Ratan Tata passed away: "ರತನ್ ಟಾಟಾ" ದೂರದೃಷ್ಟಿಯ ನಾಯಕ, ಮಾನವತಾವಾದಿ ಎಂದ ಮೋದಿ
ಭಾರತದ ಕೋಟ್ಯಾಂತರ ಜನ ಅಭಿಮಾನಿಗಳ ರತನ್ ಟಾಟಾ ಇನ್ನಿಲ್ಲ. ರತನ್ ಟಾಟಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರತನ್ ಟಾಟಾ ಅವರು ದೂರದೃಷ್ಟಿಯ ನಾಯಕರಾಗಿದ್ದರು ಹಾಗೂ ಸಹಾನುಭೂತಿ ಸ್ವಭಾವದವರು ಎಂದು ಮೋದಿ ಹೇಳಿದ್ದಾರೆ.
ರತನ್ ಟಾಟಾ ಅವರು, ವ್ಯಾಪಾರಕ್ಕೆ ಮಾತ್ರ ಸೀಮಿತರಾಗಿರಲಿಲ್ಲ. ಅವರ ಸಾಮಾಜಿಕ ಬದ್ಧತೆ ಹಾಗೂ ನಮತ್ರೆ ಎಲ್ಲರಿಗೂ ಮಾದರಿಯಾಗಿದೆ. ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ರತನ್ಟಾಟಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಭಾರತದ ಅತ್ಯಂತ ಹಳೆಯ ಹಾಗೂ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹವನ್ನು ಅವರು ಮುನ್ನಡೆಸಿದ್ದರು. ಟಾಟಾ ಜಿ ಅವರು ದೂರದೃಷ್ಟಿಯ ವ್ಯಾಪಾರ, ನಾಯಕತ್ವವನ್ನು ಹೊಂದಿದ್ದರು. ಅಸಾಧಾರಣ ವ್ಯಕ್ತಿಯಾಗಿದ್ದರು ಎಂದು ಶ್ಲಾಘಿಸಿದ್ದಾರೆ. ಟಾಟಾ ಅವರ ಪ್ರಭಾವವು ಕಾರ್ಪೊರೇಟ್ ಕ್ಷೇತ್ರವನ್ನು ಮೀರಿ ವಿಸ್ತರಿಸಿದೆ. ವ್ಯಾಪಾರ ಕ್ಷೇತ್ರಕ್ಕೆ ಮಾತ್ರ ಅವರು ಸೀಮಿತವಾಗಿರಲಿಲ್ಲ ಎಂದಿದ್ದಾರೆ.
Shri Ratan Tata Ji was a visionary business leader, a compassionate soul and an extraordinary human being. He provided stable leadership to one of India’s oldest and most prestigious business houses. At the same time, his contribution went far beyond the boardroom. He endeared… pic.twitter.com/p5NPcpBbBD
— Narendra Modi (@narendramodi) October 9, 2024
ಟಾಟಾ ಅವರು ತಮ್ಮ ವಿನಮ್ರತೆ ಹಾಗೂ ಕರುಣಾಮಯಿಯ ಸ್ವಭಾವದಿಂದ ಲಕ್ಷಾಂತರ ಜನರ ಪ್ರೀತಿಗೆ ಪಾತ್ರರಾಗಿದ್ದರು. ಸಮಾಜದ ಸುಧಾರಣೆಗೆ ಬದ್ಧತೆಯನ್ನು ಹೊಂದಿದ್ದರು. ಈ ಕಾರಣಗಳಿಂದ ಅವರು ಲಕ್ಷಾಂತರ ಜನರ ಮೆಚ್ಚುಗೆ ಹಾಗೂ ಪ್ರೀತಿಗೆ ಕಾರಣರಾಗಿದ್ದರು. ಇನ್ನು ರತನ್ ಟಾಟಾ ಅವರು ಕೇವಲ ವ್ಯಾಪಾರ ಕ್ಷೇತ್ರಕ್ಕೆ ಮಾತ್ರ ಸೀಮಿತರಾಗಿರಲಿಲ್ಲ. ವ್ಯಾಪಾರ ಹೊರತಾಗಿಯೂ ಹಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವ್ಯಾಪಾರ ಕ್ಷೇತ್ರ ಹಾಗೂ ದೇಶದ ಜನ ರತನ್ ಟಾಟಾ ಅವರಿಂದ ಪ್ರಭಾವಿತರಾಗಿದ್ದಾರೆ. ಅವರ ಮೇಲೆ ಅಪಾರ ಗೌರವ ಹಾಗೂ ಅವರ ಕಾರ್ಯಗಳಿಗೆ ಮೆಚ್ಚುಗೆ ಇದೆ ಎಂದು ಹೇಳಿದ್ದಾರೆ.

ರತನ್ ಟಾಟಾ ಇನ್ನಿಲ್ಲ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ರತನ್ಟಾಟಾ ಅವರನ್ನು ಸೋಮವಾರ ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರಂಭದಲ್ಲಿ ಅವರು ಸಾಮಾನ್ಯ ಆರೋಗ್ಯ ಪರೀಕ್ಷೆ ಒಳಪಟ್ಟಿದ್ದಾರೆ ಎಂದೇ ಹೇಳಲಾಗಿತ್ತು. ಅಲ್ಲದೇ ಅವರು ಸಹ ನಾನು ಆರೋಗ್ಯವಾಗಿಯೇ ಇದ್ದೇನೆ. ಚಿಂತಿಸಬೇಡಿ ಎಂದೇ ಹೇಳಿದ್ದರು. ಆದರೆ, ಬುಧವಾರ ಸಂಜೆಯ ವೇಳೆಗೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎನ್ನುವ ವರದಿಗಳು ಬರಲು ಪ್ರಾರಂಭಿಸಿತ್ತು. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅವರಿಗೆ 86 ವರ್ಷವಾಗಿತ್ತು. ಅವರು ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದರು.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications