Radia Audio tapes: ಸುಪ್ರೀಂಕೋರ್ಟಲ್ಲಿ ರತನ್ ಟಾಟಾ ಅರ್ಜಿ ವಿಚಾರಣೆ
ನವದೆಹಲಿ, ಸೆ.1: ಲಂಡನ್ ಮೂಲದ ಆರ್ಥಿಕ ಸಲಹೆಗಾರ ಜನಕ್ ರಾಡಿಯಾ ಪತ್ನಿ ನೀರಾ ರಾಡಿಯಾ ಆಡಿಯೋ ಟೇಪ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರತನ್ ಟಾಟಾ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ರಾಡಿಯಾ ಟೇಪ್ಸ್ ನಿಂದ ಆಂತರಿಕ ವಿಷಯಗಳು ಹೊರ ಬರಬಹುದು ಅದು ಸಾರ್ವಜನಿಕವಾಗಿ ಬಿತ್ತರಿಸುವುದು ತರವಲ್ಲ ಎಂದು ರತನ್ ಟಾಟಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಟೆಲಿಕಾಂ, ಏವಿಯೇಷನ್, ಪವರ್ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ, ಪ್ರಮುಖ ಕಾರ್ಪೊರೇಟ್ ಲಾಬಿಗಾರ್ತಿ ಎನಿಸಿಕೊಂಡಿದ್ದ ನೀರಾ ಹಾಗೂ ಆಕೆ ಹುಟ್ಟುಹಾಕಿದ್ದ ಸಂಸ್ಥೆ ಕಾಲಿಟ್ಟ ಪರಿಸರದಲ್ಲಿ ಹಣದ ಹೊಳೆ ಹರಿದಾಡಿತ್ತು. ಪತ್ರಕರ್ತರು, ಪ್ರಮುಖ ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಾರ್ವಜನಿಕ ವಲಯದ ಉದ್ಯಮಗಳ ಮುಖ್ಯಸ್ಥರ ಜೊತೆ ನೀರಾ ನಡೆಸಿದ ಸಂಭಾಷಣೆ ಭಾರಿ ಸಂಚಲನ ಮೂಡಿಸಿತ್ತು.
ನೀರಾ ಹಿನ್ನೆಲೆ: ಸಿಂಗಪುರ ಏರ್ ಲೈನ್ ಅನ್ನು ಭಾರತಕ್ಕೆ ತರಲು ಸಹಾರಾ ಏರ್ ಲೈನ್ಸ್ ಯತ್ನಿಸುತ್ತಿದ್ದ ಕಾಲದಲ್ಲಿ ಬರೀ ಕನ್ಸಲ್ಟೆಂಟ್ ಆಗಿದ್ದ ಈಕೆ ಲಾಬಿಕೋರಳಾಗಿ ಬೆಳೆದು ನಂತರ ನೇರ ಅಂದಿನ ನಾಗರಿಕ ವಿಮಾನಯಾನ ಸಚಿವರ ಜೊತೆ ಸಂಪರ್ಕ ಬೆಳೆಸಿದರು. ದಿವಂಗತ ಅನಂತ್ ಕುಮಾರ್ ಹಾಗೂ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಪರಿಚಯವಾದ ಬಳಿಕ ನೀರಾ ಹಿಂತಿರುಗಿ ನೋಡಲಿಲ್ಲ.

2000 ಇಸವಿಯಲ್ಲಿ ಇಡೀ ವಿಮಾನಯಾನ ಉದ್ಯಮವೇ ಆಕೆಯತ್ತ ಬೆರಗು ನೋಟದಿಂದ ನೋಡುವಂತಾಯಿತು. ಕೇವಲ 1 ಲಕ್ಷ ಬಂಡವಾಳದೊಂದಿಗೆ ಖಾಸಗಿ ಏರ್ ಲೈನ್ ಆರಂಭಿಸುವುದಾಗಿ ಘೋಷಿಸಿದ ನೀರಾ, NOC ಪಡೆದು ಕ್ರೌನ್ ಎಕ್ಸ್ ಪ್ರೆಸ್ ಎಂಬ ಹೆಸರಿನಲ್ಲಿ ದೇಶಿ ಖಾಸಗಿ ವಿಮಾನಯಾನ ಆರಂಭಿಸುವ ಕನಸು ಕಂಡಿದ್ದರು.
ವಿಮಾನ ಮೇಲಕ್ಕೇರದಿದ್ದರೂ 100 ಕೋಟಿ ರು ಗೂ ಅಧಿಕ ಎಫ್ ಡಿ ಐ ಹಣ ಮುಂದಿನ ಯೋಜನೆಗಳಿಗೆ ಬಂಡವಾಳವಾಯಿತು. ಮುಂದಿನ ವರ್ಷವೇ ಟಾಟಾ ಸಂಸ್ಥೆಗೆ ಪ್ರಚಾರ ನೀಡಲು ವೈಷ್ಣವಿ ಕಾರ್ಪೊರೇಟ್ ಕಮ್ಯೂನಿಕೇಷನ್ ಹುಟ್ಟು ಹಾಕಿ, ಅಂಬಾನಿ ಸೇರಿದಂತೆ ಹಲವು ಪ್ರಮುಖ ಉದ್ಯಮಿಗಳ ಪಿಆರ್ ಆಗಿ ಬೆಳೆದರು.
ಆದರೆ, ರಾಡಿಯಾ ಟೇಪ್ಸ್ ಹೊರ ಬಂದ ಬಳಿಕ ಟಾಟಾ ಬೆಂಬಲ ಸಿಗದೆ, ಕಾನೂನು ಸಮರ ಎದುರಿಸುವಂತಾಯಿತು. ಇನ್ನೊಂದೆಡೆ, 1.76 ಲಕ್ಷ ಕೋಟಿ ರು ಮೌಲ್ಯದ 2ಇ ಹಗರಣದ ಪ್ರಮುಖ ಆರೋಪಿ ಡಿಎಂಕೆ ನಾಯಕ ರಾಜಾ ರಾಜೀನಾಮೆ ಪಡೆಯುವಲ್ಲಿ ಪ್ರತಿಪಕ್ಷಗಳು ಯಶಸ್ವಿಯಾದವು.
"ರಾಡಿಯಾ ಟೇಪ್ಗಳು" ಎಂದು ಹೆಸರಾದ ವಿವಾದ - ಹೇಗೆ ಸೋರಿಕೆಯಾಯಿತು ಎಂಬುದನ್ನು ವಿವರಿಸುವ ಸರ್ಕಾರ ಸಲ್ಲಿಸಿದ ವರದಿಯ ಪ್ರತಿಯನ್ನು ನೀಡುವಂತೆ ಸುಪ್ರೀಂ ಕೋರ್ಟ್ಗೆ ಆಗಸ್ಟ್ 2012 ರಲ್ಲಿ ರತನ್ ಟಾಟಾ ಕೋರಿದ್ದರು. ಇದಕ್ಕೂ ಮುನ್ನ ಖಾಸಗಿತನಕ್ಕೆ ಧಕ್ಕೆ ಎಂದು 2011ರಲ್ಲೇ ಅರ್ಜಿ ಹಾಕಿದ್ದರು. 2014ರಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗಿತ್ತು.
2ಜಿ ಹಗರಣದಲ್ಲಿ ಭಾಗಿ, ಡೀಲ್ ಕುದುರಿಸುವುದರಲ್ಲಿ ಎತ್ತಿದ ಕೈ ಎನಿಸಿಕೊಂಡಿದ್ದ ಉದ್ಯಮಿ ನೀರಾ ರಾಡಿಯಾ ಹೆಸರು ಒಂದು ದಶಕದ ಬಳಿಕ ಮತ್ತೊಮ್ಮೆ ಕೇಳಿ ಬಂದಿದೆ. ಯೆಸ್ ಬ್ಯಾಂಕ್ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗದಿಂದ ತನಿಖೆ ಜಾರಿಯಲ್ಲಿದ್ದು, ನೀರಾ ರಾಡಿಯಾಗೆ ಇಂದು ಸಮನ್ಸ್ ಕಳಿಸಲಾಗಿದೆ. ನೀರಾ ಹಾಗೂ ಅವರ ತಂಗಿ, ನಯತಿ ಹೆಲ್ತ್ ಕೇರ್ ಹಾಗೂ ರಿಸರ್ಚ್ ಎನ್ ಸಿ ಆರ್ ಪ್ರೈ ಲಿಮಿಟೆಡ್ ಸಂಸ್ಥೆ ಅಧಿಕಾರಿಗಳಿಗೆ ಸಮನ್ಸ್ ತಲುಪಿಸಲಾಗಿದೆ.
ಯೆಸ್ ಬ್ಯಾಂಕ್ ನಿಂದ ಒಂದು ಯೋಜನೆಗೆಂದು ಸಾಲ ಪಡೆದು ಮತ್ತೊಂದು ಯೋಜನೆಯಲ್ಲಿ ಹಣ ತೊಡಗಿಸಿ, ಅವ್ಯವಹಾರ ಮಾಡಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರಾ ಹಾಗೂ ಇತರರು ತನಿಖೆ, ವಿಚಾರಣೆ ಎದುರಿಸಬೇಕಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications