Bakrid: ಬಕ್ರೀದ್ಗೆ ಬಲಿ ಕೊಡುವ ಕುರಿ ಮೇಲೆ ರಾಮನ ಹೆಸರು- ಮಟನ್ ಅಂಗಡಿ ಮಾಲೀಕ ಬಂಧನ
ಬಕ್ರೀದ್ಗೆ ಬಲಿ ಕೊಡುವ ಕುರಿ ಮೇಲೆ ಶ್ರೀರಾಮನ ಹೆಸರು ಬರೆದ ವಿಚಿತ್ರ ಘಟನೆ ಮಹಾರಾಷ್ಟ್ರದ ನವಿ ಮುಂಬೈನ ಸಿಬಿಡಿ ಬೇಲಾಪುರ ಪ್ರದೇಶದಲ್ಲಿ ನಡೆದಿದೆ.
ಬಲಿ ಕೊಟ್ಟ ಕುರಿ ಮೇಲೆ ರಾಮನ ಹೆಸರು ಬರೆದಿದ್ದರಿಂದ ಹಿಂದೂಗಳ ಭಾವನೆಗೆ ದಕ್ಕೆ ತರುವಂತಹ ಘಟನೆ ನಡೆದಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಎದುರು ಹಿಂದೂ ಸಂಘಟನೆಯವರು ಪ್ರತಿಭಟನೆಗೆ ಮುಂದಾಗಿದ್ದರು. ವಿಷಯ ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮಟನ್ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ.

ಬೇಲಾಪುರ ಪ್ರದೇಶದಲ್ಲಿ ರಾಮನ ಹೆಸರು ಬರೆದು ಕುರಿ ಮಾರುವ ಯತ್ನ ನಡೆದಿದೆ. ಈ ಮೇಕೆ ಬಲಿ ಕೊಡಲು ಯೋಜನೆ ರೂಪಿಸಲಾಗಿತ್ತು. ಆದರೆ ಅದಕ್ಕೂ ಮುನ್ನವೇ ಹಿಂದೂ ಸಂಘಟನೆಯವರಿಗೆ ಈ ಬಗ್ಗೆ ಮಾಹಿತಿ ಸಿಕ್ಕಿದ್ದು, ಬಳಿಕ ಠಾಣೆಯ ಹೊರಗೆ ಗಲಾಟೆ ಮಾಡಿದ್ದಾರೆ. ವಿಷಯ ಉಲ್ಬಣಗೊಳ್ಳುತ್ತಿರುವುದನ್ನು ನೋಡಿದ ನವಿ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿ, ಮಟನ್ ಅಂಗಡಿಯ ಮಾಲೀಕರನ್ನು ಬಂಧಿಸಿದ್ದಾರೆ.
Mumbai Police have filed a complaint against the owner of meat shop after a video showing a goat with the name 'RAM' written on its skin in yellow color went viral ahead of Bakrid.
— SK Chakraborty (@sanjoychakra) June 16, 2024
Goodluck Goat Meat Shop, Navi Mumbai.
Clear act of incitement.
Goat painted with word "Ram"… pic.twitter.com/eYdWZDnkUl
'ರಾಮ'ನ ಹೆಸರು ಬರೆದ ಕುರಿ ಬಲಿ!
ಪ್ರಾಥಮಿಕ ಮಾಹಿತಿಯ ಪ್ರಕಾರ, ನವಿ ಮುಂಬೈನ ಸಿಬಿಡಿ ಸೆಕ್ಟರ್ ಒಂದರ ಗುಡ್ಲಕ್ ಮಟನ್ ಶಾಪ್ನಲ್ಲಿ ರಾಮನ ಹೆಸರನ್ನು ಬರೆದ ಕುರಿಯನ್ನು ಮಾರಾಟಕ್ಕೆ ಇಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿಯ ಹಲವು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಂಗಡಿ ಮಾಲೀಕರನ್ನು ವಶಕ್ಕೆ ಪಡೆದಿದ್ದಾರೆ.
ಜೂನ್ 17 ರಂದು ಮುಸ್ಲಿಮರ ಹಬ್ಬ ಬಕ್ರೀದ್ ಆಚರಿಸಲಾಯಿತು. ಈ ದಿನ ಪ್ರಾಣಿಗಳನ್ನು ಬಲಿಕೊಡಲಾಗುತ್ತದೆ. ಪ್ರವಾದಿ ಇಬ್ರಾಹಿಂ ದೇವರ ವಿಧೇಯತೆಯನ್ನು ಸ್ಮರಿಸಲು ಬಕ್ರೀದ್ ಆಚರಿಸಲಾಗುತ್ತದೆ.

ಮೇಕೆಗಳನ್ನು ಮನೆಗೆ ತರುವುದನ್ನು ವಿರೋಧಿಸಿ ಪ್ರತಿಭಟನೆ!
ಕಳೆದ ವರ್ಷ 2023ರಲ್ಲಿ ಮುಂಬೈನ ಮೀರಾ ರೋಡ್ ಪ್ರದೇಶದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿತ್ತು. ಅಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ವಸತಿ ಸಮುಚ್ಚಯದಲ್ಲಿ ಬಲಿ ಕೊಡಲು ಮೇಕೆಗಳನ್ನು ತಂದಿದ್ದನು. ಇದು ಅಲ್ಲಿ ನೆಲೆಸಿರುವ ಹಿಂದೂಗಳಿಗೆ ಜನತೆಗೆ ಇಷ್ಟವಾಗದೆ ಪ್ರತಿಭಟನೆಗೆ ಮುಂದಾದರು.
ಹನುಮಾನ್ ಚಾಲೀಸಾ ಪಠಣ ಮಾಡಿ ಜೈ ಶ್ರೀರಾಮ್ ಘೋಷಣೆ ಕೂಗಿದರು. ಯಾವುದೇ ಪ್ರಾಣಿಯನ್ನು ಆವರಣದೊಳಗೆ ತರಬಾರದು ಎಂಬ ನಿಯಮವಿದೆ ಎಂದು ಜನರು ಪಟ್ಟುಹಿಡಿದರು. ಬಲಿ ಕೊಡಲು ತಂದ ಮೇಕೆಗಳನ್ನು ಹೊರಗೆ ಬಲಿ ಕೊಡಲಿ ಸಮುಚ್ಚಾಯಗಳಿಗೆ ತರುವುದು ಬೇಡ ಎಂದು ಆಗ್ರಹಿಸಿದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications