Ayushman bhav: 'ಆಯುಷ್ಮಾನ್ ಭವ' ಅಭಿಯಾನಕ್ಕೆ ಬುಧವಾರ ರಾಷ್ಟ್ರಪತಿ ಮುರ್ಮು ಚಾಲನೆ, ಏನಿದು?
ನವದೆಹಲಿ, ಸೆಪ್ಟಂಬರ್ 12: ದೇಶದಾದ್ಯಂತ ಆರೋಗ್ಯ ಸೇವೆಗಳ ಲಭ್ಯತೆ, ಪ್ರಾಮುಖ್ಯತೆ ಕುರಿತು ಜನರಿಗೆ ತಿಳಿಸುವ ಸದುದ್ದೇಶದ 'ಆಯುಷ್ಮಾನ್ ಭವ' ಅಭಿಯಾನ ಆರಂಭವಾಗಲಿದೆ. ಈ ಅಭಿಯಾನಕ್ಕೆ ನಾಳೆ ಸೆಪ್ಟಂಬರ್ 13ರಂದು ಬುಧವಾರ ನಡೆಯಲಿರುವ ಪ್ರಮುಖ ಸಮಾರಂಭದಲ್ಲಿ ದ್ರೌಪದಿ ಮುರ್ಮು ಚಾಲನೆ ನೀಡಲಿದ್ದಾರೆ.
ಬುಧ್ವಾರ ಯುನಿವರ್ಸಲ್ ಹೆಲ್ತ್ ಕವರೇಜ್ (UHC) ಸಾಧಿಸಲು ಮತ್ತು ದೇಶದ ಜನರಿಗೆ ಆರೋಗ್ಯ ರಕ್ಷಣೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಮಹತ್ವದ ಪ್ರಗತಿ ಗುರುತಿಸುವ ವರ್ಚುವಲ್ ಸಮಾರಂಭ ನಡೆಯಲಿದೆ. ಈ ವೇಳೆ ಮಹತ್ವದ ಅಭಿಯಾನ ಉದ್ಘಾಟನೆಗೊಳ್ಳಲಿದೆ.

'ಆಯುಷ್ಮಾನ್ ಭವ' ಅಭಿಯಾ ಭಾರತ ದೇಶಾದ್ಯಂತ ಒಂದು ಆರೋಗ್ಯ ಉಪಕ್ರಮವಾಗಿದೆ. ದೇಶದ ಪ್ರತಿ ಹಳ್ಳಿ, ಗ್ರಾಮೀಣಭಾಗದಿಂದ ಹಿಡಿದು ನಗರದ ತಲುಪುವ ಮೂಲಕ ಆರೋಗ್ಯ ಸೇವೆಗಳ ಲಭ್ಯತೆ ತಿಳಿಸುವ ಗುರಿ ಈ ಅಭಿಯಾನ ಹೊಂದಿದೆ. ಉಪಕ್ರಮವು ಆಯುಷ್ಮಾನ್ ಭಾರತ್ ಕಾರ್ಯಕ್ರಮದ ಯಶಸ್ಸಿನ ಮೇಲೆ ರಚನೆಯಾಗಿದೆ.
ದೇಶದ ಜನರ ಆರೋಗ್ಯ ಖಚಿತತೆಗೆ ಈ ಅಭಿಯಾನ
ಸರ್ಕಾರದ ಈ ಅಭಿಯಾನವು ಆರೋಗ್ಯ ಇಲಾಖೆ, ಗ್ರಾಮಪಂಚಾಯತಿ, ಇತರ ಸರ್ಕಾರಿ ಇಲಾಖೆಗಳು, ಗ್ರಾಮ ಮತ್ತು ನಗರ ಪ್ರದೇಶಗಳ ಸ್ಥಳೀಯ ಚುನಾಯಿತ ಸಂಸ್ಥೆಗಳ ಸಮನ್ವಯದಲ್ಲಿ ಈ ಉಪಕ್ರಮ ನಡೆಯಲಿದೆ. ಭೌಗೋಳಿಕ ಅಡೆತಡೆ ದಾಟಿ ಎಲ್ಲ ವಿಧದ ಜನರು ಆರೋಗ್ಯ ಹಿಂದುಳಿದಿದ್ದಾರೆಯೇ? ಇಲ್ಲವಾ ಎಂಬುದನ್ನು ಈ ಮೂಲಕ ಖಚಿತಪಡಿಸಿಕೊಳ್ಳುವುದು ಮೂಲ ಉದ್ದೇಶವಾಗಿದೆ ಎಂದು ಕೇಂದ್ರದ ಮೂಲಗಳು ತಿಳಿಸಿವೆ.

ಆಯುಷ್ಮಾನ್ - ಆಪ್ಕೆ ದ್ವಾರ 3.0, ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ (HWC) ಆಯುಷ್ಮಾನ್ ಮೇಳಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು (CHC) ಹಾಗೂ ಆಯುಷ್ಮಾನ್ ಸಭೆಗಳ ಮೂಲಕ ಪ್ರತಿ ಗ್ರಾಮ ಮತ್ತು ಪಂಚಾಯಿತಿಗಳ ಮೂಲಕ ಆರೋಗ್ಯ ಸೇವೆಗಳನ್ನು ಜನರಿಗೆ ಸೂಕ್ತವಾಗಿ ದೊರಕುವ ಕುರಿತು ಅರಿವು ಮೂಡಿಸಲಾಗುವುದು.
ಅಭಿಯಾನದ ಸಿದ್ಧತೆ ಪರಿಶೀಲಿಸಿದ ಕೇಂದ್ರ ಸಚಿವ
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಅಭಿಯಾನ ಆರಂಭ ಕುರಿತು ಇಂದು ಮಂಗಳವಾರ ಪರಿಶೀಲಿಸಿದರು. ಸಚಿವರು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಆರೋಗ್ಯಾಧಿಕಾರಿಗಳ ಜೊತೆಗೆ ಚರ್ಚಿಸಿದರು. ಸಿದ್ಧತೆಗಳನ್ನು ಪರಿಶೀಲಿಸಿ ಅಗತ್ಯ ಸೂಚನೆ ನೀಡಿದರು.
ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆಯುಷ್ಮಾನ್ ಭವ ಆರೋಗ್ಯ ಸೇವೆಯ ಪ್ರಯೋಜನ ಬಗ್ಗೆ ಅವರು ತಿಳಿಸಿದರು. ಪ್ರತಿ ವರ್ಷ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಆರೋಗ್ಯ ಮೇಳಗಳನ್ನು ಆಯೋಜಿಸಲು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಒತ್ತು ನೀಡಿದರು ಮತ್ತು ಪ್ರತಿ ವೈದ್ಯಕೀಯ ಕಾಲೇಜುಗಳು ಬ್ಲಾಕ್ ಮಟ್ಟದಲ್ಲಿ ಆರೋಗ್ಯ ಶಿಬಿರವನ್ನು ನಡೆಸುವಂತೆ ಒತ್ತಾಯಿಸಿದರು.
-
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications