ಸೈಬರ್ ದಾಳಿ ಶಂಕೆ: ದೆಹಲಿ ಏಮ್ಸ್ ಆಸ್ಪತ್ರೆಯ ಸರ್ವರ್ ಡೌನ್
ನವದೆಹಲಿ, ನವೆಂಬರ್ 24: ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್) ರಾಮ್ಸಮ್ವೇರ್ ದಾಳಿಗೆ ಒಳಗಾಗಿರಬಹುದು ಎಂದು ಆಸ್ಪತ್ರೆಯು ಹೇಳಿದೆ. ಗುರುವಾರ ಬೆಳಗ್ಗೆ 7ರಿಂದಲೇ ಸರ್ವರ್ಗಳು ಕೆಟ್ಟು ನಿಂತಿದ್ದರಿಂದ ಆಸ್ಪತ್ರೆಯ ಎಲ್ಲ ವಿಭಾಗಗಳನ್ನು ಬೇರೆ ವಿಧಾನದಲ್ಲಿ ಕಾರ್ಯನಿರ್ವಹಿಸುವಂತಾಗಿದೆ.
ಏಮ್ಸ್ ಆಸ್ಪತ್ರೆಯು ಹೇಳಿಕೆಯಲ್ಲಿ, ಸಿಸ್ಟಮ್ ಅನ್ನು ಮರುಸ್ಥಾಪಿಸಲು ಕೆಲಸ ಮಾಡುತ್ತಿರುವ ನ್ಯಾಷನಲ್ ಇನ್ಫೋಮ್ಯಾಟಿಕ್ಸ್ ಸೆಂಟರ್ "ಇದು ರಾಮ್ಸಮ್ವೇರ್ ದಾಳಿಯಾಗಿರಬಹುದು. ಈ ಬಗ್ಗೆ ಅಧಿಕಾರಿಗಳಿಂದ ಸೂಕ್ತ ತನಿಖೆ ನಡೆಸಲ್ಪಡುತ್ತದೆ," ಎಂದು ತಿಳಿಸಿದೆ.
"ಡಿಜಿಟಲ್ ಸೇವೆಗಳನ್ನು ಮರುಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (ಸಿಇಆರ್ಟಿ-ಇನ್) ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರದಿಂದ ಬೆಂಬಲವನ್ನು ಪಡೆಯಲಾಗುತ್ತಿದೆ," ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಏನಿದು ರಾಮ್ಸಮ್ವೇರ್ ದಾಳಿ?
ರಾಮ್ಸಮ್ವೇರ್ ಎನ್ನುವುದು ದುರುದ್ದೇಶಪೂರಿತ ಸಾಫ್ಟ್ವೇರ್ ಆಗಿದ್ದು, ಬಳಕೆದಾರರು ಅಥವಾ ಸಂಸ್ಥೆಯ ಕಂಪ್ಯೂಟರ್ನಲ್ಲಿರುವ ಫೈಲ್ಗಳಿಗೆ ಪ್ರವೇಶಿಸುವುದಕ್ಕಾಗಿ ವಿನ್ಯಾಸಗೊಳಿಸಲಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ, ಸೈಬರ್ ದಾಳಿಕೋರರು ಇಂಥ ಫೈಲ್ಗಳಿಗೆ ಪ್ರವೇಶವನ್ನು ಅನುಮತಿಸಲು ಸುಲಿಗೆಯನ್ನು ಮಾಡುತ್ತಾರೆ.
ಏಮ್ಸ್ ಆಸ್ಪತ್ರೆಯಲ್ಲಿ ಉದ್ದನೆ ಸರತಿ ಸಾಲು
ಪ್ರತಿ ವರ್ಷ 1.5 ಮಿಲಿಯನ್ ಹೊರರೋಗಿಗಳಿಗೆ ಮತ್ತು 80,000 ಒಳರೋಗಿಗಳಿಗೆ ಸೇವೆ ಸಲ್ಲಿಸುವ ನಗರದ ಅತಿದೊಡ್ಡ ರೆಫರಲ್ ಆಸ್ಪತ್ರೆಯು ಬೆಳಿಗ್ಗೆಯಿಂದ ಬೇರೆ ವಿಧಾನದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಪ್ರತಿ ವಿಭಾಗದಲ್ಲೂ ಉದ್ದನೆಯ ಸರತಿ ಸಾಲುಗಳು ಕಾಣುತ್ತಿವೆ. ನೋಂದಾವಣೆ ವಿಭಾಗದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರಿದೆ, ಅಲ್ಲಿ ನೂರಾರು ಜನರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಅಲ್ಲದೆ, ಸ್ಮಾರ್ಟ್ ಲ್ಯಾಬ್, ವರದಿ ತಯಾರಿಕೆ, ಬಿಲ್ಲಿಂಗ್ ಮತ್ತು ಅಪಾಯಿಂಟ್ಮೆಂಟ್ ವ್ಯವಸ್ಥೆಗಳ ಮೇಲೂ ಈ ದಾಳಿಯು ಪರಿಣಾಮ ಬೀರಿದೆ. ಭವಿಷ್ಯದಲ್ಲಿ ಇಂತಹ ದಾಳಿಗಳು ನಡೆಯದಂತೆ ಏಮ್ಸ್ ಮತ್ತು ಎನ್ಐಸಿ ಮುನ್ನೆಚ್ಚರಿಕೆ ವಹಿಸಲಿದೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.
ಏಮ್ಸ್ ವೆಬ್ಸೈಟ್ನ ಪ್ರಕಾರ, ಆಸ್ಪತ್ರೆಯನ್ನು 1956ರಲ್ಲಿ ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಸ್ಥಾಪಿಸಲಾಯಿತು. ಇದು ಭಾರತದಲ್ಲಿನ ಆರೋಗ್ಯ ವ್ಯವಸ್ಥೆಯ ಎಲ್ಲಾ ಅಂಶಗಳಲ್ಲಿ ಉತ್ಕೃಷ್ಟತೆಯ ಅಭಿವೃದ್ಧಿಗೆ ನ್ಯೂಕ್ಲಿಯಸ್ ಆಗಿ ಕಾರ್ಯನಿರ್ವಹಿಸುತ್ತದೆ.1978ರಲ್ಲೇ ಕಂಪ್ಯೂಟರ್ ಸೌಲಭ್ಯವನ್ನು ಸಣ್ಣ ರೀತಿಯಲ್ಲಿ ಪ್ರಾರಂಭಿಸಲಾಯಿತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications