗಳ ಕಾಲ ಬೆಳಗಲಿದೆ 111 ಅಡಿ ಉದ್ದದ ಅಗರಬತ್ತಿ
ಐತಿಹಾಸಿಕ ರಾಮ ಮಂದಿರದಲ್ಲಿ ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ. ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದದಲ್ಲಿ 111 ಅಡಿ ಉದ್ದದ ಅಗರಬತ್ತಿಯನ್ನು ಬೆಳಗಲಿದ್ದಾರೆ. ಈ ಗಂಧದ ಕಡ್ಡಿಯು ಸತತ 23 ದಿನಗಳ ಕಾಲ ನಿರಂತರವಾಗಿ ಉರಿಯಲಿದೆ.
6:46 AM, 22 Jan
ಅಂಜನಾದ್ರಿಯಲ್ಲಿ ಇಂದು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ
ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯುತ್ತಿದ್ದು, ರಾಮನ ಬಂಟ ಹನುಮ ಜನ್ಮಸ್ಥಳ ಅಂಜನಾದ್ರಿಯಲ್ಲೂ ಇಂದು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಕೊಪ್ಪಳ ಜಿಲ್ಲೆಯಲ್ಲಿರುವ ಅಂಜನಾದ್ರಿ ಬೆಟ್ಟದ ಕೆಳಗೆ ಇಂದು 9 ಅಡಿ ಎತ್ತರದ ಪಂಚಲೋಹದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯವರು ಸುಮಾರು 500 ಕೆಜಿ ತೂಕವಿರುವ ಈ ವಿಗ್ರಹವನ್ನು ಈಗಾಗಲೇ ಮುಜರಾಯಿ ಇಲಾಖೆಯ ಆಡಳಿತಾಧಿಕಾರಿಗೆ ಹಸ್ತಾಂತರಿಸಿದ್ದಾರೆ.
6:52 AM, 22 Jan
ಬೆಂಗಳೂರಿನಲ್ಲಿ 15 ಅಡಿಯ ಶ್ರೀರಾಮ
ಬೆಂಗಳೂರಿನಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆಮಾಡಿದೆ. ನಗರದ ದೇವಾಲಯಗಳಲ್ಲಿ ಈಗಾಗಲೇ ವಿಶೇಷ ಪೂಜೆ ಆರಂಭಗೊಂಡಿದೆ. ಇನ್ನು ಹಲವು ಭಾಗಗಳಲ್ಲಿ ರಾಮಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ನಗರದ ಹೃದಯ ಭಾಗವಾಗಿರುವ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ 15 ಅಡಿಯ ಬೃಹತ್ ರಾಮನ ಮೂರ್ತಿ ನಿರ್ಮಿಸಲಾಗಿದೆ. ಬಿಲ್ಲು ಬಾಣಧಾರಿಯಾದ ಶ್ರೀರಾಮ ಕುಳಿತಿರುವ ಭಂಗಿಯಲ್ಲಿ ಈ ಮೂರ್ತಿಯನ್ನು ರಚಿಸಲಾಗಿದೆ.
6:58 AM, 22 Jan
ರಾಜ್ಯಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಕೆಎಸ್ಆರ್ಪಿ, ಸಿಎಆರ್, ಗೃಹರಕ್ಷಕ ದಳ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿದೆ. ಅಲ್ಲದೇ ದೇವಾಲಯ, ಮಸೀದಿ, ಚರ್ಚ್ ಸೇರಿದಂತೆ ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
7:10 AM, 22 Jan
1 ಕೋಟಿ 20 ಲಕ್ಷ ಸಲ ರಾಮ ನಾಮ ಜಪ ಬರೆದ ಕಡೂರಿನ ಅರ್ಚಕ
ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ಅಯ್ಯಪ್ಪ ಸ್ವಾಮಿ ದೇಗುಲದ ಅರ್ಚಕರೊಬ್ಬರು 1 ಕೋಟಿ 20 ಲಕ್ಷ ಸಲ ರಾಮ ನಾಮ ಜಪ ಬರೆದಿದ್ದಾರೆ. ಕಡೂರು ಪಟ್ಟಣದ ನಿವಾಸಿ ಪರಮೇಶ್ವರನ್ ಸ್ವಾಮಿ 2007ರಿಂದ ನಿರಂತರವಾಗಿ ರಾಮ ನಾಮ ಜಪ ಬರೆಯುತ್ತಿದ್ದಾರೆ. 89 ವರ್ಷದ ಪರಮೇಶ್ವರನ್ ಸ್ವಾಮಿ ಅಯೋಧ್ಯೆದಲ್ಲಿ ರಾಮ ಪ್ರಾಣ ಪ್ರತಿಷ್ಟಾಪನೆ ವೇಳೆ 1.20. ಕೋಟಿ ರಾಮ ನಾಮ ಜಪ ಬರೆದಿದ್ದಾರೆ. ಪರಮೇಶ್ವರನ್ ಜಪ ಬರೆದ ಪುಸ್ತಕ ಹಾಗೂ ಬರೆದ ಪೆನ್ನುಗಳನ್ನು ಸಹ ಸಂಗ್ರಹಿಸಿಟ್ಟಿದ್ದಾರೆ.
7:23 AM, 22 Jan
5 ಗಂಟೆಗಳ ಕಾಲ ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು 5 ಗಂಟೆಗಳ ಅಯೋಧ್ಯೆಯಲ್ಲಿ ಇರಲಿದ್ದು, ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಪೂಜೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10:55 ರಾಮ ಜನ್ಮಭೂಮಿಗೆ ಆಗಮಿಸಲಿರುವ ಪ್ರಧಾನಿ ಮೋದಿ 11 ಗಂಟೆಯಿಂದ 12ರವರೆಗೆ ರಾಮಮಂದಿರವನ್ನು ವೀಕ್ಷಣೆ ಮಾಡಲಿದ್ದಾರೆ. ಬಳಿಕ 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ರಾಮಮಂದಿರವನ್ನು ಉದ್ದೇಶಿಸಿ ಮಾತನಾಡಿ, 2:10ಕ್ಕೆ ಶಿವಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ ದೆಹಲಿಗೆ ತೆರಳಲಿದ್ದಾರೆ
7:39 AM, 22 Jan
ಕರ್ನಾಟಕದಲ್ಲಿದೆ ಎಲ್ಲೂ ಇರದ ಅಪರೂಪದ ಶ್ರೀರಾಮನ ವಿಗ್ರಹ
ದೇಶದಲ್ಲೇ ಅಪರೂಪದ ಶ್ರೀರಾಮನ ವಿಗ್ರಹ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ರಾಮನ ಎಡತೊಡೆಯ ಮೇಲೆ ಸೀತೆ ಕೂತಿರುವುದರ ಜೊತೆಗೆ ಆಂಜನೇಯ ನಮಸ್ಕರಿಸುತ್ತಿರುವ ಪುರಾತನ ಕಾಲದ ವಿಶೇಷವಾದ ವಿಗ್ರಹವೊಂದು ಜಿಲ್ಲೆಯ ತರೀಕೆರೆಯಲ್ಲಿ ಪತ್ತೆಯಾಗಿದೆ. ಸುಮಾರು 70 ವರ್ಷಗಳ ಹಿಂದೆ ತರೀಕೆರೆ ತಾಲೂಕಿನ ಚಿಕ್ಕಾತೂರು ಮಾರ್ಗದಲ್ಲಿನ ದಳವಾಯಿ ಕೆರೆಯ ಏರಿ ದುರಸ್ಥಿ ಮಾಡಲು ಅಗೆಯುವಾಗ ಈ ಮೂರ್ತಿ ಸಿಕ್ಕಿದೆ ಎನ್ನಲಾಗಿದೆ. 1982ರಲ್ಲಿ ಈ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
7:53 AM, 22 Jan
ಹುಬ್ಬಳ್ಳಿ ಕಮರಿಪೇಟೆ ರಾಮಮಂದಿರದಲ್ಲಿ ವಿಶೇಷ ಪೂಜೆ
ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿದೆ. ಕಮರಿಪೇಟೆ ಜೈಭಾರತ ಸರ್ಕಲ್ ಬಳಿ ಇರುವ ರಾಮ ಮಂದಿರದಲ್ಲಿ ಮುಂಜಾನೆಯೇ ಶ್ರೀರಾಮ, ಲಕ್ಷ್ಮಣ ಹಾಗೂ ಸೀತಾ ಮಾತೆಗೆ ಪಂಚಾಮೃತ ಅಭಿಷೇಕ ಮಾಡಲಾಗಿದ್ದು, ರಾಮ ಮಂದಿರದ ಎದುರು ಭಜನ ಕಾರ್ಯಕ್ರಮ ಆರಂಭವಾಗಿದೆ. ಬೆಳ್ಳಂಬೆಳಗ್ಗೆ ನೂರಾರು ಭಕ್ತರು ದೇವಾಲಯದಲ್ಲಿ ರಾಮಜಪ ಆರಂಭಿಸಿದ್ದಾರೆ.