ರವಿಶಂಕರ್ 'ರಾಮ ಮಂದಿರ ಸಂಧಾನ'ಕ್ಕೆ ಬಿಜೆಪಿ ನಾಯಕರಿಂದಲೇ ವಿರೋಧ
ನವದೆಹಲಿ, ಅಕ್ಟೋಬರ್ 30: ಅಯೋಧ್ಯೆ ಗೊಂದಲ ಬಗೆಹರಿಸಲು ಮಧ್ಯವರ್ತಿಯಾಗಲು ಸಿದ್ಧ ಎಂದಿದ್ದ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಪ್ರಸ್ತಾಪವನ್ನು ಬಿಜೆಪಿ ನಾಯಕರೇ ತಳ್ಳಿ ಹಾಕಿದ್ದಾರೆ.
ರಾಮ ಮಂದಿರ ಆಂದೋಲನದಲ್ಲಿ ಭಾಗವಹಿಸಿದ್ದ ಬಿಜೆಪಿ ಮಾಜಿ ಸಂಸದ ರಾಮ್ ವಿಲಾಸ್ ವೇದಾಂತಿ ರವಿಶಂಕರ್ ಪ್ರಸ್ತಾಪಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಶ್ರೀ ಶ್ರೀ ಆಂದೋಲನದ ಭಾಗವೇ ಆಗಿರಲಿಲ್ಲ. ಹೀಗಾಗ ಅವರು ಮಧ್ಯವರ್ತಿಯಾಗುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ," ಎಂದಿದ್ದಾರೆ.

"ನಾವು ಈ ವಿಚಾರದಲ್ಲಿ ಜೈಲಿಗೆ ಹೋಗಿದ್ದೇವೆ. ಗೃಹ ಬಂಧನಕ್ಕೆ ಒಳಪಟ್ಟಿದ್ದೇವೆ. ಇದಕ್ಕಾಗಿ ಕೋರ್ಟ್ ನ ಪ್ರಕರಣಗಳನ್ನು ಎದುರಿಸಿದ್ದೇವೆ. ಈ ಪ್ರಕರಣದಲ್ಲಿ ಮಧ್ಯವರ್ತಿಯಾಗುವ ಅರ್ಹತೆ ಶ್ರೀ ಶ್ರೀಗಿಲ್ಲ," ಎಂದು ವೇದಾಂತಿ ಹೇಳಿದ್ದಾರೆ.
"ನಾವು ಮುಸ್ಲಿಂ ನಾಯಕರು ಮುಂದೆ ಬರಬೇಕು ಎಂದು ಬಯಸುತ್ತಿದೇವೆ. ನಾವು ಜತೆಗೆ ಕುಳಿತು ಈ ಬಗ್ಗೆ ಚರ್ಚೆ ನಡೆಸುತ್ತೇವೆ. ನಾವು ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ಈ ವಿವಾದಕ್ಕೆ ಪರಿಹಾರ ಕಂಡು ಹುಡುಕಲು ಬಯುಸುತ್ತೇವೆ. ಎರಡೂ ಧರ್ಮಗಳ ನಡುವೆ ಒಮ್ಮತದಲ್ಲೇ ದೇವಸ್ಥಾನ ನಿರ್ಮಾಣವಾಗಬೇಕು," ಎಂದು ಅವರು ಹೇಳಿದರು.
ರಾಮ ಜನ್ಮಭೂಮಿ ಆಂದೋಲನವನ್ನು ಮುನ್ನಡೆಸಿದ ರಾಮ್ ಜನ್ಮಭೂಮಿ ನ್ಯಾಸ್ ಮತ್ತು ವಿಶ್ವ ಹಿಂದೂ ಪರಿಷತ್ ಈ ವಿಚಾರದಲ್ಲಿ ಮಧ್ಯ ನಿಂತು ಮಾತುಕತೆ ನಡೆಸುವ ಅವಕಾಶ ಪಡೆಯಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ವಾರವಷ್ಟೇ, "ಶ್ರೀ ಶ್ರೀ ರವಿಶಂಕರ್ ಹಲವು ಇಮಾಮ್ ಮತ್ತು ಸ್ವಾಮೀಜಿಗಳ ಜತೆ ಸಂಪರ್ಕದಲ್ಲಿದ್ದಾರೆ. ನಿರ್ಮೋಹಿ ಅಖರಾದ ಆಚಾರ್ಯ ರಾಮ್ ದಾಸ್ ಜತೆಗೂ ಅವರು ಸಂಪರ್ಕದಲ್ಲಿದ್ದು ಕೋರ್ಟ್ ಹೊರಗೆ ರಾಮ ಜನ್ಮಭೂಮಿ ವಿವಾದಕ್ಕೆ ಪರಹಾರ ಕಂಡು ಹುಡುಕಲು ಯತ್ನಿಸುತ್ತಿದ್ದಾರೆ," ಎಂದು ಆರ್ಟ್ ಆಫ್ ಲಿವಿಂಗ್ ಹೇಳಿತ್ತು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications