'ಗೋ ಮಹಾ ವಿಕಾಸ್ ಅಘಾಡಿ ಗೋ': ರಾಮದಾಸ್ ಅಠಾವಳೆ ಹೊಸ ಘೋಷಣೆ
ಪುಣೆ, ಡಿಸೆಂಬರ್ 28: ಈ ಹಿಂದೆ ಗೋ ಕೊರೊನಾ ಕೊರೊನಾ ಗೋ ಹಾಗೂ ನೋ ಕೊರೊನಾ ಕೊರೊನಾ ನೋ ಎಂಬ ಘೋಷಣೆಗಳ ಮೂಲಕ ಸುದ್ದಿಯಾಗಿದ್ದ ಕೇಂದ್ರ ಸಚಿವ ರಾಮದಾಸ್ ಅಠಾವಳೆ, ಈಗ ಹೊಸ ಘೋಷಣೆಯನ್ನು ಕೂಗಿದ್ದಾರೆ. ಆದರೆ ಅದು ಕೊರೊನಾ ವೈರಸ್ಗೆ ಸಂಬಂಧಿಸಿದ ಘೋಷಣೆ ಅಲ್ಲ.
ಕೇಂದ್ರ ಸಚಿವ ರಾಮದಾಸ್ ಅಠಾವಳೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಗೋ ಮಹಾ ವಿಕಾಸ್ ಅಘಾಡಿ ಗೋ ಎಂದಿದ್ದಾರೆ. "ಈ ಮೂರು ಚಕ್ರಗಳ ಸರ್ಕಾರದಲ್ಲಿ ಮೂರು ಪಕ್ಷಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿದೆ. ಈ ಸರ್ಕಾರದಿಂದಾಗಿ ರೈತರಿಗೆ ಈವರೆಗೆ ಯಾವುದೇ ಸಹಾಯವೂ ದೊರೆತಿಲ್ಲ. ಈ ಸಂದರ್ಭದಲ್ಲೇ ದಲಿತರಿಗೆ ಯಾವುದೇ ಸೌಲಭ್ಯವೂ ದೊರೆತಿಲ್ಲ. ಬಜೆಟ್ನಲ್ಲಿ ದಲಿತರಿಗೆ ಯಾವುದೇ ಘೋಷಣೆಯನ್ನು ಮಾಡಿಲ್ಲ," ಎಂದು ಆರೋಪ ಮಾಡಿದ್ದಾರೆ.
ಗೋ ಕೊರೊನಾ ಕೊರೊನಾ ಗೋ ಎಂಬ ತನ್ನ ಪ್ರಸಿದ್ಧ ಘೋಷಣೆಗೆ ರಾಜಕೀಯ ರೂಪ ನೀಡಿರುವ ಕೇಂದ್ರ ಸಚಿವ ರಾಮದಾಸ್ ಅಠಾವಳೆ, ಗೋ ಮಹಾ ವಿಕಾಸ್ ಅಘಾಡಿ ಗೋ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲೇ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತರಬೇಕು ಎಂಬ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ರ ಹೇಳಿಕೆಯ ಪರವಾಗಿ ಹೇಳಿಕೆ ನೀಡಿದ್ದಾರೆ.

"ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಬರಲಿ"
ಕೇಂದ್ರ ಸಚಿವ ರಾಮದಾಸ್ ಅಠಾವಳೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಬರಲಿ ಎಂದು ಆಗ್ರಹ ಮಾಡಿದ್ದಾರೆ. ಮೊದಲು ಅಲ್ಲಿನ ಮಹಾ ವಿಕಾಸ್ ಅಘಾಡಿ ಸರ್ಕಾರ ಹೋಗಬೇಕು ಎಂದು ಕೂಡಾ ಹೇಳಿರುವ ಕೇಂದ್ರ ಸಚಿವ ರಾಮದಾಸ್ ಅಠಾವಳೆ, ಗೋ ಮಹಾ ವಿಕಾಸ್ ಅಘಾಡಿ ಗೋ ಎಂದಿದ್ದಾರೆ.
ಇನ್ನು ಈ ವೇಳೆಯೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಕೇಂದ್ರ ಸಚಿವರು, "ಬಾಳಸಾಹೇಬ್ ಯುಗದ ಸಂದರ್ಭದಲ್ಲಿ ಶಿವಶಕ್ತಿ-ಭೀಮಾಶಕ್ತಿಯನ್ನು ಪ್ರಯೋಗ ಮಾಡಲಾಗಿದೆ. ಈಗ ಶಿವ ಸೇನೆಯು ಬಿಜೆಪಿಯನ್ನು ತೊರೆದು ಕಾಂಗ್ರೆಸ್, ಎನ್ಸಿಪಿ ಜೊತೆಗೆ ಸೇರಿದೆ. ಶಿವಸೇನೆ ಪ್ರಸ್ತುತ ಬಿಜೆಪಿ ಜೊರೆ ಸೇರಬೇಕಾಗಿದೆ," ಎಂದು ಹೇಳಿದರು. ಇನ್ನು ಈ ಸಂದರ್ಭದಲ್ಲೇ "ಬಿಜೆಪಿಯು ಮುಖ್ಯಮಂತ್ರಿ ಅವಧಿಯನ್ನು ಶೇಕಡ ಐವತ್ತು ಐವತ್ತರಷ್ಟು ವಿಂಗಡನೆ ಮಾಡುವ ಬಗ್ಗೆ ಭರವಸೆ ನೀಡಿತ್ತು. ಆದರೆ ಬಳಿಕ ಆ ಭರವಸೆಯನ್ನು ಮುರಿದಿದೆ," ಎಂದು ತಿಳಿಸಿದ್ದಾರೆ. ಇನ್ನು ಭೀಮಾ ಕೋರೆಂಗಾವ್ ಯುದ್ಧದ ವರ್ಷವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ಕೂಡಾ ತಿಳಿಸಿದ್ದಾರೆ.
ಗೋ ಕೊರೊನಾ ಗೋ ಘೋಷಣೆ
ದೇಶದಾದ್ಯಂತ ಕೊರೊನಾ ವೈರಸ್ ಹರಡಲು ಆರಂಭಿಸಿದ ಸಂದರ್ಭದಲ್ಲಿ 'ಗೋ ಕೊರೊನಾ ಗೋ' ಎಂಬ ಘೋಷಣೆ ಕೂಗಿ ನಗೆಪಾಟಲಿಗೀಡಾಗಿದ್ದ ಕೇಂದ್ರ ಸಚಿವ ರಾಮದಾಸ್ ಅಠವಳೆ ಮತ್ತೊಮ್ಮೆ ಹೊಸ ಘೋಷಣೆಯನ್ನು ಕೂಗಿದ್ದರು. ನೋ ಕೊರೊನಾ' ಎಂಬ ಘೋಷಣೆಯನ್ನು ಜನತೆಗೆ ನೀಡಿದ್ದರು. 'ನಾನು 'ಗೋ ಕೊರೊನಾ ಗೋ' ಎಂಬ ಘೋಷಣೆ ನೀಡಿದ್ದೆ. ಹಾಗೆಯೇ ಈಗ ವೈರಸ್ ಹೋಗುತ್ತಿದೆ. ಆದರೆ ಅದು ನನ್ನ ಬಳಿಯೂ ಬಂದಿತ್ತು. ನಾನೂ ಆಸ್ಪತ್ರೆಗೆ ದಾಖಲಾಗಿದ್ದೆ. ಕೊರೊನಾ ವೈರಸ್ ನನ್ನ ಬಳಿ ಬರುವುದಿಲ್ಲ ಎಂದುಕೊಂಡಿದ್ದೆ. ಆದರೆ ಅದು ಎಲ್ಲಿ ಬೇಕಾದರೂ ತಲುಪಬಹುದು'' ಎಂದು ಅಠವಳೆ ಹೇಳಿಕೆ ನೀಡಿದ್ದರು. ''ಕೊರೊನಾ ವೈರಸ್ನ ಹೊಸ ರೂಪಾಂತರಿ ತಳಿಗೆ ನಾನು 'ನೋ ಕೊರೊನಾ ನೋ ಕೊರೊನಾ' ಎಂದು ಹೇಳುತ್ತೇನೆ. ಏಕೆಂದರೆ ನಮಗೆ ಹಳೆಯ ಕೊರೊನಾ ವೈರಸ್ ಅಥವಾ ಹೊಸ ರೂಪಾಂತರವಾಗಲೀ ನಮಗೆ ತಗುಲುವುದನ್ನು ನಾವು ಬಯಸುತ್ತಿಲ್ಲ' ಎಂದು ಕೂಡಾ ತಿಳಿಸಿದ್ದರು. (ಒನ್ಇಂಡಿಯಾ ಸುದ್ದಿ)
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications