"ಬಿಜೆಪಿ ಅಧಿಕಾರ ಅವಧಿಯಲ್ಲೇ ರಾಮಮಂದಿರ ನಿರ್ಮಾಣ"
ಲಕ್ನೋ, ಜೂ.7: ವಿವಾದಿತ ಬಿಜೆಪಿ ಸಂಸದ ಸಾಕ್ಷಿ ಮಹರಾಜ್ ಅವರು ಭಾನುವಾರ ಮತ್ತೊಮ್ಮೆ ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವಾಗಲೇ ಶ್ರೀರಾಮಚಂದ್ರನ ದೇಗುಲ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಉನ್ನಾವೊ ಕ್ಷೇತ್ರದ ಸಂಸದ ಸಾಕ್ಷಿ ಅವರು ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ,, ಬಿಜೆಪಿ ಕಾಲದಲ್ಲೇ ಮಂದಿರ ನಿರ್ಮಾಣವಾಗಲಿದೆ. ಕಾಂಗ್ರೆಸ್ ಅಥವಾ ಸಮಾಜವಾದಿ ಮುಲಾಯಂ, ಬಹುಜನ ಸಮಾಜವಾದಿ ಮಾಯಾವತಿ ನೆರವು ದೇಗುಲ ಕಟ್ಟಲು ಸಾಧ್ಯವೇ? ನಮ್ಮ ಗುರಿ ಸ್ಪಷ್ಟವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಈಗ ಒಂದು ವರ್ಷ ಆಗಿದೆ ಅಷ್ಟೇ. ಇನ್ನೂ ನಾಲ್ಕು ವರ್ಷ ಕಾಲಾವಕಾಶ ಇದೆ' ಎಂದರು.

'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗದಿದ್ದರೆ ನರೇಂದ್ರ ಮೋದಿ ಸರ್ಕಾರ ಅಧಿಕಾರ ಕಳೆದುಕೊಳ್ಳಬೇಕಾದೀತು' ಎಂದು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ಸಂದೇಶ ನೀಡಿದ ಬೆನ್ನಲ್ಲೇ ಬಿಜೆಪಿ ಸಂಸದ ಸಾಕ್ಷಿ ಅವರು ಈ ರೀತಿ ಉತ್ತರಿಸಿದ್ದಾರೆ.
ಕೇವಲ ಅಭಿವೃದ್ಧಿ ಮಂತ್ರದಿಂದಾಗಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಇನ್ನೂ ಹಲವು ಪ್ರಮುಖ ವಿಚಾರಗಳ ಬಗ್ಗೆ ಭರವಸೆಯಿತ್ತು ಅಧಿಕಾರ ಪಡೆದಿದೆ. ಅದರಲ್ಲಿ ರಾಮ ಮಂದಿರ ನಿರ್ಮಾಣವೂ ಒಂದು. ಈಗ ಅದನ್ನು ನಿರ್ಲಕ್ಷಿಸಿದರೆ ವಾಜಪೇಯಿ ಸರ್ಕಾರಕ್ಕಾದ ಗತಿಯೇ ಆದೀತು ಎಂದು ವಿಎಚ್ಪಿಯ ವಕ್ತಾರ ಸುರೇಂದ್ರ ಜೈನ್ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಸಾಧು ಮತ್ತು ಆಧ್ಯಾತ್ಮ ಗುರುಗಳೊಂದಿಗೆ ಸಭೆ ಸೇರಿ ಪ್ರಧಾನಿಯವರನ್ನು ಮಂದಿರ ನಿರ್ಮಾಣಕ್ಕೆ ಒತ್ತಾಯಿಸಲಾಗುವುದು. ನಾವು ಬಾಬರ್ ಪರ ನಿಲ್ಲಲು ಹೇಗೆ ಸಾಧ್ಯ? ದೇಶದ ಮೇಲೆ ದಾಳಿ ಮಾಡಿದವರ ಪರ ನಿಲ್ಲುವುದು ಯಾವುದೇ ದೇಶಭಕ್ತನ ಕೆಲಸವಲ್ಲ, ರಾಮ ಮಂದಿರ ನಿರ್ಮಾಣ ಮಾಡಲು ಬಿಜೆಪಿ ಹಿಂದೇಟು ಹಾಕಿದರೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರಕ್ಕೆ ಆದ ಗತಿಯೇ ಮೋದಿ ಸರ್ಕಾರಕ್ಕೂ ಆಗಲಿದೆ ಎಂದು ವಿಎಚ್ಪಿಯ ವಕ್ತಾರ ಸುರೇಂದ್ರ ಜೈನ್ ಸರ್ಕಾರವನ್ನು ಎಚ್ಚರಿಸಿದ್ದರು. (ಪಿಟಿಐ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications