Ramnavami clash: ಲಕ್ನೋ ರಾಮನವಮಿ ಮೆರವಣಿಗೆ ವೇಳೆ 2 ಗುಂಪುಗಳ ಘರ್ಷಣೆ, ಕಲ್ಲು ತೂರಾಟ!
ಲಕ್ನೋ ಮಾರ್ಚ್ 31: ರಾಮನವಮಿಯ ಶೋಭಾ ಯಾತ್ರೆಯ ವೇಳೆ ಉತ್ತರ ಪ್ರದೇಶದ ಲಕ್ನೋದ ಹಳ್ಳಿಯೊಂದರ ಶಾಹಿ ಮಸೀದಿ ಬಳಿ ಗುರುವಾರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಮೂಲಗಳ ಪ್ರಕಾರ, ಹೊಡೆದಾಟದಲ್ಲಿ ಕಲ್ಲು ತೂರಾಟ ಮತ್ತು ದೈಹಿಕ ಹಲ್ಲೆ ನಡೆದಿದೆ. ಜಾಂಕಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಡಿಯಾವ್ ಗ್ರಾಮದಲ್ಲಿ ಮಧ್ಯಾಹ್ನ 1.30ಕ್ಕೆ ಈ ಘಟನೆ ನಡೆದಿದೆ.
ಸುಮಿತ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಇತರ 10-15 ಜನರೊಂದಿಗೆ ಡಿಜೆಯಲ್ಲಿ ಮ್ಯೂಸಿಕ್ ನುಡಿಸಿದಾಗ ಎರಡು ಗುಂಪುಗಳ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ಮತ್ತೊಂದು ಗುಂಪು ಆಕ್ಷೇಪಿಸಿದ್ದು ಘರ್ಷಣೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಸುಮಾರು 10 ನಿಮಿಷಗಳ ಕಾಲ ನಡೆದ ವಿವಾದದಲ್ಲಿ ಎರಡೂ ಕಡೆಯವರು ಕಲ್ಲು ತೂರಾಟ, ದೈಹಿಕ ಹಲ್ಲೆ ಮತ್ತು ಆಸ್ತಿ ನಾಶದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ಗೊಂದಲದ ನಡುವೆ, ಡಿಜೆ ಕಾರ್ಟ್ಗೆ ಹಾನಿಯಾಗಿದೆ. ಮಾಹಿತಿ ತಿಳಿದ ಜಾಂಕಿಪುರಂ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಕಮಿಷನರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.
ಪೊಲೀಸ್ ಬಿಗಿ ಭದ್ರತೆ
ಘಟನೆಯ ಬಳಿಕ ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮೆರವಣಿಗೆಯಲ್ಲಿ ಅಧಿಕ ಜನ ಸೇರಿದ್ದರಿಂದ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಘರ್ಷಣೆಯಿಂದ ನೂಕುನುಗ್ಗಲು ನಡೆದಿದೆ ಎನ್ನಲಾಗುತ್ತಿದೆ. ಗುಂಪುಗಾರಿಕೆಯನ್ನು ನಿಷೇಧಿಸಲಾಗಿದೆ. ಹಲವರನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದ್ದಾರೆ.
ಡಿಸಿಪಿ ಖಾಸಿಂ ಅಬಿದಿ, "ಮೆರವಣಿಗೆಗೆ ಯಾವುದೇ ಅನುಮತಿಯನ್ನು ಪಡೆಯಲಾಗಿಲ್ಲ, ಹೀಗಾಗಿ ಎರಡೂ ಗುಂಪುಗಳಲ್ಲಿ ಕೆಲವರನ್ನು ಬಂಧಿಸಲಾಗಿದೆ. ಪ್ರದೇಶದಲ್ಲಿ ಯಾವುದೇ ಶಾಂತಿಗೆ ಭಂಗ ಉಂಟಾಗಿಲ್ಲ" ಎಂದು ಹೇಳಿದರು. ಪ್ರಮುಖವಾಗಿ, ಪೊಲೀಸರು ಮಸೀದಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ತಮ್ಮ ಪರಿಗಣನೆಗೆ ತೆಗೆದುಕೊಂಡಿದ್ದಾರೆ ಮತ್ತು ಸಂಗ್ರಹಿಸಿದ ದೃಶ್ಯಗಳ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಮೆರವಣಿಗೆ ನಡೆಸಲು ಅನುಮತಿ ಪಡೆದಿದ್ದೇವೆ ಎಂದು ಹಿಂದೂ ಗುಂಪು ಹೇಳಿಕೊಂಡರೂ ಮಾರ್ಗವಾಗಿ ಯಾರೂ ಕೂಡ ಶೋಭಾ ಯಾತ್ರೆಯನ್ನು ಕೈಗೊಂಡಿಲ್ಲ. ಯಾವುದೋ ಗುಂಪು ಮೆರವಣಿಗೆ ನಡೆಸುವ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದೆ ಎಂದು ಆ ಪ್ರದೇಶದ ಕೌನ್ಸಿಲರ್ ಚಾಂದ್ ಸಿದ್ದಿಕಿ ಹೇಳಿದ್ದಾರೆ. ಈ ಬಗ್ಗೆ ಸಿದ್ದಿಕಿ ಮಾತನಾಡಿ, ಯಾವುದೇ ಕಾರಣವಿಲ್ಲದೆ ಹಿಂದೂ ಗುಂಪು ಹಾಗೂ ಮಸೀದಿಯ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಮನವಮಿ ವೇಳೆ ಹಲವೆಡೆ ಘರ್ಷಣೆ
ಜಂಕಿಪುರಂ ಪೊಲೀಸ್ ಠಾಣೆಯ ಪೊಲೀಸರು ಡಿಜೆ ಬಾಕ್ಸ್ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಘಟನೆಯ ನಂತರ ಹಿಂದೂ ಸಮುದಾಯದ ಜನರ ಗುಂಪು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿತು.
ಗುರುವಾರ ವಿವಿಧ ರಾಜ್ಯಗಳಲ್ಲಿ ಹಿಂಸಾಚಾರದ ಘಟನೆಗಳು ರಾಮನವಮಿ ಆಚರಣೆಯನ್ನು ಹಾಳುಮಾಡಿವೆ. ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಎರಡು ಗುಂಪುಗಳು ಘರ್ಷಣೆಗೊಂಡು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆದಿದೆ. ಜೊತೆಗೆ ಗುಜರಾತ್ನ ವಡೋದರಾ ನಗರದಲ್ಲಿ ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಹಲವೆಡೆ ಹಾರಿಸಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications