ಜೈಲಿನಲ್ಲೇ ಅತ್ಯಾಚಾರಿಯ ವರಿಸಿದ ಸಂತ್ರಸ್ತ ಮಹಿಳೆ
ಭುವನೇಶ್ವರ್, ಜ. 29: ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವುದು ಸಾಮಾನ್ಯ. ಆದರೆ, ಒರಿಸ್ಸಾ ರಾಜ್ಯದಲ್ಲಿ ಅತ್ಯಾಚಾರ ಸಂತ್ರಸ್ತೆಯೋರ್ವಳು ಆರೋಪಿಯನ್ನೇ ವಿವಾಹವಾಗಿದ್ದಾರೆ.
ಈ ವಿವಾಹ ನಡೆದಿದ್ದು ಒರಿಸ್ಸಾ ರಾಜಧಾನಿ ಭುವನೇಶ್ವರದ ಜೈಲಿನಲ್ಲಿ. ನ್ಯಾಯಾಲಯದ ಮಾರ್ಗದರ್ಶನದಂತೆ ಜೈಲು ಅಧಿಕಾರಿಗಳು, ನ್ಯಾಯವಾದಿಗಳು ಹಾಗೂ ಕುಟುಂಬದ ಸದಸ್ಯರ ಎದುರು 32 ವರ್ಷ ವಯಸ್ಸಿನ ಅತ್ಯಾಚಾರ ಆರೋಪಿಯು 22 ವರ್ಷ ವಯಸ್ಸಿನ ಸಂತ್ರಸ್ತೆಯನ್ನು ಝರ್ಪದಾ ಜೈಲಿನಲ್ಲಿ ಮದುವೆಯಾಗಿದ್ದಾನೆ. [ಸಾಕು ಪ್ರಾಣಿಯನ್ನೂ ಬಿಡದ ಕಾಮಾಂಧ]
ಘಟನೆಯ ವಿವರ : ಭುಬನೇಶ್ವರಕ್ಕೆ ಸಮೀಪದ ಹಳ್ಳಿಯಲ್ಲಿ ಬಸ್ಗಾಗಿ ಯುವತಿ ಕಾಯುತ್ತಿದ್ದರು. ಅವರಿಗೆ ಲಿಫ್ಟ್ ಕೊಡುವುದಾಗಿ ನಂಬಿಸಿದ ಚಾಲಕ ವೃತ್ತಿಯಲ್ಲಿರುವ ದಿಲೀಪ್ ಬೆಹೆರಾ ಎಂಬಾತ ತನ್ನ ವಾಹನದಲ್ಲಿ ಹತ್ತಿಸಿಕೊಂಡು ಯಾರೂ ಇಲ್ಲದ ಜಾಗಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಈ ಘಟನೆ ನಡೆದದ್ದು 2014ರ ಜನವರಿ 23ರಂದು. ಕೆಲವು ದಿನಗಳ ನಂತರ ಪೊಲೀಸರು ಆರೋಪಿ ಬೆಹೆರಾನನ್ನು ಬಂಧಿಸಿದ್ದರು. ಅಂದಿನಿಂದ ಇಂದಿನವರೆಗೂ ಆತ ನ್ಯಾಯಾಂಗ ಬಂಧನದಲ್ಲಿಯೇ ಇದ್ದ. [ನಿರ್ಮಾಪಕ ಗೋವರ್ಧನ ಮೂರ್ತಿ ಬಂಧನ]
ವರ್ಷದ ನಂತರ ಆತ ಸಂತ್ರಸ್ತ ಯುವತಿಯನ್ನೇ ಮದುವೆಯಾಗಲು ಮುಂದಾಗಿದ್ದಾನೆ. ಇದಕ್ಕೆ ಒಪ್ಪಿದ ಯುವತಿ ತನ್ನ ಮೇಲೆ ಅತ್ಯಾಚಾರ ಎಸಗಿದ ಬೆಹೆರಾನನ್ನು ಮದುವೆಯಾಗಲು ಒಪ್ಪಿಗೆ ನೀಡಬೇಕೆಂದು ಕೋರಿ ಭುಬನೇಶ್ವರದ ಹೆಚ್ಚುವರಿ ಜಿಲ್ಲಾ ಹಾಗೂ ಸೆಶನ್ ಜಡ್ಜ್ ಎದುರು ಮನವಿ ಸಲ್ಲಿಸಿದ್ದರು. [ಅತ್ಯಾಚಾರಿಗೆ ಅವಮಾನವಾಗಿದೆ]
ಇದನ್ನು ಪರಿಗಣಿಸಿದ ನ್ಯಾಯಾಲಯ ಆರೋಪಿ ಹಾಗೂ ಸಂತ್ರಸ್ತೆಯ ಹೇಳಿಕೆಗಳನ್ನು ದಾಖಲಿಸಿಕೊಂಡು ಅವರಿಬ್ಬರ ಮದುವೆಗೆ ಏರ್ಪಾಟು ಮಾಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿತು. [ನಿರ್ಭಯಾಳಿಗೆ ಸಂಗೀತ ನಮನ]
ನ್ಯಾಯಾಲಯದ ಆದೇಶದಂತೆ ಜೈಲಿನಲ್ಲಿಯೇ ಮದುವೆ ಮಾಡಲಾಯಿತು. ಮದುವೆ ಹಿಂದೂ ಧರ್ಮದ ರೀತ್ಯಾ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರ ಸಂತ್ರಸ್ತ ಯುವತಿ ಆರೋಪಿ ಬೆಹೆರಾನನ್ನು ಬಂಧಮುಕ್ತಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications