ಜೈಲಿನಲ್ಲೂ ರಾಮ್ ರಹೀಮ್ ಐಷಾರಾಮಿ ಬದುಕು ನಡೆಸುತ್ತಿದ್ದಾನಾ!?
Recommended Video

ರೋಹ್ಟಕ್, ನವೆಂಬರ್ 14: ಡೇರಾ ಸಚ್ಚಾ ಸೌದದ ಮುಖ್ಯಸ್ಥ, ಅತ್ಯಾಚಾರಿ ರಾಮ್ ರಹೀಮ್ ಸಿಂಗ್ ಗೆ ರೋಹ್ಟಕ್ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಸಿಕ್ಕುತ್ತಿದೆಯಾ? ಇತ್ತೀಚೆಗೆ ತಾನೇ ಜಾಮೀನಿನ ಮೇಲೆ ಬಿಡುಗಡೆಯಾದ ರಾಹುಲ್ ಜೈನ್ ಎಂಬ ಕೈದಿ ಎನ್ನುವವರು ಹೇಳುವ ಪ್ರಕಾರ, ಜೈಲಿನ ಅಧಿಕಾರಿಗಳು ಉಳಿದ ಕೈದಿಗಳನ್ನು ನೋಡುವಂತೆ ರಾಮ್ ರಹೀಮ್ ರನ್ನು ನೋಡುತ್ತಿಲ್ಲ. ಅವರಿಗೆ ಬೇರೆಯದೇ ರೀತಿಯ 'ಟ್ರೀಟ್ ಮೆಂಟ್' ಸಿಕ್ಕುತ್ತಿದೆ!(ಚಿತ್ರಕೃಪೆ: ಎಎನ್ ಐ)
"ರಾಮ್ ರಹೀಮ್ ಜೈಲಿಗೆ ಬಂದ ನಂತರ ಇಲ್ಲಿನ ನೀತಿ-ನಿಯಮಗಳೇ ಬದಲಾಗಿವೆ. ಅವರನ್ನು ಇರಿಸಿರುವ ಸೆಲ್ ಗೆ ಯಾರನ್ನೂ ಬಿಡುತ್ತಿಲ್ಲ. ಬೇರೆ ಕೈದಿಗಳ್ಯಾರೂ ಅವರನ್ನು ಇದುವರೆಗೂ ನೋಡಿಯೇ ಇಲ್ಲ. ಅವರಿಗಾಗಿಯೇ ಐಷಾರಾಮಿ ವಾಹನವೊಂದರಲ್ಲಿ ಊಟ ಬರುತ್ತದೆ. ಅವರನ್ನು ನೋಡುವುದಕ್ಕೆಂದು ಬರುವವರಿಗೆ 2 ಗಂಟೆಯವರೆಗೂ ಸಮಯ ನೀಡುತ್ತಾರೆ. ಆದರೆ ನಮ್ಮಂಥ ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಯಾರಾದರೂ ಬಂದರೆ ಇಪ್ಪತ್ತು ನಿಮಿಷಕ್ಕಿಂತ ಹೆಚ್ಚು ಸಮಯ ನೀಡುವುದಿಲ್ಲ" ಎಂದು ಅವರು ಆರೋಪಿಸಿದ್ದಾರೆ.

"ಬಾಬಾ ಜೈಲಿಗೆ ಬಂದ ಮೇಲೆ ಉಳಿದ ಕೈದಿಗಳಿಗೆ ನೀಡುತ್ತಿದ್ದ ಮೂಲಭೂತ ವಸ್ತುಗಳ ಪೂರೈಕೆಯೂ ಕಡಿಮೆಯಾಗಿತ್ತು. ನಂತರ ಅಶೋಕ್ ಎಂಬ ಖೈದಿ ಈ ಬಗ್ಗೆ ಜಡ್ಜ್ ವೊಬ್ಬರನ್ನು ಸಂಪರ್ಕಿಸಿ, ವಿಷಯ ತಿಳಿಸಿದಾಗ ಪರಿಸ್ಥಿತಿ ಸರಿಹೋಯಿತು. ನಮಗೆ ನೀಡುತ್ತಿದ್ದ ಆಹಾರದಲ್ಲೂ ಬದಲಾವಣೆಗಳಾಗಿವೆ. ಎಲ್ಲವೂ ರಾಮ್ ರಹೀಮ್ ಅಗತ್ಯಕ್ಕೆ ತಕ್ಕಂತೆ ಮಾರ್ಪಾಡಾಗುತ್ತಿವೆ" ಎಂದು ರಾಹುಲ್ ಜೈನ್ ದೂರಿದ್ದಾರೆ.
"ಜೈಲಿನಲ್ಲಿರುವ ಎಲ್ಲ ಕೈದಿಗಳೂ ತಮಗೆ ಜೈಲು ಅಧಿಕಾರಿ ವಹಿಸಿದ ಕೆಲಸ ಮಾಡಬೇಕಾಗುತ್ತದೆ. ಆದರೆ ರಾಮ್ ರಹೀಮ್ ಸೆಲ್ ನಿಂದ ಆಚೆಯೇ ಬರುತ್ತಿಲ್ಲ. ಅವರು ತಮ್ಮ ಸೆಲ್ ನಲ್ಲಿಯೇ ಕೆಲಸ ಮಾಡುತ್ತಿದ್ದಾರೆ ಎಂದು ಜೈಲು ಅಧಿಕಾರಿಗಳು ಹೇಳುತ್ತಾರೆ" ಎಂದು ಸಹ ಅವರು ಹೇಳಿದ್ದಾರೆ.

ಬೆಂಗಳೂರು ಪರಪ್ಪನ ಅಗ್ರಹಾರದಲ್ಲೂ, ಎಐಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಅವರಿಗೆ ಶ ರಾಜೋಪಚಾರ ಸಿಕ್ಕುತ್ತಿದೆ ಎಂಬುದು ಕೆಲ ತಿಂಗಳ ಹಿಂದಷ್ಟೇ ವಿವಾದ ಸೃಷ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಜೈಲುಗಳಲ್ಲೂ ಆರಂಭವಾಗಿರುವ ವಿಐಪಿ ಸಂಸ್ಕೃತಿಯನ್ನು ತಡೆಯುವ ಅಗತ್ಯವಿದೆ ಎಂಬುದನ್ನು ರಾಹುಲ್ ಜೈನ್ ಮಾತು ಪುಷ್ಟೀಕರಿಸಿದೆ.
ಆಗಸ್ಟ್ 25 ರಂದು ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ನನ್ನು ಸಿಬಿಐ ವಿಶೇಷ ನ್ಯಾಯಾಲಯ ತಪ್ಪಿತಸ್ಥ ಎಂದು ಘೋಷಿಸಿ, ನಂತರ 2 ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಖಂಡಿಸಿ ಹರ್ಯಾಣದ ಪಂಚಕುಲದಲ್ಲಿ ನಡೆದ ಗಲಭೆಯಲ್ಲಿ 41 ಜನ ಮೃತಪಟ್ಟಿದ್ದರೆ, 250 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications