'ಮಹಾರಾಜ'ನಿಗೆ ವೆಲ್ಕಮ್ ಬ್ಯಾಕ್ ಎಂದ ರತನ್ ಟಾಟಾ
ನವದೆಹಲಿ, ಅಕ್ಟೋಬರ್ 08: ಸುಮಾರು 68 ವರ್ಷಗಳ ಬಳಿಕ ಟಾಟಾಗೆ ಮರಳಿದ 'ಏರ್ ಇಂಡಿಯಾ'ವನ್ನು ರತನ್ ಟಾಟಾ ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ.
ಟಾಟಾ ಸಂಸ್ಥೆಗೆ ಏರ್ ಇಂಡಿಯಾ ಮತ್ತೆ ಮರಳುತ್ತಿರುವುದು ಖುಷಿಯ ವಿಚಾರವಾಗಿದೆ, ವಿಶ್ವದಲ್ಲೇ ಅತ್ಯಂತ ಪ್ರಭಾವಿ ಹಾಗೂ ಅತ್ಯುತ್ತಮ ಏರ್ಲೈನ್ ಎನಿಸಿಕೊಂಡಿರುವ ಏರ್ ಇಂಡಿಯಾಕ್ಕೆ ಮತ್ತೆ ಹಳೆಯ ಗತ್ತನ್ನು ತರಲು ಟಾಟಾ ಶ್ರಮಿಸಲಿದೆ ಎಂದು ಹೇಳಿದ್ದಾರೆ.
ಇದಲ್ಲದೆ, ಈ ಹಿಂದೆ ಜಿಆರ್ಡಿ ಅವರು ಏರ್ ಇಂಡಿಯಾವನ್ನು ಕಟ್ಟಿ ಬೆಳಸಿದ್ದನ್ನು ಕೂಡ ಸ್ಮರಿಸಿರುವ ರತನ್ ಟಾಟಾ ಒಂದೊಮ್ಮೆ ನಮ್ಮ ಮಧ್ಯೆ ಜಿಆರ್ಡಿ ಟಾಟಾ ಇದ್ದಿದ್ದರೆ ತುಂಬಾ ಖುಷಿ ಪಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ಸರ್ಕಾರಿ ಸ್ವಾಧೀನದಲ್ಲಿದ್ದ ದೇಶದ ಪ್ರತಿಷ್ಠಿತ ವಿಮಾನ ಯಾನ ಸಂಸ್ಥೆ ಏರ್ ಇಂಡಿಯಾ ಟಾಟಾ ಗ್ರೂಪ್ ಪಾಲಾಗಿದೆ.
ಹೂಡಿಕೆ ಹಾಗೂ ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಸರ್ಕಾರ ಬಿಡ್ಗೆ ಆಹ್ವಾನಿಸಿದಾಗ ಏಳು ಸಂಸ್ಥೆಗಳು ಡಿಸೆಂಬರ್ 2020ರೊಳಗೆ ಅರ್ಜಿ ಸಲ್ಲಿಸಿದ್ದರು.
ಅದರಲ್ಲಿ ಐವರು ಅರ್ಹತೆಯ ಅವಶ್ಯಕತೆಗಳನ್ನು ಪೂರೈಸದ ಕಾರಣ ಅನರ್ಹಗೊಂಡಿದ್ದರು. ಏರ್ ಇಂಡಿಯಾ ವಿಮಾನವನ್ನು ಮೂಲತಃ ಟಾಟಾ ಏರ್ಲೈನ್ಸ್ ಎಂದು ಕರೆಯಲಾಗುತ್ತಿತ್ತು.
1932ರಲ್ಲಿ ಜೆಆರ್ ಡಿ ಟಾಟಾ ಅವರು ಟಾಟಾ ಏರ್ ಲೈನ್ಸ್ ಆರಂಭಿಸಿದರು. ಕರಾಚಿಯಿಂದ ಬಾಂಬೆಗೆ ಮೊದಲ ವಿಮಾನಯಾನಕ್ಕೆ ಟಾಟಾ ಪೈಲಟ್ ಆಗಿದ್ದರು.
ವಿಮಾನ ಸಂಸ್ಥೆ ಟಾಟಾ ಅವರ ಕನಸಾಗಿತ್ತು. 1948ರಲ್ಲಿ ಏರ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್ (ಎಐಟಿಎ) ಸ್ಥಾಪಿಸಿದರು. 1978ರ ತನಕ ಏರ್ ಇಂಡಿಯಾದ ಏಳಿಗೆಗೆ ಶ್ರಮಿಸಿದ್ದರು. ಆದರೆ, ಟಾಟಾ ಕಟ್ಟಿ ಬೆಳೆಸಿದ ಸಂಸ್ಥೆ ರಾಜಕೀಯ ತಂತ್ರಕ್ಕೆ ಕೈ ತಪ್ಪಿತು. ದೇಶಕ್ಕಾಗಿ ಟಾಟಾ ಅವರು ತ್ಯಾಗಕ್ಕೆ ಸಿದ್ಧವಾಗಬೇಕಾಯಿತು.
1953ರಲ್ಲಿ ಅಂದಿನ ಪ್ರಧಾನಿ ಜವಾಹರ ಲಾಲ್ ನೆಹರೂ ಅವರು ಏರ್ ಇಂಡಿಯಾವನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಘೋಷಿಸಲು ಮುಂದಾದಾಗ ಟಾಟಾಗೆ ನಿಜಕ್ಕೂ ಆಘಾತವಾಗಿತ್ತು.
ತಪ್ಪನ್ನು ಸರಿಪಡಿಸುವ ನಿಟ್ಟಿನಲ್ಲಿ ಟಾಟಾ ಅವರನ್ನು ಸಂಸ್ಥೆಯ ಚೇರ್ಮನ್ ಆಗಿ ಮುಂದುವರೆಯುವಂತೆ ನೆಹರೂ ಒಪ್ಪಿಸಿದರು. 1977ರಲ್ಲಿ ಅಂದಿನ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಟಾಟಾ ಅವರನ್ನು ಸಂಸ್ಥೆ ಚೇರ್ಮನ್ ಸ್ಥಾನದಿಂದ ಕೆಳಗಿಸಿದರು. 1946ರಲ್ಲಿ ಟಾಟಾ ಏರ್ ಲೈನ್ಸ್ ಸಾರ್ವಜನಿಕ ಸಂಸ್ಥೆಯಾಗಿ ನಂತರ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಆಗಿದ್ದು ಈಗ ಇತಿಹಾಸ.
ಕೇಂದ್ರ ಬಜೆಟ್ನಲ್ಲಿ ಸರ್ಕಾರ ಘೋಷಿಸಿದಟ ಸುಮಾರು 1.75 ಟ್ರಿಲಿಯನ್ ಡಿವೆಸ್ಟ್ ಮೆಂಟ್ ಗುರಿಯನ್ನು ಸಾಧಿಸುವ ಗುರಿಯೊಂದಿಗೆ ಸರ್ಕಾರವು ರಾಷ್ಟ್ರೀಯ ವಿಮಾನಯಾನದ ಖಾಸಗೀಕರಣವನ್ನು FY22ರಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿತ್ತು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ನಷ್ಟದಲ್ಲಿರುವ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡಲು ಮುಂದಾಗಿದೆ. ರಾಷ್ಟ್ರೀಯ ವಾಹಕವನ್ನು ನಡೆಸಲು ಸರ್ಕಾರವು ಪ್ರತಿನಿತ್ಯ ಸುಮಾರು 20 ಸಾವಿರ ಕೋಟಿ ಮಿಲಿಯನ್ ರೂಪಾಯಿಗಳನ್ನು ಕಳೆದುಕೊಳ್ಳುತ್ತಿದೆ. ಇದು 70 ಸಾವಿರ ಕೋಟಿ ಅಧಿಕ ನಷ್ಟವನ್ನು ಉಂಟು ಮಾಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications