ಹಲವು ಪತಂಜಲಿ ಉತ್ಪನ್ನಗಳು ಕಳಪೆ, ಆರ್ ಟಿಐನಿಂದ ಬಹಿರಂಗ
ನವದೆಹಲಿ, ಮೇ 30 : ಯೋಗ ಗುರು ಬಾಬಾ ರಾಮದೇವ್ ಅವರ ಹಲವು ಪತಂಜಲಿ ಉತ್ಪನ್ನಗಳು ಗುಣಮಟ್ಟ ಪರೀಕ್ಷೆಯಲ್ಲಿ ಪಾಸಾಗಿಲ್ಲ ಎಂಬ ಅಂಶ ಆರ್ ಟಿಐನಿಂದ ಬೆಳಕಿಗೆ ಬಂದಿದೆ.
ಪತಂಜಲಿ ಹಾಗೂ ವಿವಿಧ ಆಯುರ್ವೇದ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರೊಬ್ಬರು ಹರಿದ್ವಾರದ ಆಯರ್ವೇದ ಮತ್ತು ಯುನಾನಿ ಪ್ರಯೋಗಾಲಯ ಕಚೇರಿಗೆ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.[ಆರ್ಮಿ ಕ್ಯಾಂಟೀನ್ ನಿಂದ ಪತಂಜಲಿ ನೆಲ್ಲಿ ಜ್ಯೂಸ್ ಗೆ ಕೊಕ್]

ಈ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿದ ಆಯರ್ವೇದ ಮತ್ತು ಯುನಾನಿ ಪ್ರಯೋಗಾಲಯ ಕಚೇರಿಯು 'ದೇಶದಲ್ಲಿ 40 ರಷ್ಟು ಆರ್ಯವೇದ ಉತ್ಪನ್ನಗಳು ಕಳಪೆಯಾಗಿವೆ. ಇದರಲ್ಲಿ ಪತಂಜಲಿಯ ಹಲವು ಉತ್ಪನ್ನಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್ ಆಗಿವೆ' ಎಂಬ ಮಾಹಿತಿ ನೀಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಪತಂಜಲಿಯ ಜನಪ್ರಿಯ ಉತ್ಪನ್ನಗಳಾದ ದಿವ್ಯ ಆಮ್ಲರಸ ಮತ್ತು ಶಿವಲಿಂಗ ಬೀಜದಲ್ಲೂ ಬೇರೆ ಪದಾರ್ಥಗಳು ಪತ್ತೆಯಾಗಿದ್ದು ಇವು ಗುಣಮಟ್ಟ ಪರೀಕ್ಷೆಯಲ್ಲಿ ಪಾಸಾಗಿಲ್ಲ.
2013 ರಿಂದ 2016ರ ವರೆಗೆ ಒಟ್ಟು 80 ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 32 ಉತ್ಪನ್ನಗಳು ಕಳಪೆಯಾಗಿವೆ. ಇವುಗಳಲ್ಲಿ ಪತಂಜಲಿಯ ಹಲವು ಉತ್ಪನ್ನಗಳು ಸೇರಿವೆ ಎಂದು ವರದಿಯಲ್ಲಿ ಹೇಳಿದೆ.
ಪಶ್ಚಿಮ ಬಂಗಾಳದ ಸರ್ಕಾರಿ ಪ್ರಯೋಗಾಲಯವು ಪತಂಜಲಿಯ ಆಮ್ಲ ಜ್ಯೂಸ್ ಅನ್ನು ಪರೀಕ್ಷೆ ಮಾಡಿದ್ದು ಇದರಲ್ಲಿ ಪಿಎಚ್ ಮೌಲ್ಯ ಕಡಿಮೆ ಇದ್ದು ಈ ಪಾನಿಯಾ ಕಳಪೆಯಾಗಿದೆ ಎಂದು ವರದಿ ನೀಡಿತ್ತು.
ಈ ಪಾನಿಯಾವನ್ನು ಪಶ್ಚಿಮ ಬಂಗಾಳದ ಮಿಲಿಟರಿ ಕ್ಯಾಂಟಿನ್ ನಲ್ಲಿ ಅರೆ ಸೇನಾಪಡೆ ಯೋಧರಿಗೆ ನೀಡಲಾಗುತ್ತಿತ್ತು ಈ ವರದಿ ಬಂದ ಕೂಡಲೇ ಈ ಪದಾರ್ಥದ ಮೇಲೆ ನಿಷೇಧ ಹೇರಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications