Ramoji Rao: ಈನಾಡು ಸಂಸ್ಥಾಪಕ ರಾಮೋಜಿ ರಾವ್ (87) ನಿಧನ: ನರೇಂದ್ರ ಮೋದಿ ಸಂತಾಪ
ಹೈದರಾಬಾದ್, ಜೂನ್ 07: ವಾಣಿಜ್ಯೋದ್ಯಮಿ ರಾಮೋಜಿ ಗ್ರೂಪ್ ಸಂಸ್ಥಾಪಕ ರಾಮೋಜಿ ರಾವ್ (87) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಶನಿವಾರ ನಸುಕಿನ ಜಾವ ನಿಧನರಾದರು.
ಪ್ರಸಿದ್ಧ ವಾಣಿಜ್ಯೋದ್ಯಮಿ ರಾಮೋಜಿ ಗ್ರೂಪ್ ಮತ್ತು ಈಟಿವಿ ಭಾರತ್ ಮಾಧ್ಯಮ ಸಂಸ್ಥೆ ಸಂಸ್ಥಾಪಕ ರಾಮೋಜಿ ರಾವ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರು ಇದೇ ಜೂನ್ 5ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಶನಿವಾರ ಬೆಳಗಿನ ಜಾವ 4:50ಕ್ಕೆ ಅವರು ನಿಧನರಾದರು.

ರಮೋಜಿ ರಾವ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ತೀವ್ರವಾಗಿ ಬಳಲುತ್ತಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಅವರು ಸಾಕಷ್ಟು ಆರೋಗ್ಯ ಸಂಬಂಧಿತ ಸಮಸ್ಯೆಗಳ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗಲಿಲ್ಲ.
ಮೃತ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್ ನಲ್ಲಿರುವ 'ರಾಮೋಜಿ ಫಿಲ್ಮ್ ಸಿಟಿ'ಯಲ್ಲಿರುವ ಅವರ ನಿವಾಸಕ್ಕೆ ಒಯ್ಯಲು.ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ.
ಅವರ ಕುಟುಂಬ ಸದಸ್ಯರು, ಆಪ್ತರು, ಸ್ನೇಹಿತರು ಮತ್ತು ಹಿತೈಷಿಗಳು ಅಗಲಿದ ಆತ್ಮಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ.
ಉದ್ಯಮ ರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ರಾಮೋಜಿ ರಾವ್ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನರೇಂದ್ರ ಮೋದಿ ಸಂತಾಪ

ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ ಎಂದು ಹಂಗಾಮಿ ಪ್ರಧಾನಿ ನರೇಂದ್ರ ಮೋದಿಯವರು ಇಂಗ್ಲಿಷ್ ಮತ್ತು ತೆಲುಗಿನಲ್ಲಿ ಸಂತಾಪ ಸೂಚಿಸಿದ್ದಾರೆ. ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡ ತಂದವರು ಎಂದು ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗೆಗೆ ಅಪಾರವಾದ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಿದ್ದ ನಾನು ಅವರ ಬುದ್ಧಿವಂತಿಕೆಯ ಪ್ರಯೋಜನ ಪಡೆಯಲು ಹಲವು ಅವಕಾಶಗಳನ್ನು ಪಡೆದದ್ದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ದುಖಃ ಭರಿಸುವ ಶಕ್ತಿ ಕೊಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications