ರೇರ್ ಅರ್ಥ್ ಮ್ಯಾಗ್ನೆಟ್ಸ್ ಯೋಜನೆಗೆ 7,280 ಕೋಟಿ ರೂ ವೆಚ್ಚ: ಉದ್ಯಮ ಪಾಲುದಾರರ ಜತೆ ಹೆಚ್.ಡಿ. ಕುಮಾರಸ್ವಾಮಿ ಚರ್ಚೆ
ನವದೆಹಲಿ: ಭೂಮಿಯಲ್ಲಿನ ಅಪರೂಪದ ಮ್ಯಾಗ್ನೆಟ್ʼಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಯೋಜನೆಯ ಉದ್ಯಮ ಪಾಲುದಾರರ ಮಹತ್ವದ ಸಭೆಯನ್ನು ನಡೆಸಿದರು.
ಬೃಹತ್ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಸೋಮವಾರ ನಡೆದ ಈ ಸಭೆಯಲ್ಲಿ ಭಾರೀ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿ, ಪರಮಾಣು ಇಂಧನ ಇಲಾಖೆಯ ಕಾರ್ಯದರ್ಶಿ, ಸಿಎಮ್ಡಿ, ಐಆರ್ಇಎಲ್ (ಭಾರತ) ಲಿಮಿಟೆಡ್ʼನ ನಿರ್ದೇಶಕರು (ತಾಂತ್ರಿಕ), ಎನ್ಎಂಡಿಸಿ ನಿರ್ದೇಶಕರು, ಎನ್ಎಫ್ಟಿಡಿಸಿ ಮತ್ತು ಭಾರತ ಮತ್ತು ವಿದೇಶಗಳ ವಿವಿಧ ಉದ್ಯಮ ಪಾಲುದಾರರು ಭಾಗವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಈಗಾಗಲೇ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು; 2047ಕ್ಕೆ ವಿಕಸಿತ ಭಾರತ ಸಾಕಾರಕ್ಕಾಗಿ ವೇಗಗತಿಯಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಅದಕ್ಕೆ ಅನುಗುಣವಾಗಿ, ಆರ್ಇಪಿಎಂಗಳಿಗಾಗಿ ಸ್ವಾವಲಂಬಿ, ಸ್ಥಿತಿಸ್ಥಾಪಕ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಪೂರಕ ವ್ಯವಸ್ಥೆಯನ್ನು ಸ್ಥಾಪಿಸುವತ್ತ ಕೇಂದ್ರ ಸರಕಾರ ಕ್ಷಿಪ್ರಗತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಎಲ್ಲಾ ಅರ್ಹ ದೇಶೀಯ ಮತ್ತು ಅಂತಾರಾಷ್ಟ್ರೀಯ ಪಾಲುದಾರರು ಈ ಅವಕಾಶವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಮತ್ತು ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಭಾರತದ ದೀರ್ಘಕಾಲೀನ ಬೆಳವಣಿಗೆಗೆ ಕೊಡುಗೆ ನೀಡಬೇಕೆಂದು ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಿ ಹೇಳಿದರು. ಡಿಸೆಂಬರ್ 15, 2025ರಂದು ಈ ಯೋಜನೆಯ ಅಧಿಸೂಚನೆ ಹೊರಡಿಸಲಾಗಿದ್ದು, ಆ ಯೋಜನೆ ಪ್ರಮುಖ ಉದ್ದೇಶ, ಗುರಿಗಳನ್ನು ಸಚಿವರು ಪಾಲುದಾರರಿಗೆ ವಿವರಿಸಿದರು.
ಈ ಯೋಜನೆಯ ಒಟ್ಟು ಹಣಕಾಸು ವೆಚ್ಚವು 7,280 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಯೋಜನೆಯ ಮಾರಾಟದ ಮೇಲಿನ ಮಾರಾಟ, ಸಂಬಂಧಿತ ಪ್ರೋತ್ಸಾಹಕಗಳಲ್ಲಿ 6,450 ಕೋಟಿ ರೂ. ಆಗಿದೆ. ವಾರ್ಷಿಕ ಒಟ್ಟು 6,000 ಮೆಟ್ರಿಕ್ ಟನ್ ಉತ್ಪಾದನೆ ಗುರಿ ಸಾಧಿಸಲು 750 ಕೋಟಿ ರೂ.ಗಳ ಬಂಡವಾಳ ಸಬ್ಸಿಡಿಯೂ ಒಟ್ಟು ಮೊತ್ತದಲ್ಲಿ ಸೇರಿದೆ ಎಂದು ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.
ಅಪರೂಪದ ಮ್ಯಾಗ್ನೆಟ್ಸ್ʼಗಳ ಉತ್ಪಾದನೆ ಮತ್ತು ಬಳಕೆಯಲ್ಲಿ ಭಾರತವು ಸ್ವಾವಲಂಬನೆ ಸಾಧಿಸಬೇಕು ಹಾಗೂ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾಲುದಾರ ರಾಷ್ಟ್ರವಾಗಿ ಹೊರಹೊಮ್ಮಬೇಕು. ಈ ಯೋಜನೆಯು 7 ವರ್ಷಗಳ ಅವಧಿ ಹೊಂದಿದ್ದು, ಇದರಲ್ಲಿ ಸಮಗ್ರ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಎರಡು ವರ್ಷಗಳ ಅವಧಿ ಮತ್ತು ಮಾರಾಟದ ಮೇಲಿನ ಪ್ರೋತ್ಸಾಹಕ ವಿತರಣೆಗೆ ಐದು ವರ್ಷಗಳ ಅವಧಿ ಇದೆ ಎಂದು ಸಚಿವರು ಹೇಳಿದರು.
ಭೂಮಿಯಲ್ಲಿನ ಅಪರೂಪದ ಶಾಶ್ವತ ಮ್ಯಾಗ್ನೆಟ್ಗಳ ಉತ್ಪಾದನೆ ಉತ್ತೇಜಿಸಿ ಬಳಸುವ ಯೋಜನೆಯ (REPM) ಪಾಲುದಾರರ ಜತೆ ಸಚಿವಾಲಯದ ಕಚೇರಿಯಲ್ಲಿ ಮಹತ್ವದ ಸಮಾಲೋಚನೆ ನಡೆಸಲಾಯಿತು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 12, 2026
ಅಪರೂಪದ ಮ್ಯಾಗ್ನೆಟ್ಗಳನ್ನು ದೇಶಿಯವಾಗಿ ಉತ್ಪಾದಿಸುವ ಸಮಗ್ರ ಉತ್ಪಾದನ ಪೂರಕ ವ್ಯವಸ್ಥೆ ನಿರ್ಮಿಸುವ ಗುರಿ ಹೊಂದಿರುವ ₹7,280 ಕೋಟಿ ಮೊತ್ತದ ಯೋಜನೆಯನ್ನು ರಾಷ್ಟ್ರದ… pic.twitter.com/DKVCxblbvk
ಸಭೆಯಲ್ಲಿ, ಉದ್ಯಮ ಪ್ರತಿನಿಧಿಗಳು ತಮ್ಮ ಊತ್ಪಾದನಾ ಸಾಮರ್ಥ್ಯದ ವಿವರಗಳನ್ನು ನೀಡಿದರು ಹಾಗೂ ಯೋಜನೆಯಲ್ಲಿ ಸಕ್ತಿಯವಾಗಿ ಭಾಗವಹಿಸುವ ಒಲವನ್ನು ವ್ಯಕ್ತಪಡಿಸಿದರು.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications