ಪಿಎಂ ಕೇರ್ಸ್ ಫಂಡ್ನ ಅಡಳಿತ ವ್ಯವಸ್ಥೆಯಲ್ಲಿ ಸುಧಾ ಮೂರ್ತಿ, ರತನ್ ಟಾಟಾ ಮತ್ತಿತರರು
ನವದೆಹಲಿ, ಸೆ. 21: ತುರ್ತು ಪರಿಸ್ಥಿತಿಯಲ್ಲಿ ಹಣದ ನೆರವು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ನಡೆಸುತ್ತಿರುವ ಪಿಎಂ ಕೇರ್ಸ್ ಫಂಡ್ನ ಟ್ರಸ್ಟ್ಗೆ ರತನ್ ಟಾಟಾ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಸೇರಿಸಿಕೊಳ್ಳಲಾಗಿದೆ.
ಟಾಟಾ ಸನ್ಸ್ ಸಂಸ್ಥಾಪಕ ಅಧ್ಯಕ್ಷ ರತನ್ ಟಾಟಾ, ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಕೆ.ಟಿ. ಥಾಮಸ್, ಮಾಜಿ ಲೋಕಸಭಾ ಸ್ಪೀಕರ್ ಕರಿಯಾ ಮುಂಡಾ ಮೊದಲಾದವರನ್ನು ಪಿಎಂ ಕೇರ್ಸ್ ಫಂಡ್ನ ಟ್ರಸ್ಟೀ ಆಗಿ ನಾಮನಿರ್ದೇಶನ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಮೊದಲೇ ಟ್ರಸ್ಟೀಗಳಾಗಿದ್ದಾರೆ.
ಇನ್ಫೋಸಿಸ್ ಫೌಂಡೇಶನ್ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಮಾಜಿ ಮಹಾಲೇಖಪಾಲ (ಸಿಎಜಿ) ರಾಜೀವ್ ಮೆಹರಿಷಿ, ಟೀಚ್ ಆಫಾರ್ ಇಂಡಿಯಾದ ಸಹ-ಸಂಸ್ಥಾಪಕ ಆನಂದ್ ಷಾ ಅವರನ್ನು ಪಿಎಂ ಕೇರ್ಸ್ ಫಂಡ್ನ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಬುಧವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ..

ನಿನ್ನೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕೇರ್ಸ್ ಫಂಡ್ನ ಟ್ರಸ್ಟೀ ಮಂಡಳಿಯ ಸಭೆ ನಡೆಸಿದ್ದರು. ಟ್ರಸ್ಟ್ಗೆ ಹೊಸದಾಗಿ ಸದಸ್ಯರಾದವರು ಆ ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಜೊತೆಯಲ್ಲಿದ್ದರು.
"ಪಿಎಂ ಕೇರ್ಸ್ ಫಂಡ್ನ ಅಗತ್ಯ ಭಾಗವಾಗಿರುವ ಟ್ರಸ್ಟೀಗಳನ್ನು ಪ್ರಧಾನಿಗಳು ಸ್ವಾಗತಿಸಿದರು... ಹೊಸ ಟ್ರಸ್ಟೀಗಳು ಮತ್ತು ಸಲಹಗಾರರ ಪಾಲ್ಗೊಳ್ಳುವಿಕೆಯಿಂದಾಗಿ ಪಿಎಂ ಕೇರ್ಸ್ ಫಂಡ್ನ ಕಾರ್ಯನಿರ್ವಹಣೆ ಹೆಚ್ಚು ಸಮರ್ಪಕವಾಗಬಹುದು ಎಂದು ಪ್ರಧಾನಿ ತಿಳಿಸಿದರು" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಹೊಸದಾಗಿ ನಾಮಾಂಕಿತಗೊಂಡ ಟ್ರಸ್ಟೀಗಳು, ಪಿಎಂ ಕೇರ್ಸ್ ಫಂಡ್ನಿಂದ ಕಷ್ಟಕಾಲದಲ್ಲಿ ನೀಡಲಾದ ದೇಣಿಗೆ ನೆರವಿನ ಮಹತ್ವವನ್ನು ತಿಳಿಸಿದರೆನ್ನಲಾಗಿದೆ.
"ತುರ್ತುಸ್ಥಿತಿ ಮತ್ತು ಕಷ್ಟ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಸ್ಪಂದಿಸಲು ಪಿಎಂ ಕೇರ್ಸ್ ವಿಶಾಲ ದೃಷ್ಟಿಕೋನ ಹೊಂದಿರುವುದನ್ನು ಸಭೆಯಲ್ಲಿ ಚರ್ಚಿಸಲಾಯಿತು," ಎಂದು ಹೇಳಲಾಗಿದೆ.
2020ರಲ್ಲಿ ಫಂಡ್ ಸ್ಥಾಪನೆ:
ಕೋವಿಡ್ ಸಾಂಕ್ರಾಮಿಕ ರೋಗ ಪರಿಸ್ಥಿತಿ ಉದ್ಭವಿಸಿದ 2020ರಲ್ಲಿ ಪಿಎಂ ಕೇರ್ಸ್ ಫಂಡ್ ಅನ್ನು ಪ್ರಾರಂಭಿಸಲಾಗಿದ್ದು. ತುರ್ತು ಪರಿಹಾರ ಕ್ರಮಗಳ ಭಾಗವಾಗಿ ಅದರ ಸ್ಥಾಪನೆಯಾಗಿದ್ದು. ಸ್ವತಃ ಪ್ರಧಾನಿಗಳೇ ಅದರ ಛೇರ್ಮನ್. ಈ ಫಂಡ್ಗೆ ನೀಡುವ ದೇಣಿಗೆಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ.
ಪಿಎಂ ಕೇರ್ಸ್ ಫಂಡ್ನಿಂದ ಮಕ್ಕಳಿಗೆ ಪ್ರತ್ಯೇಕವಾಗಿ ನಿಧಿ ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳನ್ನು ಆರಂಭಿಸಲಾಗಿದೆ. ಕೋವಿಡ್ ರೋಗಕ್ಕೆ ತಂದೆ ತಾಯಿ ಅಥವಾ ಪೋಷಕರು, ದತ್ತು ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 2021ರ ಮೇ 29ರಂದು ಪಿಎಂ ಕೇರ್ಸ್ ಫಂಡ್ನಿಂದ ಪ್ರತ್ಯೇಕ ನಿಧಿ ಇಡಲಾಗಿತ್ತು.
(ಒನ್ಇಂಡಿಯಾ ಸುದ್ದಿ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications