ದೇಶದಲ್ಲಿ ಮಧ್ಯಮ ವರ್ಗದವರು ಸಾಲ ಮಾಡುವ ಪ್ರಮಾಣ ಹೆಚ್ಚಳ!
ದೇಶದಲ್ಲಿ ಕಳೆದ 10 ವರ್ಷಗಳಿಂದ ಮಧ್ಯಮ ವರ್ಗದವರು ಸಂಕಷ್ಟಪಡುವ ಪರಿಸ್ಥಿತಿ ಇದೆ. ಮುಂದಿನ ದಿನಗಳಲ್ಲೂ ಇದೇ ಮುಂದುವರಿಯಬಹುದು ಎನ್ನುವ ವಿಷಯ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕವು ಸೇರಿದಂತೆ ದೇಶದಲ್ಲಿ ಇದೀಗ ಬೆಲೆ ಏರಿಕೆಯ ಪರ್ವಕಾಲ ಅಂತಲೇ ಹೇಳಬಹುದು. ಅಷ್ಟು ಮಾತ್ರವಲ್ಲ ಬೆಲೆ ಏರಿಕೆಯ ಜೊತೆ ಜೊತೆಗೆ ಹಣದುಬ್ಬರವೂ ಹೆಚ್ಚಾಗುತ್ತಿದೆ ಎನ್ನುವ ವಿಷಯವು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಕಳೆದ 10 ವರ್ಷಗಳಿಂದಲೂ ದೇಶದಲ್ಲಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಬರುವ (ಆದಾಯ) ಹಣವು ಅಷ್ಟೇ ಇದೆ. ಆದರೆ, ಆದಾಯ ಇರುವಷ್ಟೇ ಇದ್ದರೂ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ಮಧ್ಯಮ ವರ್ಗದವರು ಇನ್ನಿಲ್ಲದಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾರ್ಸೆಲಸ್ ಕಂಪನಿಯ ಸ್ಥಾಪಕ ಹಾಗೂ ಹೂಡಿಕೆದಾರರಾದ ಸೌರಭ್ ಮುಖರ್ಜಿ ಅವರು ಹೇಳಿದ್ದಾರೆ. ಕಳೆದ 10 ವರ್ಷಗಳಿಂದ ನೈಜ ಆದಾಯದ ಬೆಳವಣಿಗೆ ಕಂಡಿಲ್ಲ. ಆದರೆ, ಹಣದುಬ್ಬರವು ಅಂದಾಜು 50 ಪ್ರತಿಶತ ಹೆಚ್ಚಾಗಿದ್ದು, ಖರೀದಿ ಮಾಡುವ ಶಕ್ತಿ ಇಲ್ಲದಂತಾಗಿದೆ ಎಂದಿದ್ದಾರೆ.

ಇತ್ತೀಚಿನ ರ್ಷದವಲ್ಲಿ ದೇಶದ ಹಣಕಾಸು ವ್ಯವಸ್ಥೆಯಲ್ಲಿ ಭಾರೀ ಏರಿಳಿತ ಕಂಡಿದೆ. ದೇಶದಲ್ಲಿ ಆರ್ಥಿಕ ಅಸಮಾನತೆ ಎನ್ನುವುದು ಇನ್ನಷ್ಟು ಹೆಚ್ಚಳವಾಗುತ್ತಿದೆ. ಕೃತಕ ಬುದ್ಧಿಮತ್ತೆ (AI) ಹಾಗೂ ಉದ್ಯೋಗದಲ್ಲಿ ಯಂತ್ರಗಳ ಬಳಕೆಯ ಕಾರಣದಿಂದಾಗಿ ಉದ್ಯೋಗ ಭದ್ರತೆಯ ಮೇಲೆ ಪರಿಣಾಮ ಬೀರುತ್ತಿದೆ. ಹಣಕಾಸಿನ ವಿಚಾರದಲ್ಲಿ ಭಾರತದಲ್ಲಿ ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದೇ ಸಮಯದಲ್ಲಿ ಜನ ಸಾಲ ಮಾಡುವುದು ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ.
ಜನರಿಗೆ ಪ್ರತಿ ತಿಂಗಳು ಬರುತ್ತಿರುವ ಆದಾಯದಲ್ಲಿ ಯಾವುದೇ ಹೆಚ್ಚಳ ಆಗಿಲ್ಲ. ಆದರೆ, ಆದಾಯ ಬರುವುದರ ಹೊರತಾಗಿಯೂ ಕಳೆದ ಐದು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ವಿಮಾನ ನಿಲ್ದಾಣ, ಶಾಪಿಂಗ್ ಮಾಲ್ ಹಾಗೂ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಬೆಲೆ ಏರಿಕೆಯಾಗಿದೆ. ಈ ಕಾರಣಗಳಿಂದಾಗಿ ಜನ ಸಾಲ ಮಾಡುವುದು ಹೆಚ್ಚಾಗಿದೆ ಎಂದು ಮುಖರ್ಜಿ ಅವರು ವಿವರಿಸಿದ್ದಾರೆ.
ದೇಶದಲ್ಲಿ ಬಳಕೆ ಪ್ರಮಾಣವು ಭಾರೀ ಹೆಚ್ಚಳವಾಗಿದೆ. ಅನೇಕ ಭಾರತೀಯರು ಅವರ ಜೀವನ ಶೈಲಿಯನ್ನು ಮುಂದುವರಿಸಲು ಅಥವಾ ಹೊಸ ಜೀವನ ಶೈಲಿಗೆ ಹೊಂದಾಣಿಕೆ ಮಾಡಿಕೊಳ್ಳಲು ಹೆಚ್ಚು ಸಾಲವನ್ನು ಮಾಡುತ್ತಿದ್ದಾರೆ. ಕಂಪನಿಗಳು ನೇರವಾಗಿ ಈ ವಿಷಯವನ್ನು ಒಪ್ಪಿಕೊಳ್ಳದೆ ಇದ್ದರೂ ಎಐ ತಂತ್ರಜ್ಞಾನ ಅಳವಡಿಕೆಯಿಂದಾಗಿ ಉದ್ಯೋಗ ನಷ್ಟ ಎದುರಾಗಿದೆ ಎಂದು ಹೇಳಲಾಗಿದೆ.
ನಾನು ಮಾತನಾಡಿರುವ ಪ್ರತಿಯೊಬ್ಬ CEO ಸಹ ಎಷ್ಟು AI ಬಳಸಲು ಸಾಧ್ಯವಿದೆ ಎನ್ನುವ ಬಗ್ಗೆಯೇ ವಿಚಾರ ಮಾಡುತ್ತಾರೆ. ಎಐನಿಂದ ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಶ್ರೀಮಂತರ ಆದಾಯ ಹೆಚ್ಚಳವಾಗುತ್ತಿದೆ ಎನ್ನುವ ಅಭಿಪ್ರಾಯವೂ ಕೇಳಿ ಬಂದಿದೆ. ಭಾರತದಲ್ಲಿ ಈಗ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಇದರಿಂದ ರಿಯಲ್ ಎಸ್ಟೇಟ್ ಮೇಲೂ ಪರಿಣಾಮ ಬೀರುತ್ತಿದೆ. ಈ ರೀತಿ ಇರುವಾಗಲೇ ಕಳೆದ 10 ವರ್ಷಗಳಿಂದ ಆರ್ಥಿಕ ಪರಿಸ್ಥಿತಿ ಯಾವ ರೀತಿ ಬದಲಾಗಿದೆ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications