Get Updates
Get notified of breaking news, exclusive insights, and must-see stories!

Ramayana video viral: ನೋಯ್ಡಾ ಬಾರ್‌ನಲ್ಲಿ ರಾಮಾಯಣ ವಿಡಿಯೋ ಪ್ರಸಾರ: ರೆಸ್ಟೊ-ಬಾರ್‌ಗೆ ಬೆದರಿಕೆ

ನೋಯ್ಡಾ ಏಪ್ರಿಲ್ 11: ರೆಸ್ಟೋ ಬಾರ್‌ನಲ್ಲಿ ಡಬ್ ಮಾಡಿದ ರಾಮಾಯಣ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ನೋಯ್ಡಾದಲ್ಲಿ ಟಿವಿ ಧಾರಾವಾಹಿ ರಾಮಾಯಣವನ್ನು ಡಬ್ ಮಾಡಿ ಆ ವಿಡಿಯೊವನ್ನು ಬಾರ್‌ನಲ್ಲಿ ಪ್ರಸಾರ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕಿಡಿಕೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೆಸ್ಟೋ ಬಾರ್‌ನ ದೊಡ್ಡ ಪರದೆಯ ಮೇಲೆ ರಾಮಾಯಣದ ದೃಶ್ಯಗಳನ್ನು ಪ್ರಸಾರ ಮಾಡಲಾಗಿದೆ. ಇದನ್ನು ಪ್ರಸಾರ ಮಾಡಿದ ನಂತರ ರೆಸ್ಟ್ರೋ-ಬಾರ್‌ನ ಸಹ-ಮಾಲೀಕ ಮತ್ತು ಅದರ ವ್ಯವಸ್ಥಾಪಕರನ್ನು ಸೋಮವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ramayana video broadcast in Noida bar: Threat to resto-bar

ಧಾರಾವಾಹಿಯ ಡಬ್ಬಿಂಗ್ ವಿಡಿಯೊದ ಕಿರು ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಹಲವಾರು ಇಂಟರ್ನೆಟ್ ಬಳಕೆದಾರರು ಅದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಪೊಲೀಸರು ತಾವಾಗಿಯೇ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ರಾಮಾಯಣದ ರಾಮ ಮತ್ತು ರಾಕ್ಷಸ ರಾಜ ರಾವಣನ ಪಾತ್ರಗಳನ್ನು ಆಧುನಿಕ ಸಂಗೀತವನ್ನು ಪ್ಲೇ ಮಾಡಲಾಗಿದೆ. ಇದು ಕೆಲವು ಸಾಮಾಜಿಕ ಮಾಧ್ಯಮ ವೈರಲ್ ಆದ ಬಳಿಕ ರೆಸ್ಟೋ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾತನಾಡಿದ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೋಯ್ಡಾ) ಶಕ್ತಿ ಮೋಹನ್ ಅವಸ್ತಿ ಅವರು, 'ಸೋಶಿಯಲ್ ಮೀಡಿಯಾದಲ್ಲಿ ಸೋಮವಾರ ಬೆಳಿಗ್ಗೆ ವಿಡಿಯೊ ವೈರಲ್ ಆಗಿದೆ. ಈ ವಿಡಿಯೋವನ್ನು ಗಾರ್ಡನ್ ಗ್ಯಾಲೇರಿಯಾ ಮಾಲ್‌ನಲ್ಲಿರುವ 'ಲಾರ್ಡ್ ಆಫ್ ದಿ ಡ್ರಿಂಕ್ಸ್ ರೆಸ್ಟೊ-ಬಾರ್ ನಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ' ಎಂದರು.

Ramayana video broadcast in Noida bar: Threat to resto-bar

ತಲೆಮರೆಸಿಕೊಂಡ ಡಿಜೆ ಆಪರೇಟರ್

ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಾರ್ ಮಾಲೀಕ ಮೀನಕ್ ಕುಮಾರ್ ಹಾಗೂ ಮ್ಯಾನೇಜರ್ ಅಭಿಷೇಕ್ ಸೋನಿ ಅವರನ್ನು ಬಂಧಿಸಲಾಗಿದೆ. ಡಿಜೆ ಆಪರೇಟರ್ ತಲೆಮರೆಸಿಕೊಂಡಿದ್ದು, ಆತನ ಹುಡುಕಾಟ ನಡೆಯುತ್ತಿದೆ ಎಂದು ಶಕ್ತಿ ಮೋಹ ಅವರು ಹೇಳಿದರು.

ಭಾರತೀಯ ದಂಡ ಸಂಹಿತೆಯ ಎಫ್‌ಐಆರ್‌ನ ಸೆಕ್ಷನ್ 153A (ಸದ್ಭಾವನೆಗೆ ಪೂರ್ವಾಗ್ರಹ ಪೀಡಿತ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಕೃತ್ಯ) ಮತ್ತು 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ವಿಟರ್‌ನಲ್ಲಿ ವಿಡಿಯೊ ವೈರಲ್ ಆದ ಬಳಿಕ ಇಂಟರ್ನೆಟ್ ಬಳಕೆದಾರರು ರೆಸ್ಟೊ-ಬಾರ್ ಅನ್ನು ಧ್ವಂಸಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪೊಲೀಸರು ಮುಂಜಾಗೃತ ಕ್ರಮಗಳನ್ನು ಕೈಗೊಂಡಿದ್ದಾರೆ.

ರಾಮಾಯಣದಲ್ಲಿ ರಾಮ

ರಾಮಾಯಣದ ಕಥೆಯು ಮುಖ್ಯವಾಗಿ ಅಯೋಧ್ಯೆಯ ಸೂರ್ಯವಂಶದ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿ ಮಹರ್ಷಿಗಳಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕೃತಿಗಳಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ದೇಶದ ಮೂಲೆ ಮೂಲೆಯಲ್ಲಿ ಕಲಿಯುಗದ ಮಹಾಪುರುಷ ರಾಮನ ಭಕ್ತರಿದ್ದಾರೆ. ಶ್ರೀರಾಮನ ಜಯಂತಿ ಹನುಮ ಜಯಂತಿಯನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+