ಧಾರ್ಮಿಕ ವಾಹಿನಿಗಳ ಮೇಲೆ ಹೆಚ್ಚಿನ ತೆರಿಗೆ, ಕೇಂದ್ರದ ವಿರುದ್ಧ ರಾಮ್ ದೇವ್ ಗರಂ
ನವದೆಹಲಿ, ಜನವರಿ 17: ಧಾರ್ಮಿಕ ಚಾನಲ್ ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಸಂಬಂಧ ಕೇಂದ್ರ ಸರಕಾರದ ವಿರುದ್ಧ ಯೋಗ ಗುರು ಬಾಬಾ ರಾಮ್ ದೇವ್ ವಾಗ್ದಾಳಿ ನಡೆಸಿದ್ದಾರೆ.
ಆಸ್ಥಾ, ಅರಿಹಂತ್ ಮತ್ತು ವೇದಿಕ್ ನಂಥ ಚಾನಲ್ ಗಳಿಗೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವುದರ ವಿರುದ್ಧ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಸರಕಾರ ನಮ್ಮ ಬಳಿ ಒಂದು ದಿನಕ್ಕೆ ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತಿದೆ. ಇದಕ್ಕಾಗಿ ನಾವು ಸಾಧುಗಳು ಮತ್ತು ಸನ್ಯಾಸಿಗಳ ಮೇಲೆ ತೆರಿಗೆ ವಿಧಿಸಬೇಡಿ ಎಂದು ಕೇಳಿಕೊಂಡಿದ್ದೇವೆ. ನೀವು ಧಾರ್ಮಿಕ ವ್ಯಕ್ತಿಗಳನ್ನು, ನೀವು ದೇಶವನ್ನು ಪ್ರೀತಿಸುತ್ತೀರಿ, ನೀವು ಧರ್ಮವನ್ನು ಪಾಲಿಸುತ್ತೀರಿ, ಹೀಗಾಗಿ ನೀವು ನಮ್ಮಿಂದ ಕಾರ್ಯಕ್ರಮಗಳನ್ನು ಉಚಿತವಾಗಿ ವೀಕ್ಷಿಸಲು ಬಯಸುತ್ತೀರಿ ಎಂದು ಭಾವಿಸಿದ್ದೇವೆ. ಬಾಬಾಗಳ ಉಪದೇಶವನ್ನು ನೇರವಾಗಿ ನೋಡಲು, ಕೇಳಲು ನೀವು ಬಯಸಿದಲ್ಲಿ ದಿನಕ್ಕೆ ಬಾಬಾಗಳು ತಮ್ಮ ಕಿಸೆಯಿಂದ 1 ಲಕ್ಷ ರೂಪಾಯಿ ಪಾವತಿ ಮಾಡಬೇಕು. ಬಾಬಾಗಳು ಇಷ್ಟೊಂದು ಹಣವನ್ನು ಪಾವತಿ ಮಾಡಲು ಸಾಧ್ಯವಿಲ್ಲ. ಆಸ್ಥಾ ಮತ್ತು ವೇದಿಕ್ ನಂಥ ಚಾನಲ್ ಗಳನ್ನು ತೋರಿಸಲು ಸರಕಾರ ನಮ್ಮಿಂದ ರೂ. 32 ಕೋಟಿ ರೂಪಾಯಿಗಳನ್ನು ಕೇಳುತ್ತಿದೆ," ಎಂದು ರಾಮ್ ದೇವ್ ಹೇಳಿದ್ದಾರೆ.
"ನಂಬಿಕೆಯ ಹೆಸರಿನಲ್ಲಿಯೂ ನಾವು ಹಣವನ್ನು ಕೊಡಬೇಕಾದರೆ ಅದು ನಿಜವಾಗಿಯೂ ಅವಮಾನ. ಇಂತಹ ವರ್ತನೆಯನ್ನು ಈ ಸರ್ಕಾರದಿಂದ ನಾನು ಎಂದಿಗೂ ನಿರೀಕ್ಷಿಸಲಿಲ್ಲ," ಎಂದು ಪತಂಜಲಿ ಆಯುರ್ವೇದ ಸಂಸ್ಥೆಯ ಸಂಸ್ಥಾಪಕರಾದ ಬಾಬಾ ರಾಮ್ ದೇವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆದ ಆಸ್ಥಾ ಮೊಬೈಲ್ ಆ್ಯಪ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.
ಆಸ್ಥಾ, ಅರಿಹಂತ್, ವೇದಿಕ್ ಚಾನಲ್ ಗಳ ಜತೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಈ ಆ್ಯಪ್ ಸಹಾಯಕವಾಗಿದೆ. ಇದು ಈ ರೀತಿಯ ಧಾರ್ಮಿಕ ಮಾದರಿಯ ಕಾರ್ಯಕ್ರಮ ವೀಕ್ಷಿಸಲು ಇರುವ ಮೊದಲ ಆ್ಯಪ್ ಎಂದು ಪ್ರತಿಪಾದಿಸಲಾಗಿದೆ. ಈ ಆ್ಯಪ್ ತಮಿಳು, ತೆಲುಗು, ಕನ್ನಡ, ಮಲಯಾಳಂ, ಒಡಿಯಾ, ಬಾಂಗ್ಲಾ, ಮರಾಠಿಯಂಥ ಪ್ರಾದೇಶಿಕ ಬಾಷೆಗಳಲ್ಲೂ ಲಭ್ಯವಾಗಲಿದೆ. ಸದ್ಯದಲ್ಲೇ ಆಸ್ಥಾ ಚಾನಲ್ ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿಯೂ ಪ್ರಸಾರ ಆರಂಭಿಸಲಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications