ರಾಮ ಮಂದಿರ ಬಿಕ್ಕಟ್ಟು: ರವಿಶಂಕರ್-ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ಭೇಟಿ
ಬೆಂಗಳೂರು, ಅಕ್ಟೋಬರ್ 31: ರಾಮ ಮಂದಿರ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಇಂದು ನಗರದ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿ ಮುಖ್ಯಸ್ಥ ವಾಸಿಮ್ ರಿಜ್ವಿ ಭೇಟಿ ನೀಡಿ ಶ್ರೀ ಶ್ರೀ ರವಿಶಂಕರ್ ಜತೆ ಚರ್ಚೆ ನಡೆಸಿದರು.
ನಂತರ ಮಾಧ್ಯಮಗಳ ಜತೆ ಮಾತನಾಡಿದ ವಾಸಿಮ್ ರಿಜ್ವಿ, "ಶ್ರೀ ಶ್ರೀ ರವಿಶಂಕರ್ ರನ್ನು ಇಡೀ ದೇಶವೇ ಗೌರವಿಸುತ್ತದೆ. ಈ ಸಮಸ್ಯೆ ಶೀಘ್ರ ಬಗೆಹರಿಯುತ್ತದೆ ಎಂಬ ಭರವಸೆ ತಮಗಿದೆ," ಎಂದು ಹೇಳಿದ್ದಾರೆ.

ಯಾರಿಗೆಲ್ಲಾ ಒಪ್ಪಂದ ಬೇಕೋ ಅವರ ಜತೆಗೆ ಮಾತ್ರ ಮಾತುಕತೆ ನಡೆಸಬೇಕು ಎಂದು ಶ್ರೀ ಶ್ರೀ ರವಿಶಂಕರ್ ರ ಬಳಿಯಲ್ಲಿ ತಾವು ಮನವಿ ಮಾಡಿಕೊಂಡಿರುವುದಾಗಿ ವಾಸಿಮ್ ರಿಜ್ವಿ ಹೇಳಿದ್ದಾರೆ.

ಸೋಮವಾರವಷ್ಟೇ ಆಯೋಧ್ಯೆ ಬಿಕ್ಕಟ್ಟಿಗೆ ಸಂಧಾನ ನಡೆಸಲು ಶ್ರೀ ಶ್ರೀ ರವಿಶಂಕರ್ ಸೂಕ್ತ ವ್ಯಕ್ತಿಯಲ್ಲ ಎಂದು ಬಿಜೆಪಿ ಮಾಜಿ ಸಂಸದ ರಾಮ್ ವಿಲಾಸ್ ವೇದಾಂತಿ ಹೇಳಿಕೆ ನೀಡಿದ್ದರು. ಇದರಿಂದ ಶ್ರೀ ಶ್ರೀ ರವಿಶಂಕರ್ ಸಂಧಾನ ಯತ್ನಕ್ಕೆ ಹಿನ್ನಡೆ ಉಂಟಾಗಿತ್ತು.
More From
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications