ರಂಜಿತ್ ಶ್ರೀನಿವಾಸನ್ ಹತ್ಯೆ: ಕುಟುಂಬದವರ ಎದುರೇ ಬಿಜೆಪಿ ಮುಖಂಡನನ್ನು ಕೊಂದ 15 ಮಂದಿಗೆ ಗಲ್ಲು ಶಿಕ್ಷೆ
ತಿರುವನಂತಪುರಂ, ಜನವರಿ 30: ಎರಡು ವರ್ಷಗಳ ಹಿಂದೆ ಅಂದರೆ, 2021 ರ ಡಿಸೆಂಬರ್ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ಮುಖಂಡ ರಂಜಿತ್ ಶ್ರೀನಿವಾಸನ್ ಅವರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನೊಂದಿಗೆ ಸಂಬಂಧ ಹೊಂದಿದ್ದ 15 ವ್ಯಕ್ತಿಗಳಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.
ಮಾವೇಲಿಕರ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ-1 ಜನವರಿ 30 (ಮಂಗಳವಾರ) ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆ ಮಾಡಿದ 15 ಜನರಿಗೆ ಮರಣದಂಡನೆ ವಿಧಿಸಿದೆ. ಬಿಜೆಪಿಯ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ವಕೀಲರಾಗಿದ್ದ ರಂಜಿತ್ ಅವರನ್ನು ಡಿಸೆಂಬರ್ 19, 2021 ರಂದು ಬೆಳಗ್ಗೆ ಅಲಪ್ಪುಳ ಪುರಸಭೆಯ ವೆಲ್ಲಕಿನಾರ್ನಲ್ಲಿರುವ ಅವರ ಮನೆಯಲ್ಲಿಯೇ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಲಾಯಿತು.

ಕುಟುಂಬದವರ ಎದುರೇ ಬರ್ಬರ ಹತ್ಯೆ
ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್ ಶ್ರೀನಿವಾಸನ್ ಅವರನ್ನು ಡಿಸೆಂಬರ್ 19, 2021 ರಂದು ಅವರ ಮನೆಯಲ್ಲೇ ಅವರ ಕುಟುಂಬದವರ ಎದುರೇ ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ರಂಜಿತ್ ಅವರ ತಾಯಿ, ಹೆಂಡತಿ ಮತ್ತು ಮಗಳ ಈ ಘೋರ ಘಟನೆಗೆ ಸಾಕ್ಷಿಯಾಗಿದ್ದರು.
ಪಿಎಫ್ಐ ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)ಗೆ ಸಂಬಂಧಿಸಿದ ಕಾರ್ಯಕರ್ತರು ಪ್ರಕರಣ ಮಾಡಿದ್ದಾರೆ ಎಂದು ಅರೋಪ ಕೇಳಿ ಬಂದಿತ್ತು. ಈಗ ಹತ್ಯೆ ಪ್ರಕರಣದಲ್ಲಿ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಶಿಕ್ಷೆಯನ್ನು ಪ್ರಕಟಿಸಿದ್ದಾರೆ.
ತರಬೇತಿ ಪಡೆದ ಕೊಲೆಗಾರ ಸ್ಕ್ವಾಡ್!
ಪ್ರಾಸಿಕ್ಯೂಷನ್ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯನ್ನು ಕೋರಿತ್ತು. ಆರೊಪಿಗಳನ್ನು "ತರಬೇತಿ ಪಡೆದ ಕೊಲೆಗಾರ ಸ್ಕ್ವಾಡ್" ಎಂದು ಕರೆದ ಅವರು, ರಂಜಿತ್ ಶ್ರೀನಿವಾಸ್ ಅವರನ್ನು ತನ್ನ ತಾಯಿ, ಮಗಳು ಮತ್ತು ಹೆಂಡತಿಯ ಮುಂದೆ ಕೊಂದಿದ್ದಾರೆ. ಇದು ಕ್ರೂರ ಮತ್ತು ಪೈಶಾಚಿಕ ಕೃತ್ಯವಾಗಿದ್ದು, 'ಅಪರೂಪದಲ್ಲೇ ಅಪರೂಪದ ಅಪರಾಧಗಳು' ಎಂದು ಪರಿಗಣಿಸಲು ಕೋರಿದ್ದರು.
ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ
ಪ್ರಕರಣದ ಆರೋಪಿಗಳಾಗಿರುವ 15 ಜನರಲ್ಲಿ ಒಬ್ಬರಿಂದ ಎಂಟು ಮಂದಿ ನೇರವಾಗಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜನವರಿ 20 ರಂದು ನ್ಯಾಯಾಲಯಕ್ಕೆ ತಿಳಿದು ಬಂದಿತ್ತು. ನಾಲ್ವರು (ಆರೋಪಿ ಸಂಖ್ಯೆ ಒಂಬತ್ತರಿಂದ 12) ಕೊಲೆಯ ತಪ್ಪಿತಸ್ಥರೆಂದು ತಿಳಿದು ಬಂದಿತ್ತು. ಇವರು ನೇರವಾಗಿ ಅಪರಾಧದಲ್ಲಿ ಭಾಗಿಯಾಗಿರುವವರೊಂದಿಗೆ ಮಾರಕ ಆಯುಧಗಳೊಂದಿಗೆ ಶಸ್ತ್ರಸಜ್ಜಿತವಾದ ಸ್ಥಳಕ್ಕೆ ಬಂದಿದ್ದವರು.
ರಂಜಿತ್ ಶ್ರೀನಿವಾಸನ್ ಪರಾರಿಯಾಗುವುದನ್ನು ತಡೆಯುವುದು ಮತ್ತು ಅವರ ಕಿರುಚಾಟವನ್ನು ಕೇಳಿದ ನಂತರ ಯಾರಾದರೂ ಮನೆಗೆ ಬಂದರೆ ಅವರನ್ನು ತಡೆಯುವುದು ಈ ನಾಲ್ವರ ಉದ್ದೇಶವಾಗಿತ್ತು. ಐಪಿಸಿ ಸೆಕ್ಷನ್ 149 ಅಡಿಯಲ್ಲಿ ಕೊಲೆಯ ಸಾಮಾನ್ಯ ಅಪರಾಧಕ್ಕೆ ಅವರು ಹೊಣೆಗಾರರಾಗಿದ್ದಾರೆ ಎಂಬ ಪ್ರಾಸಿಕ್ಯೂಷನ್ ವಾದವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ.
ಶ್ರೀನಿವಾಸನ್ ಹತ್ಯೆಗೆ ಸಂಚು ರೂಪಿಸಿದ್ದ ಇತರ ಮೂವರನ್ನು (ಆರೋಪಿ ಸಂಖ್ಯೆ 13 ರಿಂದ 15) ಕೊಲೆ ಮಾಡಿದ ಆರೋಪದಲ್ಲಿ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದೆ. 2021 ರ ಡಿಸೆಂಬರ್ 18 ರ ರಾತ್ರಿ ಎಸ್ಡಿಪಿಐ ಮುಖಂಡ ಕೆಎಸ್ ಶಾನ್ ಅವರು ಅಲಪ್ಪುಳದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಗ್ಯಾಂಗ್ನಿಂದ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಬಿಜೆಪಿ ನಾಯಕನ ಹತ್ಯೆ ಸಂಭವಿಸಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications