ಹಲವು ಪತಂಜಲಿ ಉತ್ಪನ್ನಗಳು ಕಳಪೆ, ಆರ್ ಟಿಐನಿಂದ ಬಹಿರಂಗ
ನವದೆಹಲಿ, ಮೇ 30 : ಯೋಗ ಗುರು ಬಾಬಾ ರಾಮದೇವ್ ಅವರ ಹಲವು ಪತಂಜಲಿ ಉತ್ಪನ್ನಗಳು ಗುಣಮಟ್ಟ ಪರೀಕ್ಷೆಯಲ್ಲಿ ಪಾಸಾಗಿಲ್ಲ ಎಂಬ ಅಂಶ ಆರ್ ಟಿಐನಿಂದ ಬೆಳಕಿಗೆ ಬಂದಿದೆ.
ಪತಂಜಲಿ ಹಾಗೂ ವಿವಿಧ ಆಯುರ್ವೇದ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರೊಬ್ಬರು ಹರಿದ್ವಾರದ ಆಯರ್ವೇದ ಮತ್ತು ಯುನಾನಿ ಪ್ರಯೋಗಾಲಯ ಕಚೇರಿಗೆ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು.[ಆರ್ಮಿ ಕ್ಯಾಂಟೀನ್ ನಿಂದ ಪತಂಜಲಿ ನೆಲ್ಲಿ ಜ್ಯೂಸ್ ಗೆ ಕೊಕ್]

ಈ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿದ ಆಯರ್ವೇದ ಮತ್ತು ಯುನಾನಿ ಪ್ರಯೋಗಾಲಯ ಕಚೇರಿಯು 'ದೇಶದಲ್ಲಿ 40 ರಷ್ಟು ಆರ್ಯವೇದ ಉತ್ಪನ್ನಗಳು ಕಳಪೆಯಾಗಿವೆ. ಇದರಲ್ಲಿ ಪತಂಜಲಿಯ ಹಲವು ಉತ್ಪನ್ನಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್ ಆಗಿವೆ' ಎಂಬ ಮಾಹಿತಿ ನೀಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಪತಂಜಲಿಯ ಜನಪ್ರಿಯ ಉತ್ಪನ್ನಗಳಾದ ದಿವ್ಯ ಆಮ್ಲರಸ ಮತ್ತು ಶಿವಲಿಂಗ ಬೀಜದಲ್ಲೂ ಬೇರೆ ಪದಾರ್ಥಗಳು ಪತ್ತೆಯಾಗಿದ್ದು ಇವು ಗುಣಮಟ್ಟ ಪರೀಕ್ಷೆಯಲ್ಲಿ ಪಾಸಾಗಿಲ್ಲ.
2013 ರಿಂದ 2016ರ ವರೆಗೆ ಒಟ್ಟು 80 ಉತ್ಪನ್ನಗಳ ಗುಣಮಟ್ಟ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 32 ಉತ್ಪನ್ನಗಳು ಕಳಪೆಯಾಗಿವೆ. ಇವುಗಳಲ್ಲಿ ಪತಂಜಲಿಯ ಹಲವು ಉತ್ಪನ್ನಗಳು ಸೇರಿವೆ ಎಂದು ವರದಿಯಲ್ಲಿ ಹೇಳಿದೆ.
ಪಶ್ಚಿಮ ಬಂಗಾಳದ ಸರ್ಕಾರಿ ಪ್ರಯೋಗಾಲಯವು ಪತಂಜಲಿಯ ಆಮ್ಲ ಜ್ಯೂಸ್ ಅನ್ನು ಪರೀಕ್ಷೆ ಮಾಡಿದ್ದು ಇದರಲ್ಲಿ ಪಿಎಚ್ ಮೌಲ್ಯ ಕಡಿಮೆ ಇದ್ದು ಈ ಪಾನಿಯಾ ಕಳಪೆಯಾಗಿದೆ ಎಂದು ವರದಿ ನೀಡಿತ್ತು.
ಈ ಪಾನಿಯಾವನ್ನು ಪಶ್ಚಿಮ ಬಂಗಾಳದ ಮಿಲಿಟರಿ ಕ್ಯಾಂಟಿನ್ ನಲ್ಲಿ ಅರೆ ಸೇನಾಪಡೆ ಯೋಧರಿಗೆ ನೀಡಲಾಗುತ್ತಿತ್ತು ಈ ವರದಿ ಬಂದ ಕೂಡಲೇ ಈ ಪದಾರ್ಥದ ಮೇಲೆ ನಿಷೇಧ ಹೇರಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications