ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಭವನದಲ್ಲಿ ಹೋಳಿ ಕೂಟ ಇಲ್ಲ: ರಾಮನಾಥ್ ಕೋವಿಂದ್

|
Google Oneindia Kannada News

ನವದೆಹಲಿ, ಮಾರ್ಚ್ 4: ರಾಷ್ಟ್ರಪತಿ ಭವನದಲ್ಲಿ ಹೋಳಿ ಕೂಟ ಇಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿಳಿಸಿದ್ದಾರೆ.

ಕೊರೊನಾ ವೈರಸ್(ಕೋವಿಡ್19) ಸೋಂಕು ಹರಡುವ ಭೀತಿಯಿಂದಾಗಿ ಈ ಬಾರಿ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಹೋಳಿ ಕೂಟ ಇರುವುದಿಲ್ಲ ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಇಟಲಿಯಿಂದ ಬಂದ ರಾಹುಲ್‌ ಗಾಂಧಿಯನ್ನು ತಪಾಸಣೆಗೆ ಒಳಪಡಿಸಲಿ: ರಮೇಶ್ ಬಿಧೂರಿಇಟಲಿಯಿಂದ ಬಂದ ರಾಹುಲ್‌ ಗಾಂಧಿಯನ್ನು ತಪಾಸಣೆಗೆ ಒಳಪಡಿಸಲಿ: ರಮೇಶ್ ಬಿಧೂರಿ

ಕೊರೊನಾ ಸೋಂಕು ಹರಡದಂತೆ ನಾವು ಜಾಗ್ರತೆ ವಹಿಸಬೇಕು. ಮುಂಜಾಗ್ರತಾ ಕ್ರಮವಾಗಿ ಸಾಂಪ್ರದಾಯಿಕ ಹೋಳಿ ಕೂಟವನ್ನು ರಾಷ್ಟ್ರಪತಿ ಭವನದಲ್ಲಿ ನಡೆಸುವುದಿಲ್ಲ ಎಂದು ಹೇಳಿದ್ದಾರೆ.

Rashtrapati Bhavan Will Not Hold The Traditional Holi Gatherings

ಭಾರತದಲ್ಲಿ ಒಟ್ಟು 28 ಮಂದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇಟಲಿಯಿಂದ ಬಂದ ವಿದೇಶಿಗರ ಪೈಕಿ 15 ಮಂದಿಗೆ ಕೊರೊನಾ ಸೋಂಕು ಇದೆ ಎನ್ನುವುದು ತಿಳಿದುಬಂದಿದೆ.

ಇನ್ನು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಟೆಕ್ಕಿಯೊಬ್ಬರಲ್ಲಿ ಕೂಡ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು, ಅವರು ಸ್ನೇಹಿತರನ್ನೂ ಕೂಡ ಚಿಕಿತ್ಸೆಗೆ ಒಳಪಡಿಸಲಾಗಿದೆ.

English summary
President Ramnath Kovind Tweeted that, With alertness and safeguards, we all can help contain the outbreak of COVID-19 Novel Coronavirus. In a precautionary measure, the Rashtrapati Bhavan will not hold the traditional Holi gatherings.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X