Government Employees: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಡಿಎ ಹೆಚ್ಚಳ ಬೆನ್ನಲ್ಲೇ ವಿವಿಧ ಭತ್ಯೆ ಏರಿಕೆ: ಇಲ್ಲಿದೆ ಮಾಹಿತಿ
ನವದೆಹಲಿ, ಮೇ 04: ಲೋಕಸಭಾ ಚುನಾವಣೆ ಹೊತ್ತಲಿ ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದೆ. ಕೇಂದ್ರ ಸರ್ಕಾರ ಕಳೆದ ಮಾರ್ಚ್ ನಲ್ಲಿ ತುಟ್ಟಿಭತ್ಯೆಯನ್ನು ಶೇಕಡ 4 ರಷ್ಟ್ರು ಹೆಚ್ಚಳ ಮಾಡಿದ ಬೆನ್ನಲ್ಲೇ ವಿವಿಧ ಭತ್ಯೆ ಶೇ.25 ರಷ್ಟರ ಏರಿಕೆ ಮಾಡಿದೆ.
ಹೌದು, ಸರ್ಕಾರಿ ನೌಕರರ ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್ ಸಬ್ಸಿಡಿ, ನಿವೃತ್ತಿ ಗ್ರಾಚ್ಯುಟಿ ಸಹ ಶೇಕಡ 25 ರಷ್ಟು ಕೇಂದ್ರ ಏರಿಕೆ ಮಾಡಲಾಗಿದೆ. ನಿವೃತ್ತಿ ಗ್ರಾಚ್ಯುಟಿ ಮೊತ್ತ 20 ಲಕ್ಷ ರೂಪಾಯಿಯಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ತುಟ್ಟಿ ಭತ್ಯೆಯನ್ನು ಶೇ. 4ರಷ್ಟು ಹೆಚ್ಚಳ ಮಾಡಿದ್ದರಿಂದ ನೌಕರರು ಪಡೆಯುತ್ತಿರುವ ಒಟ್ಟು ತುಟ್ಟಿಭತ್ಯೆ ಪ್ರಮಾಣ ಶೇಕಡ 50 ದಾಟಿದ ಹಿನ್ನೆಲೆಯಲ್ಲಿ ಇತರೆ ಭತ್ಯೆಗಳು ಏರಿಕೆಯಾಗಿವೆ ಎಂದು ಹೇಳಲಾಗಿದೆ. ಲಕ್ಷಾಂತರ ನೌಕರರು ಸೌಲಭ್ಯಗಳನ್ನು ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸಿನ ಅನ್ವಯ ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ.

ಸಿಬ್ಬಂದಿ ಮತ್ತು ಸಾರ್ವಜನಿಕ ಕೊಂದು ಕೊರತೆ ಸಚಿವಾಲಯವು ಕಳೆದ ಏಪ್ರಿಲ್ 24ರಂದು ಹೊರಡಿಸಿದ ಜ್ಞಾಪನದಲ್ಲಿ ಈ ಮಾಹಿತಿ ನೀಡಲಾಗಿದೆ. ಸಿಬ್ಬಂದಿ ಹಾಗೂ ತರಬೇತಿ ಇಲಾಖೆ ಇತ್ತೀಚೆಗೆ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್ ಸಬ್ಸಿಡಿಗೆ ಸಂಬಂಧಿಸಿ ವಿವಿಧ ಮಾಹಿತಿಗಳನ್ನು ಪಡೆದಿತ್ತು. ಕೇಂದ್ರ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಶೇ.50ರಷ್ಟು ಡಿಎ ಹೆಚ್ಚಳ ಮಾಡಲಾಗಿತ್ತು.
ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳವಾಗುತ್ತಲೇ ಅವರ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್ ಸಬ್ಸಿಡಿ ಕೂಡ ಜಾಸ್ತಿಯಾಗುತ್ತದೆ. ಅದರಂತೆ, ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದೆ ಎಂದು ತಿಳಿದುಬಂದಿದೆ. ನಿವೃತ್ತಿ ಗ್ರಾಚ್ಯುಟಿ ಮೊತ್ತ 20 ಲಕ್ಷ ರೂಪಾಯಿಯಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿತ್ತು. ಇದರೊಂದಿಗೆ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ.
ಸಿಬ್ಬಂದಿ ಹಾಗೂ ತರಬೇತಿ ಇಲಾಖೆ ಇತ್ತೀಚೆಗೆ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್ ಸಬ್ಸಿಡಿಗೆ ಸಂಬಂಧಿಸಿ ವಿವಿಧ ಮಾಹಿತಿಗಳನ್ನು ಪಡೆದಿತ್ತು. ಕೇಂದ್ರ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಶೇ.50ರಷ್ಟು ಡಿಎ ಹೆಚ್ಚಳ ಮಾಡಲಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications