ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ
ನವದೆಹಲಿ, ಜ. 05: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು 2024ರ ಜನವರಿ 1 ರಂದು ಉದ್ಘಾಟಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ತ್ರಿಪುರಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
2024 ರಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಇದೇ ವೇಳೆ ದೇವಾಲಯದ ಉದ್ಘಾಟನೆ ಕೂಡ ನಡೆಯುವುದರಿಂದ ಆಡಳಿತಾರೂಢ ಬಿಜೆಪಿಗೆ ಒಂದು ಮೈಲಿಗಲ್ಲು ಎಂದು ನಿರೀಕ್ಷಿಸಲಾಗಿದೆ.
1990 ರ ದಶಕದಲ್ಲಿ ಬಿಜೆಪಿಯ ಜನಪ್ರಿಯತೆಯ ಏರಿಕೆಗೆ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹೋರಾಟ ಕೂಡ ದೊಡ್ಡ ಕೊಡುಗೆ ನೀಡಿದೆ. ಇದನ್ನೇ 2024 ರ ಚುನಾವಣೆಯಲ್ಲಿ ಬಳಸಿಕೊಳ್ಳಲು ಬಿಜೆಪಿ ಯೋಜಿಸುತ್ತಿದೆ.

"ಕಾಂಗ್ರೆಸ್ ಆಡಳಿತದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡ್ಡಿಯಾಯಿತು.ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರದ ನಿರ್ಮಾಣವನ್ನು ಪ್ರಾರಂಭಿಸಿದರು" ಎಂದು ಅಮಿತ್ ಶಾ ಹೇಳಿದರು.
ನವೆಂಬರ್ನಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂದಿರದ ನಿರ್ಮಾಣವು ಅರ್ಧದಷ್ಟು ಹಂತವನ್ನು ಮುಗಿಸಿದೆ. ಹೀಗಾಗಿ ಈ ವರ್ಷ ಡಿಸೆಂಬರ್ಗೆ ಸಿದ್ಧವಾಗಲಿದೆ ಎಂದು ಹೇಳಿದ್ದರು.
ದಶಕಗಳಿಂದ ರಾಮಮಂದಿರ ನಿರ್ಮಾಣ ಕಾನೂನು ವಿವಾದದಲ್ಲಿ ಸಿಲುಕಿತ್ತು. ಸುಪ್ರೀಂ ಕೋರ್ಟ್ ಆಗಸ್ಟ್ 2020 ರಲ್ಲಿ ದೇವಸ್ಥಾನದ ಪರ ತೀರ್ಪು ನೀಡಿದ ನಂತರ ನಿರ್ಮಾಣ ಕಾರ್ಯ ಪ್ರಾರಂಭವಾಯಿತು. ದೇವಾಲಯ ನಿರ್ಮಾಣದ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5 ರಂದು ನೆರವೇರಿಸಿದ್ದರು.
ಪೂರ್ಣಗೊಂಡಿರುವ ದೇವಾಲಯವು ನೆಲ ಅಂತಸ್ತಿನಲ್ಲಿ 160 ಆವರಣಗಳನ್ನು, ಮೊದಲ ಮಹಡಿಯಲ್ಲಿ 132 ಆವರಣಗಳನ್ನು ಮತ್ತು ಎರಡನೇ ಮಹಡಿಯಲ್ಲಿ 74 ಆವರಣಗಳನ್ನು ಹೊಂದಿರುತ್ತದೆ. ಐದು ಮಂಟಪಗಳು ಇರುತ್ತವೆ. ಮೈದಾನದಲ್ಲಿ ಯಾತ್ರಿಕರ ಸೌಕರ್ಯ ಕೇಂದ್ರ, ವಸ್ತುಸಂಗ್ರಹಾಲಯ, ದಾಖಲೆಗಳು, ಸಂಶೋಧನಾ ಕೇಂದ್ರ, ಸಭಾಂಗಣ, ಗೋಶಾಲೆ, ಆಡಳಿತ ಕಟ್ಟಡ ಮತ್ತು ಅರ್ಚಕರಿಗೆ ಕೊಠಡಿಗಳು ಇರುತ್ತವೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications