Get Updates
Get notified of breaking news, exclusive insights, and must-see stories!

Ram Mandir Pran Pratishtha Live: ಪ್ರಭು ಶ್ರೀರಾಮನ ಬಳಿ ನಾನು ಕ್ಷಮೆಯಾಚಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ

ಭಾರತದ ಶತಕೋಟಿ ರಾಮನ ಭಕ್ತರು ಕಂಡಿದ್ದ ಕನಸು ಇಂದು ನನಸಾಗಿದೆ. ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಸಂಪನ್ನಗೊಂಡಿದ್ದು, ಭಗವಾನ್‌ ಶ್ರೀರಾಮನು ಅಯೋಧ್ಯೆಯ ರಾಮ ಮಂದಿರದಲ್ಲಿ ನೆಲೆಸಲಿದ್ದಾನೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದೆ.

ದೇಶದ ಸಾವಿರಾರು ಗಣ್ಯರ ಸಮ್ಮುಖದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ವಿರಾಜಮಾನನಾಗಿದ್ದಾನೆ.

Ram Mandir Pran Pratishtha Live: 22nd January Ayodhya Ram Janmabhoomi Temple Inauguration Latest News Highlights in Kannada

ಮಧ್ಯಾಹ್ನ 12.20ಕ್ಕೆ ಸರಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿದ್ದು 12:45ರವರೆಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಅಯೋಧ್ಯೆಯಲ್ಲಿ ಇಂದು ಸುಮಾರು 2 ಗಂಟೆಗಳ ಕಾಲ 25 ರಾಜ್ಯಗಳ ವಿವಿಧ ಸಂಗೀತ ವಾದ್ಯಗಳ ಕಾರ್ಯಕ್ರಮ ನಡೆದಿದೆ. ವಿವಿಧ 50 ದೇಶಗಳನ್ನು ಪ್ರತಿನಿಧಿಸುವ 92 ವಿಶೇಷ ಆಹ್ವಾನಿತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಕೋಟ್ಯಂತರ ಭಕ್ತರು ಅಯೋಧ್ಯೆ ರಾಮನನ್ನು ಕಣ್ತುಂಬಿಕೊಂಡಿದ್ದಾರೆ.

Jan 22, 2024, 9:53 pm IST

ವಾರ್ನರ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅವರ ಪೋಸ್ಟ್ ಈಗಾಗಲೇ ವೈರಲ್ ಆಗಿದೆ. "ಜೈ ಶ್ರೀ ರಾಮ್ ಇಂಡಿಯಾ" ಎಂದು ವಾರ್ನರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದು ಭಗವಾನ್ ರಾಮನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.
Jan 22, 2024, 9:05 pm IST

ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಬಾಲರಾಮನ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 'ರಾಮ ಜ್ಯೋತಿ' ಬೆಳಗಿಸಿದರು.
Jan 22, 2024, 8:17 pm IST

ಅಯೋಧ್ಯೆಯಿಂದ ವಾಪಸಾದ ಬಳಿಕ "ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ" ಯನ್ನು ಪ್ರಾರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಯೋಜನೆಯಲ್ಲಿ 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಫಲಕ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. "ಜಗತ್ತಿನ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ" ಎನ್ನುವ ಉದ್ದೇಶದಿಂದ ಈ ಯೋಜನೆ ಆರಂಭಿಸುವುದಾಗಿ ಹೇಳಿದ್ದಾರೆ.
Jan 22, 2024, 7:52 pm IST

ಅಯೋಧ್ಯೆ ರಾಮ ಮಂದಿರದಲ್ಲಿ ಸೋಮವಾರ ನಡೆದ 'ಪ್ರಾಣ ಪ್ರತಿಷ್ಠಾ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರೊಬ್ಬರಿಗೆ ಹೃದಯಾಘಾತವಾಗಿದ್ದು. ಭಾರತೀಯ ವಾಯುಪಡೆಯ (ಐಎಎಫ್) ಕ್ಷಿಪ್ರ ಕಾರ್ಯಾಚರಣೆ ತಂಡದ ಸಂಚಾರಿ ಆಸ್ಪತ್ರೆಯ ತಕ್ಷಣ ಸ್ಪಂದಿಸಿದ ಕಾರಣ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ.
Jan 22, 2024, 4:03 pm IST

ಮುಸ್ಲಿಂ ಬಾಂಧವರಿಂದ ಶ್ರೀರಾಮನಿಗೆ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟಾಪನೆ ಆಗುತ್ತಿದ್ದಂತೆಯೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾಮನ ಪೂಜೆ ಪುನಸ್ಕಾರ ಜೋರಾಗಿ ನಡೆದಿದೆ. ಹಿಂದೂಗಳು ಭಾಗವಹಿಸುವುದು ಸಹಜ ಆದರೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದವರು ಕೂಡ ಶ್ರೀರಾಮನ ಪೂಜೆ ಮಾಡಿದ್ದಾರೆ. ಅಲ್ಲದೇ ರಾಮನ ಮುಂದೆ ಸಖತ್ ಹೆಜ್ಜೆ ಕೂಡ ಹಾಕಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿ ಅನ್ವರ ಮುಲ್ಲಾ ಹಾಗೂ ಕುಟುಂಬದ ಸದಸ್ಯರು ಓಣಿಯ ಜನರ ಜೊತೆಗೆ ಸೇರಿ ಪೂಜೆ ಮಾಡಿದ್ದಾರೆ.
Jan 22, 2024, 3:36 pm IST

ಧಾರವಾಡದಲ್ಲಿ ಉಚಿತ ಕಟಿಂಗ್ ಮಾಡಿ ರಾಮಸೇವೆ

ಧಾರವಾಡದಲ್ಲಿ ಉಚಿತ ಕಟಿಂಗ್ ಮಾಡಿ ರಾಮಸೇವೆ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯ ನಿಮಿತ್ತ ಇಂದು ಧಾರವಾಡದಲ್ಲಿ ಕಟಿಂಗ್ ಶಾಪ್‌ ಮಾಲೀಕರೊಬ್ಬ ಉಚಿತವಾಗಿ ಕಟಿಂಗ್ ಮಾಡುವ ಮೂಲಕ ಭಕ್ತಿ ಸಮರ್ಪಿಸಿದರು. ಶಿವಾನಂದ ಹಡಪದ ಎನ್ನುವವರು ಇಂದು ದಿನಪೂರ್ತಿ ಕಟಿಂಗ್ ಮಾಡುವ ಮೂಲಕ (ಕಾಯಕ) ರಾಮನಸೇವೆ ಮಾಡುತ್ತಿದ್ದಾರೆ. ಜೊತೆಗೆ ಸಾರ್ವಜನಿಕ ಉಚಿತ ಪಲಾವ್‌ ವಿತರಣೆ ಮಾಡಿದ್ದಾರೆ.
Jan 22, 2024, 3:03 pm IST

ಗಣ್ಯರಿಗೆ ಅಯೋಧ್ಯೆ ಶ್ರೀರಾಮನ ದರ್ಶನ

ಗಣ್ಯರಿಗೆ ಅಯೋಧ್ಯೆ ಶ್ರೀರಾಮನ ದರ್ಶನ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಂಡಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ವಿಶೇಷ ಆಹ್ವಾನಿತರಿಗೆ ಇಂದು ಪ್ರಾಣ ಪ್ರತಿಷ್ಠಾಪನೆಗೊಂಡ ಶ್ರೀರಾಮಲಲ್ಲಾನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಾಧುಗಳು, ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಹಾಗೂ ಕ್ರೀಡಾ ಸಾಧಕರನ್ನು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.
Jan 22, 2024, 3:02 pm IST

ಬೆಂಗಳೂರಿನಲ್ಲಿ ಎಎಪಿಯಿಂದ ರಾಮ ಭಜನೆ

ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ಕೇಂದ್ರ ಕಾರ್ಯಾಲಯದಲ್ಲಿ ರಾಮ ಭಜನೆ ಹಾಗೂ ಸುಂದರ ಕಾಂಡ ಸ್ತೋತ್ರ ಪಠಣ ಕಾರ್ಯಕ್ರಮ ನಡೆಯಿತು. ಈ ವೇಳೆ ಪಕ್ಷದ ಮುಖಂಡರು, ನಾಯಕರು ಶ್ರದ್ಧಾಭಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಮನಿಗೆ ಪೂಜೆ ಸಲ್ಲಿಸಿದರು. ರಾಮನ ಭಜನೆ ಮತ್ತು ಸ್ತೋತ್ರವನ್ನು ಎಲ್ಲರೂ ಪಠಿಸುವ ಮೂಲಕ ಅಯೋಧ್ಯೆ ರಾಮನಿಗೆ ಪ್ರಾರ್ಥನೆ ಸಲ್ಲಿಸಿದರು.
Jan 22, 2024, 2:58 pm IST

ರಾಮ ಮಂದಿರದಿಂದ ತೆರಳಿದ ಪ್ರಧಾನಿ ನರೇಂದ್ರ ಮೋದಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಪಸ್‌ ಆಗಿದ್ದಾರೆ. ಸುಮಾರು ಐದು ಗಂಟೆಗಳ ಕಾಲ ಅಯೋಧ್ಯೆ ರಾಮಮಂದಿರದಲ್ಲಿ ಕಳೆದ ಪ್ರಧಾನಿ ಮೋದಿ, ರಾಮಮಂದಿರ ಉದ್ಘಾಟನೆಗೆ ಆಗಮಿಸಿದ ಗಣ್ಯರಿಗೆ ವಂದಿಸಿ ರಾಮ ಮಂದಿರದಿಂದ ತೆರಳಿದ್ದಾರೆ.
Jan 22, 2024, 2:40 pm IST

ram-mandir-pran-pratishtha-live
ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಚೆನ್ನೈನಲ್ಲಿ ಹಿರಿಯ ವೃದ್ಧೆಯೊಬ್ಬರು ರಾಮನ ಫೋಟೋಗೆ ಪೂಜೆ ಸಲ್ಲಿಸಿ ಭಕ್ತಿ ಮೆರೆದರು.
Jan 22, 2024, 2:36 pm IST

ಮಂತ್ರಾಲಯದಿಂದ ಬೃಹತ್ ಶೋಭಾಯಾತ್ರೆಗೆ ಚಾಲನೆ

ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಆಂಧ್ರಪ್ರದೇಶ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಮಠದಲ್ಲಿ ಬೃಹತ್‌ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದ್ದು ಶೋಭಾಯಾತ್ರೆಗೆ ಮುಸ್ಲಿಮರು ಚಾಲನೆ ನೀಡಿದರು. ಕೇಸರಿ ಧ್ವಜ ಹಾರಿಸುವ ಮೂಲಕ ಮುಸ್ಲಿಮರು ಚಾಲನೆ ನೀಡಿದರು. ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರಿಂದ ಭಾವೈಕ್ಯತೆ ಸಂದೇಶ ರವಾನೆ ಆಯಿತು.
Jan 22, 2024, 2:31 pm IST

ಇಂದು ನಮ್ಮ ರಾಮ ಬಂದಿದ್ದಾನೆ: ಪ್ರಧಾನಿ ಮೋದಿ

ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Jan 22, 2024, 2:14 pm IST

ram-mandir-pran-pratishtha-live
ಪ್ರಧಾನಿ ಮೋದಿಗೆ ರಾಮಮಂದಿರದ ಸ್ಮರಣಿಕೆ ಗಿಫ್ಟ್ ಕೊಟ್ಟ ಯೋಗಿ ಆದಿತ್ಯನಾಥ್‌
Jan 22, 2024, 2:10 pm IST

ಸೀತಾರಾಮ ಲಕ್ಷ್ಮಣ ದೇವಾಲಯ ಉದ್ಘಾಟಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
Jan 22, 2024, 2:07 pm IST

ಪ್ರಧಾನಿ ಮೋದಿಗೆ ರಾಮಮಂದಿರದ ಸ್ಮರಣಿಕೆ ಗಿಫ್ಟ್

ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿಯವರಿಗೆ ರಾಮಮಂದಿರದ ಪ್ರತಿಕೃತಿಯನ್ನು ಸಿಎಂ ಯೋಗಿ ಆದಿತ್ಯನಾಥ್ ಸ್ಮರಣಿಕೆಯಾಗಿ ನೀಡಿದರು. ಜೊತೆಗೆ, ವೇದಿಕೆಯಲ್ಲಿದ್ದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಸಿಎಂ ಯೋಗಿ ರಾಮಮಂದಿರದ ಮಾದರಿಯ ನೆನಪಿನ ಕಾಣಿಕೆಯನ್ನು ನೀಡಿದರು.
Jan 22, 2024, 2:04 pm IST

11 ದಿನ ಉಪವಾಸ ಅಂತ್ಯಗೊಳಿಸಿದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಉಪವಾಸ ಅಂತ್ಯಗೊಳಿಸಿದ್ದಾರೆ. 11 ದಿನಗಳಿಂದ ಕಠಿಣ ಉಪವಾಸ ಕೈಗೊಂಡಿದ್ದ ಮೋದಿ, ಇದೀಗ ರಾಮಲಲ್ಲಾನ ಎದುರು ಉಪವಾಸ ಅಂತ್ಯಗೊಳಿಸಿದರು.
Jan 22, 2024, 1:57 pm IST

ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭ; ಇದು ಭಾವನಾತ್ಮಕ ಕ್ಷಣ ಎಂದ ಮೋದಿ

ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಅಸಾಧಾರಣ ಮತ್ತು ಭಾವನಾತ್ಮಕ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Jan 22, 2024, 1:23 pm IST

ಅವನ ಪಾದಗಳು ನಮ್ಮ ಮೋಕ್ಷ-ನಟ ಕಿಚ್ಚ ಸುದೀಪ್‌

'ಅವನ ಭುಜಗಳು ನಮ್ಮ ಶಕ್ತಿ, ಅವನ ಎದೆ ನಮ್ಮ ಮಹತ್ವಾಕಾಂಕ್ಷೆ, ಅವನ ಕೈಗಳು ನಮ್ಮ ಶೌರ್ಯ, ಅವನ ಪಾದಗಳು ನಮ್ಮ ಮೋಕ್ಷ, ಅವನ ರೂಪದಲ್ಲಿ, ಎಲ್ಲಾ ಸೃಷ್ಟಿಯ ಸಾರ'ಎಂದು ಸ್ಯಾಂಡಲ್​​ವುಡ್​ ನಟ ಕಿಚ್ಚ ಸುದೀಪ್ ಶ್ರೀರಾಮನ ವರ್ಣನೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ನಟ ಸುದೀಪ್ 500 ವರ್ಷಗಳ ಕತ್ತಲೆಯ ನಂತರ ಒಂದು ರಾಷ್ಟ್ರದ ಜನರ, ಬೆಳಕಿನ ಪ್ರಾಣ-ಪ್ರತಿಷ್ಠೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Jan 22, 2024, 1:08 pm IST

ಮಗುವಿಗೆ ಶ್ರೀರಾಮ್ ಎಂದು ಹೆಸರಿಟ್ಟ ಚಿತ್ರದುರ್ಗದ ದಂಪತಿ

ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ಸಂಭ್ರಮಾಚರಣೆಯ ಮುಗಿಲು ಮುಟ್ಟಿತ್ತು. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳು ನಡೆದವು. ಅದರಂತೆ ಚಿತ್ರದುರ್ಗದಲ್ಲಿ ವಿಶೇಷ ಕಾರ್ಯಕ್ರಮವೊಂದು ನಡೆದಿದೆ. ಚಿತ್ರದುರ್ಗ ಗಾಂಧಿನಗರದ ಸಾಗರ್ ಹಾಗೂ ಭಾವನಾ ದಂಪತಿ ರಾಮಮಂದಿರ ಉದ್ಘಾಟನೆಗೊಂಡ ದಿನವೇ ತಮ್ಮ ಮಗುವಿಗೆ ನಾಮಕರಣ ಮಾಡಿದ್ದು, ಶ್ರೀರಾಮ್ ಎಂದು ಹೆಸರಿಟ್ಟಿದ್ದಾರೆ.
Jan 22, 2024, 12:39 pm IST

ಅಯೋಧ್ಯೆ ರಾಮೋತ್ಸವ: ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಂಪನ್ನ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಆಗಿದೆ. ಅರ್ಚಕರು ವೇದ-ಮಂತ್ರ ಪಠಿಸಿ ಮೂರ್ತಿಯೊಳಗೆ ದೇವರನ್ನು ಆವಾಹನೆ ಮಾಡಿದ್ದು, ಮೊದಲು ನೇತ್ರೋನ್ಮಿಲನ, ಚಿನ್ನದ ಸೂಜಿಯಿಂದ ಕಣ್ಣು ತೆರೆದು ಕನ್ನಡಿ, ಹಸು, ಹಣ್ಣು-ಹಂಪಲು ತೋರಿಸಿ ರಾಮನ ಮೂರ್ತಿಗೆ ನೈವೆೇದ್ಯ ನೀಡಿದ ಬಳಿಕ ಪ್ರಾಣ ಪ್ರತಿಷ್ಠಾಪನೆ ಪೂರ್ಣವಾಗಿದೆ.
Jan 22, 2024, 12:35 pm IST

ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ನೋಡಬೇಕೆಂಬ ಶತಕೋಟಿ ಭಕ್ತರ ಕಸನು ನನಸಾಗುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನಗೊಳ್ಳಲಿದೆ. ಈಗಾಗಲೇ ಪೂಜಾ ವಿಧಿವಿಧಾನಗಳು ನಡೆಯುತ್ತಿದ್ದು, ದೇಶದ ಕೋಟ್ಯಂತರ ರಾಮನ ಭಕ್ತರ ಚಿತ್ತ ಅಯೋಧ್ಯೆ ಮೇಲಿದೆ.
Jan 22, 2024, 12:28 pm IST

ಕೆಲವೇ ಕ್ಷಣಗಳಲ್ಲಿ ರಾಮನಿಗೆ ಪ್ರಾಣ ಪ್ರತಿಷ್ಠಾಪನೆ

ಕೆಲವೇ ಕ್ಷಣಗಳಲ್ಲಿ ರಾಮನಿಗೆ ಪ್ರಾಣ ಪ್ರತಿಷ್ಠಾಪನೆ
ಕೆಲವೇ ಕ್ಷಣಗಳಲ್ಲಿ ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು, ಗರ್ಭಗುಡಿಯಲ್ಲಿ ಐವರು ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌, ಸೇರಿದಂತೆ ಐವರು ಗಣ್ಯರು ಹಾಗೂ ಪ್ರಧಾನ ಅರ್ಚರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಸಂಪನ್ನಗೊಳ್ಳುತ್ತಿದೆ.
Jan 22, 2024, 12:20 pm IST

2,500 ಕ್ವಿಂಟಾಲ್ ಹೂಗಳಿಂದ ರಾಮಮಂದಿರ ಅಲಂಕಾರ

2,500 ಕ್ವಿಂಟಾಲ್ ಹೂಗಳಿಂದ ರಾಮಮಂದಿರ ಅಲಂಕಾರ
ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಗಲಿದೆ. ಸಂಪೂರ್ಣ ದೇಶದ ಚಿತ್ತ ಅಯೋಧ್ಯೆಯ ಮೇಲಿದೆ. ಇಂದು ಲೋಕಾರ್ಪಣೆಗೊಳ್ಳಲಿರುವ ಅಯೋಧ್ಯೆ ರಾಮ ಮಂದಿರವನ್ನು ಸುಮಾರು 2500 ಕ್ವಿಂಟಾಲ್​​ಗೂ ಹೆಚ್ಚು ಹೂವಿನಿಂದ ಅಲಂಕರಿಸಲಾಗಿದೆ.
Jan 22, 2024, 12:07 pm IST

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಪೂಜಾ ವಿಧಿವಿಧಾನಗಳು ಆರಂಭ

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಪೂಜಾ ವಿಧಿವಿಧಾನಗಳು ಆರಂಭ
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿವಿಧಾನಗಳು ಆರಂಭಗೊಂಡಿದೆ. 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌, ಉತ್ತರ ಪ್ರದೇಶ ರಾಜ್ಯಪಾಲರು ಸೇರಿದಂತೆ ಐವರು ಗಣ್ಯರಿಗೆ ಮಾತ್ರ ಗರ್ಭಗುಡಿಯಲ್ಲಿ ಅವಕಾಶ ನೀಡಲಾಗಿದೆ.
Jan 22, 2024, 12:01 pm IST

5,000ಕ್ಕೂ ಅಧಿಕ ದೀಪ ಬೆಳಗಲು ಸಿದ್ಧತೆ

5,000ಕ್ಕೂ ಅಧಿಕ ದೀಪ ಬೆಳಗಲು ಸಿದ್ಧತೆ
ಬೆಂಗಳೂರಿನ ವಿಜಯನಗರದ ಮಾರುತಿ ಮಂದಿರದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನೆರವೇರಿದ್ದು, ಭಕ್ತ ಸಾಗರ ಕಂಡು ಬಂತು. ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಸುಮಾರು 5,000ಕ್ಕೂ ಅಧಿಕ ದೀಪಗಳನ್ನು ಬೆಳಗಿಸಿ ಮಂದಿರದ ಆಡಳಿತ ಮಂಡಳಿ ಸಿದ್ದಗೊಂಡಿದೆ. ಭಕ್ತರು ದೀಪ ಬೆಳಗಿಸಲು ಕಾತುರರಾಗಿದ್ದಾರೆ.
Jan 22, 2024, 11:55 am IST

ರಾಮ ಮಂದಿರದಲ್ಲಿ ಪುಷ್ಪವೃಷ್ಟಿ

ಇನ್ನೇನು ಕೆಲವೇ ಕ್ಷಣದಲ್ಲಿ ಉದ್ಘಾಟನೆಗೊಳ್ಳಲಿರುವ ಅಯೋಧ್ಯೆ ರಾಮ ಮಂದಿರದ ಮೇಲೆ ಪುಷ್ಪವೃಷ್ಟಿ ಸುರಿಸಲಾಗಿದೆ. ಸಾವಿರಾರು ಭಕ್ತರು ಈ ಸುಂದರ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ. ದೇಶದಾದ್ಯಂತ ರಾಮನ ಜಪ ಜೋರಾಗಿದೆ.
Jan 22, 2024, 11:48 am IST

ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬದ ಸದಸ್ಯರಿಗೆ ಪ್ರತಾಪ್‌ ಸಿಂಹ ಸನ್ಮಾನ

ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬದ ಸದಸ್ಯರಿಗೆ ಪ್ರತಾಪ್‌ ಸಿಂಹ ಸನ್ಮಾನ
ದೇಶ ಎಲ್ಲೆಡೆ ರಾಮೋತ್ಸವದ ಸಂಭ್ರಮ ಮನೆ ಮಾಡಿದೆ. ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವ ಬಾಲರಾಮನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು. ಬಸವೇಶ್ವರ ವೃತ್ತದ ಬಳಿ ಇರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ನಿವಾಸಕ್ಕೆ ತೆರಳಿದ ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್.ಶ್ರೀವತ್ಸಹಾಗೂ ಬಿಜೆಪಿ ಮುಖಂಡರು, ಅರುಣ್ ಯೋಗಿರಾಜ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಪತ್ನಿ ವಿಜೇತ, ಅಣ್ಣ ಸೂರ್ಯಪ್ರಕಾಶ್ ಅವರಿಗೆ ಹೂಗುಚ್ಛ ನೀಡಿ ಗೌರವಿಸಿದರು.
Jan 22, 2024, 11:36 am IST

ರಾಮನೂರಿನಲ್ಲಿ ಕ್ರಿಕೆಟ್‌ ದೇವರು

ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಚಿನ್‌ ತೆಂಡೂಲ್ಕರ್‌ ಅಯೋಧ್ಯೆಗೆ ಆಗಮಿಸಿದ್ದಾರೆ. ಅಯೋಧ್ಯೆಯ ಬಾಲರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಭಾಗವಹಿಸಲಿದ್ದಾರೆ.
Jan 22, 2024, 11:22 am IST

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ: ರಾಮ ಮಂದಿರ ವೀಕ್ಷಣೆ ಆರಂಭ

ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಮ ಜನ್ಮಭೂಮಿಗೆ ಆಗಮಿಸಿದ್ದು, 12 ರವರೆಗೆ ರಾಮ ಮಂದಿರವನ್ನು ಸಂಪೂರ್ಣ ವೀಕ್ಷಣೆ ಮಾಡಲಿದ್ದಾರೆ. ಬಳಿಕ 12:05 ರಿಂದ 12:55 ರವರೆಗೆ ಸುಮಾರು 50 ನಿಮಿಷಗಳ ಕಾಲ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.
Jan 22, 2024, 11:11 am IST

ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಆರ್. ಟಿ. ನಗರದ ತಮ್ಮ ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+