Get Updates
Get notified of breaking news, exclusive insights, and must-see stories!

ರಾಮನವಮಿ ಘರ್ಷಣೆ: ಧ್ವಜ ಅಪವಿತ್ರಗೊಳಿಸಿದ ಘಟನೆ- ಜಮ್ಶೆಡ್‌ಪುರದಲ್ಲಿ ಮತ್ತೆ ಗಲಭೆ- ನಿಷೇಧಾಜ್ಞೆ ಜಾರಿ

ಜಮ್‌ಶೆಡ್‌ಪುರ ಏಪ್ರಿಲ್ 10: ರಾಮನವಮಿಯಂದು ಧ್ವಜವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಭೆ ನಿಯಂತ್ರಣಕ್ಕೆ ತರಲು ಅಧಿಕ ಸಂಖ್ಯೆಯಲ್ಲಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಜೊತೆಗೆ ಶಾಸ್ತ್ರಿನಗರದಲ್ಲಿ ಎರಡು ಅಂಗಡಿಗಳು ಮತ್ತು ಆಟೋ ರಿಕ್ಷಾಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ಹೊರಹಾಕಲಾಗಿದೆ. ಈ ವೇಳೆ ಉದ್ವಿಗ್ನಗೊಂಡ ವಾತಾವರಣದಿಂದ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಬೇಕಾಯಿತು.

Ramnavami clash: Flag desecration incident- Riot again in Jamshedpur- Prohibition imposed

ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನಗರ ಪೊಲೀಸ್ ಮುಖ್ಯಸ್ಥ ಪ್ರಭಾತ್ ಕುಮಾರ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದವರನ್ನು ಮನೆಗೆ ಕಳುಹಿಸಲಾಗಿದೆ. ಇಡೀ ಪ್ರದೇಶದಲ್ಲಿ ಫೋರ್ಸ್ ಅನ್ನು ನಿಯೋಜಿಸಲಾಗಿದೆ. ಆರ್ಎಎಫ್ (ಕ್ಷಿಪ್ರ ಕಾರ್ಯಾಚರಣೆ ಪಡೆ) ತಂಡವನ್ನೂ ಸ್ಥಳದಲ್ಲಿ ನಿಯೋಜಿಸಲಾಗಿದೆ" ಎಂದು ಪ್ರಭಾತ್ ಕುಮಾರ್ ಅವರು ಹೇಳಿದರು.

ಗಲಭೆ ನಿಗ್ರಹ ಪೊಲೀಸರು ಇಂದು ಬೆಳಗ್ಗೆ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ಬಳಿಕ ಕೆಲವರನ್ನು ಬಂಧಿಸಲಾಗಿದೆ ಎಂದು ಪೂರ್ವ ಸಿಂಗ್‌ಭೂಮ್‌ನ ಉಪ ಆಯುಕ್ತ ವಿಜಯ ಜಾಧವ್ ತಿಳಿಸಿದ್ದಾರೆ. "ನಾವು ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದೇವೆ. ಶಾಂತಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಂವಹನವನ್ನು ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದೇವೆ" ಎಂದು ಅವರು ಹೇಳಿದರು.

ಜಮ್ಶೆಡ್‌ಪುರದಲ್ಲಿ ಮತ್ತೆ ಗಲಭೆ

ಕೆಲವು ಸಮಾಜ ವಿರೋಧಿ ಶಕ್ತಿಗಳು ಶಾಂತಿ ಕದಡಲು ಯತ್ನಿಸುತ್ತಿದ್ದು, ಅದಕ್ಕೆ ಕಿವಿಗೊಡದಂತೆ ಶಾಂತತೆಯಿಂದ ವರ್ತಿಸಿ ಎಂದು ಪೊಲೀಸರು ನಾಗರಿಕರಿಂದ ಸಹಕಾರ ಕೋರಿದರು. "ನಾವು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸ್ ಪಡೆ, ಕ್ವಿಕ್ ರೆಸ್ಪಾನ್ಸ್ ಟೀಮ್, ಮ್ಯಾಜಿಸ್ಟ್ರೇಟ್, ರ್ಯಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿ ಮತ್ತು ಇತರ ಗಲಭೆ ವಿರೋಧಿ ಶಶಸ್ತ್ರಗಳನ್ನು ನಿಯೋಜಿಸಿದ್ದೇವೆ" ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವದಂತಿಗಳನ್ನು ನಂಬಬೇಡಿ ಎಂದು ಜಾಧವ್ ಜನರಿಗೆ ಮನವಿ ಮಾಡಿದ್ದಾರೆ. "ಜನರು ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ವಿನಂತಿಸಲಾಗಿದೆ. ಅವರು ಯಾವುದೇ ಪ್ರಚೋದನಕಾರಿ ಅಥವಾ ಅಹಿತಕರ ಸಂದೇಶಗಳನ್ನು ಸ್ವೀಕರಿಸಿದರೆ, ದಯವಿಟ್ಟು ಪೊಲೀಸರಿಗೆ ವರದಿ ಮಾಡಿ" ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಹೇಳಿದರು.

ನಿಷೇಧಾಜ್ಞೆ ಜಾರಿ

ಸ್ಥಳೀಯ ಸಂಘಟನೆಯ ಸದಸ್ಯರು ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿರುವುದನ್ನು ಕಂಡು ಶನಿವಾರದಿಂದ ಈ ಪ್ರದೇಶವು ಉದ್ವಿಗ್ನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ನಿನ್ನೆ ರಾತ್ರಿ ಗುಂಪುಗಳ ನಡುವೆ ಮತ್ತೆ ಘರ್ಷಣೆ ಭುಗಿಲೆದ್ದ ಹಿನ್ನೆಲೆಯಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ ಎಂದು ಉಪವಿಭಾಗಾಧಿಕಾರಿ (ಧಲ್ಭುಮ್) ಪಿಯೂಷ್ ಸಿನ್ಹಾ ಹೇಳಿದ್ದಾರೆ. ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಡೆಪ್ಯೂಟಿ ಕಮಿಷನರ್ ವಿಜಯ ಜಾಧವ್, ಕೆಲವು ಸಮಾಜ ವಿರೋಧಿ ಶಕ್ತಿಗಳು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಅಂತವರ ಸಂದೇಶಗಳು ಹಾಗೂ ಕರೆಗಳಿಗೆ ಕಿವಿ ಕೊಡದಿರಿ ಎಂದು ವಿನಂತಿಸಿದ್ದಾರೆ. ಸ್ಥಳೀಯ ಸಂಘಟನೆಯ ಸದಸ್ಯರು ಧಾರ್ಮಿಕ ಧ್ವಜದ ಮೇಲೆ ಮಾಂಸದ ತುಂಡನ್ನು ಅಂಟಿಸಿದ ನಂತರ ಶನಿವಾರ ರಾತ್ರಿಯಿಂದ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 31ರ ರಾತ್ರಿ ರಾಮನವಮಿಯಂದು ಹಿಂಸಾಚಾರ

ಮೊನ್ನೆ ಮಾರ್ಚ್ 31ರ ರಾತ್ರಿ ರಾಮನವಮಿಯಂದು ಉಗ್ರ ಹಿಂಸಾಚಾರ ನಡೆದಿತ್ತು. ಜಮ್ಶೆಡ್‌ಪುರದ ಹಲ್ದಿಪೋಖರ್‌ನಲ್ಲಿ ರಾಮ ನವಮಿಯಂದು ಸಾಕಷ್ಟು ಕಲ್ಲು ತೂರಾಟ ನಡೆದಿದೆ. ಜನರು ರಾಮನವಮಿ ಮೆರವಣಿಗೆ ನಡೆಸುತ್ತಿದ್ದರು. ಮೆರವಣಿಗೆಯು ಜುಗ್ಸಾಲೈ ತಲುಪಿದಾಗ, ಪ್ರತಿಭಟನಾಕಾರರು ಮೆರವಣಿಗೆಯ ಮೇಲೆ ಕಲ್ಲು ತೂರಿದರು. ಈ ಘಟನೆಯಿಂದ ಆಕ್ರೋಶಗೊಂಡ ಜನರು ಬಾಟಾ ಚೌಕ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದರು.

ಇದಾದ ಬಳಿಕ ಉಭಯ ಸಮುದಾಯಗಳ ಜನರ ನಡುವೆ ಪ್ರಚೋದನಕಾರಿ ಘೋಷಣೆಗಳು ಆರಂಭವಾದವು. ನಂತರ ಜನರು ಧ್ವಂಸ ಮತ್ತು ಬೆಂಕಿ ಹಚ್ಚಲು ಪ್ರಾರಂಭಿಸಿದರು. ಸಿಟ್ಟಿಗೆದ್ದ ಗುಂಪು ಟೈರ್ ಸುಟ್ಟು ಪೊಲೀಸ್ ವಾಹನಕ್ಕೆ ಹಾನಿ ಮಾಡಿ ಬೆಂಕಿ ಹಚ್ಚಿದ್ದಾರೆ. ಈ ಹಿಂಸಾಚಾರದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಮತ್ತೆ ಅದೇ ಪರಿಸ್ಥಿತಿ ಇಲ್ಲಿ ನಡೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+