ಸುಪ್ರೀಂ ಕೋರ್ಟ್ ನಮ್ದೇ, ನ್ಯಾಯಾಂಗವೂ ನಮ್ದೇ ಎಂದ ಉ.ಪ್ರ ಸಚಿವ
"ಸುಪ್ರೀಂ ಕೋರ್ಟ್ ನಮ್ಮದು, ಹೌದಲ್ಲವಾ? ನ್ಯಾಯಾಂಗವು ನಮ್ಮದು, ದೇಶವೂ ನಮ್ಮದು ಮತ್ತು ದೇವಾಲಯವೂ ನಮ್ಮದೇ" ಎಂಬ ಉತ್ತರಪ್ರದೇಶದ ಸಚಿವ ಮುಕುಟ್ ಬಿಹಾರಿ ವರ್ಮಾ ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ವರ್ಮಾ ಅವರು ನಾಲ್ಕು ಬಾರಿ ಬಿಜೆಪಿಯಿಂದ ಆಯ್ಕೆಯಾದವರು ಹಾಗೂ ಸದ್ಯಕ್ಕೆ ಸಹಕಾರ ಸಚಿವರು.
ಮಂದಿರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ ತೀರ್ಪು ಬಾಕಿಯಿದೆಯಲ್ಲಾ ಎಂಬ ಪತ್ರಕರ್ತರ ಪ್ರಶ್ನೆಗೆ ಶನಿವಾರ ಉತ್ತರಿಸಿದ ಮುಕುಟ್, ಸುಪ್ರೀಂ ಕೋರ್ಟ್ ನಮ್ಮದೇ ಇತ್ಯಾದಿಯಾಗಿ ಉತ್ತರಿಸಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಮತ ಧ್ರುವೀಕರಣಕ್ಕಾಗಿ ಇಂತಹ ಹೇಳಿಕೆ ನೀಡಲಾಗುತ್ತಿದೆ ಎಂದು ವಿಪಕ್ಷಗಳು ಅಭಿಪ್ರಾಯ ಪಟ್ಟಿವೆ.
ಮಾಧ್ಯಮದಿಂದ ಸಚಿವರನ್ನು ಮತ್ತೊಮ್ಮೆ ಪ್ರಶ್ನೆ ಮಾಡಿದಾಗ, ನಾನು ಹೇಳಿದ ರೀತಿ ಬೇರೆ. ಆದರೆ ಅದು ತಲುಪಿದ್ದು ಬೇರೆ ರೀತಿಯಲ್ಲಿ ಎಂದವರೇ, ತಾವು ಆ ಹಿಂದೆ ಹೇಳಿದ ಹೇಳಿಕೆಯನ್ನೇ ಪುನರುಚ್ಚರಿಸಿದ್ದಾರೆ.

"ಸುಪ್ರೀಂ ಕೋರ್ಟ್ ಕೂಡ ದೇಶದ ಭಾಗವೇ ಮತ್ತು ಅದು ನಮಗೆ ಸೇರಿದ್ದು. ಆದ್ದರಿಂದ ಅಯೋಧ್ಯಾದಲ್ಲಿ ಮಂದಿರ ನಿರ್ಮಾಣ ಆಗುವುದು ಖಚಿತ" ಎಂದಷ್ಟೇ ಹೇಳಿದ್ದಾಗಿ ಮುಕುಟ್ ಸಮಜಾಯಿಷಿ ನೀಡಿದ್ದಾರೆ. ನಾನು ಏನು ತಪ್ಪಾಗಿ ಹೇಳಿದೆ? ಈ ದೇಶ ನಮ್ಮದಾದ ಮೇಲೆ ಸುಪ್ರೀಂ ಕೋರ್ಟ್ ಮತ್ತೆಲ್ಲವೂ... ಎಂದಿದ್ದಾರೆ.
ಮುಕುಟ್ ಜತೆಗೆ ಇದ್ದ ಉತ್ತರಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ, ಈ ವಿವಾದದ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದಿದ್ದಾರೆ.
ಉತ್ತರಪ್ರದೇಶದಲ್ಲಿ ಸಚಿವರಿಗೆ ಕಾನೂನಿನ ಬಗ್ಗೆ ಇರುವ ಅಗೌರವ ಹಾಗೂ ಅಹಂಕಾರವನ್ನು ಇದು ತೋರಿಸುತ್ತದೆ ಎಂದು ವಿಪಕ್ಷಗಳಾದ ಎಸ್ ಪಿ, ಕಾಂಗ್ರೆಸ್ ಇತರ ಪಕ್ಷಗಳು ಟೀಕಿಸಿವೆ.
ಒಂದು ವೇಳೆ ಮಂದಿರದ ವಿಚಾರ ಕೋರ್ಟ್ ನಲ್ಲಿ ಇತ್ಯರ್ಥ ಆಗದಿದ್ದರೆ ಕೇಂದ್ರ ಸರಕಾರದಿಂದ ರಾಮಮಂದಿರಕ್ಕಾಗಿ ಕಾನೂನೇ ತರಲು ಪ್ರಯತ್ನಿಸಲಾಗುವುದು ಎಂದು ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕಳೆದ ತಿಂಗಳು ಹೇಳಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications