Rashmika mandanna: ವಿಮಾನ ತುರ್ತು ಭೂಸ್ಪರ್ಶ, ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದೇನು?
ಶೂಟಿಂಗ್ಲ್ಲಿ ಕಾರ್ಯನಿರತರಾಗಿರುವ ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಅವರಿ ಇತ್ತೀಚೆಗಷ್ಟೇ ಮುಂಬೈಗೆ ತೆರಳಿದ್ದರು. ಬಳಿಕ ತಮ್ಮ ಚಿತ್ರೀಕರಣ ಪೂರ್ಣಗೊಳಿಸಿ ಹೈದರಾಬಾದ್ಗೆ ವಾಪಸ್ಸಾಗಲು ವಿಮಾನ ಹತ್ತಿದ್ದು, ಈ ವಿಮಾನ ತಾಂತ್ರಿಕ ಸಮಸ್ಯೆ ಹಿನ್ನೆಲೆ ಮುಂಬೈ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ಸದ್ಯ ಪ್ರಾಣಾಪಾಯದಿಂದ ಪಾರಾದ ರಶ್ಮಿಕಾ ಮಂದಣ್ಣ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇನ್ನು ಈ ವಿಚಾರವನ್ನು ರಶ್ಮಿಕಾ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಮಾನದಲ್ಲಿ ಶ್ರದ್ಧಾ ದಾಸ್ ಕೂಡ ಪ್ರಯಾಣ ಮಾಡುತ್ತಿದ್ದರು. ಶ್ರದ್ಧಾ ದಾಸ್ ಜೊತೆಗಿರುವ ಫೋಟೋವನ್ನು ರಶ್ಮಿಕಾ ಹಂಚಿಕೊಂಡು, "ಇಂದು ಪ್ರಾಣಾಪಾಯದಿಂದ ಪಾರಾಗಿದ್ದೇವೆ" ಎಂದು ಬರೆದುಕೊಂಡಿದ್ದಾರೆ. ಇನ್ನು ಇದನ್ನು ನೋಡಿದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದಿಂದ ತಮ್ಮ ವೃತ್ತಿಜೀವನ ಆರಂಭಿಸಿದ್ದು, ಸದ್ಯ ಇದೀಗ ಬಹುಭಾಷೆಗಳಲ್ಲೂ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ 'ಅನಿಮಲ್' ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಇದು ಜನಪ್ರಿಯತೆ ಹೆಚ್ಚಿಸಿದೆ. ಇನ್ನು ಬಹುನಿರೀಕ್ಷಿತ ಸಿನಿಮಾ ಪುಷ್ಪಾ 2ನಲ್ಲಿ ಕಾರ್ಯನಿರತರಾಗಿದ್ದಾರೆ.
'ಪುಷ್ಪ 2: ದಿ ರೂಲ್' ಅಲ್ಲದೇ ದಿ ಗರ್ಲ್ಫ್ರೆಂಡ್, ರೈನ್ಬೋ ಸಿನಿಮಾಗಳು ಸಹ ಸಾಲಿನಲ್ಲಿವೆ. ಕೊನೆಯದಾಗಿ ಕಾಣಿಸಿಕೊಂಡ ಅನಿಮಲ್ ಸಿನಿಮಾ ಯಶಸ್ವಿಯಾಗಿದೆ. ಚಿತ್ರ ಮಿಶ್ರ ಪ್ರತಿಕ್ರಿಯೆ ಸ್ವೀಕರಿಸಿದರೂ, ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಕಲೆಕ್ಷನ್ ಆಗಿದ ಎಂದು ತಿಳಿದುಬಂದಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ರಣ್ಬಿರ್ ಜೊತೆ ತೆರೆ ಹಂಚಿಕೊಂಡಿದ್ದರು.
ಇನ್ನು ನೇಹಾ ಧೂಪಿಯಾ ಅವರ ಚಾಟ್ ಶೋ 'ನೋ ಫಿಲ್ಟರ್ ನೇಹಾ'ದ ಶೂಟಿಂಗ್ನನಲ್ಲಿ ಭಾಗಿಯಾಗಲು ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮುಂಬೈಗೆ ಹಾರಿದ್ದರು. ಪಾಪರಾಜಿಗಳು ನಟಿ ವಿಡಿಯೋ ಹಂಚಿಕೊಂಡಿದ್ದರು. ಪಾಪರಾಜಿಗಳ ಕ್ಯಾಮರಾಗಳಿಗೆ ಪೋಸ್ ಕೊಡುವ ವೇಳೆ, ಅಭಿಮಾನಿಯೊಬ್ಬರು ಆಗಮಿಸಿ ನಟಿಗೆ ಕೆಂಗುಲಾಬಿ ಕೊಟ್ಟು ತಮ್ಮ ಅಭಿಮಾನ ವ್ಯಕ್ತಪಡಿಸಿದ್ದು, ಇದಕ್ಕೆ ವಿನಮ್ರತೆಯಿಂದ ಪ್ರತಿಕ್ರಿಯಿಸಿದ ಹಿನ್ನೆಲೆ ನಟಿಗೆ ನೆಟ್ಟಿಗರಿಂದ ಮೆಚ್ಚುಗೆಗಳ ಸುರಿಮಳೆಯೇ ಹರಿದುಬಂರುತ್ತಿದೆ.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications