ಬಿಜೆಪಿ ಕಾರ್ಯಕರ್ತ ರವೀಂದ್ರ ಜಡೇಜಾ ಸಿಎಸ್ಕೆ ಗೆಲ್ಲಲು ನೆರವಾದರು: ಕ್ರೀಡೆಯಲ್ಲಿ ರಾಜಕೀಯ ಬೆರೆಸಿದ ಅಣ್ಣಾಮಲೈ
ಚೆನ್ನೈ, ಮೇ 30: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಗೆಲುವು ಸಾಧಿಸಿದೆ. ಕೊನೆಯ ಎರಡು ಎಸೆತಗಳಲ್ಲಿ ಒಂದು ಬೌಂಡರ್ ಹಾಗೂ ಒಂದು ಸಿಕ್ಸರ್ ಹೊಡೆಯುವ ಮೂಲಕ ರವೀಂದ್ರ ಜಡೇಜಾ ಅವರು ಐಪಿಎಲ್ ಪೈನಲ್ ಪಂದ್ಯವನ್ನು ಗೆಲ್ಲಲು ಸಿಎಸ್ಕೆಗೆ ನೆರವಾದರು. ಈ ವಿಚಾರವಾಗಿ ಮಾತನಾಡಿರುವ ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರು ಕ್ರೀಡೆಯಲ್ಲಿ ರಾಜಕೀಯ ಬೆರೆಸಲು ಯತ್ನಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ರವೀಂದ್ರ ಜಡೇಜಾ ಅವರು ಹೆಚ್ಚಿನ ಸಂಖ್ಯೆಯ ಐಪಿಎಲ್ ಗೆಲ್ಲಲು ಸಿಎಸ್ಕೆಗೆ ನೆರವಾಗಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು ಈ ಮಾತುಗಳನ್ನು ಹೇಳಿದ್ದಾರೆ.

ರೋಚಕ ಹಣಾಹಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಅಂತಿಮವಾಗಿ, ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಪಂದ್ಯದ ಕೊನೆಯ ಎರಡು ಎಸೆತಗಳಲ್ಲಿ 10 ರನ್ ಗಳಿಸಿದರು. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಸಿಎಸ್ಕೆ ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವನ್ನು ವಿರೋಚಿತವಾಗಿ ಸೋಲಿಸಿತು.
'ಜಡೇಜಾ ಬಿಜೆಪಿ ಕಾರ್ಯಕರ್ತರು ಮತ್ತು ಅವರು ಗುಜರಾತ್ ಮೂಲದವರು. ಅವರ ಪತ್ನಿ ಬಿಜೆಪಿ ಶಾಸಕಿ. ತಮಿಳಿಗನಾಗಿ ನನಗೂ ಹೆಮ್ಮೆ ಇದೆ. ಅಹಮದಾಬಾದ್ನಲ್ಲಿ ಗುಜರಾತಿನವರಿಗಿಂತ ಹೆಚ್ಚು ತಮಿಳು ಜನರಿದ್ದರು. ನಾನು ಇದಕ್ಕಾಗಿ ಹೆಮ್ಮೆ ಪಡುತ್ತೇನೆ' ಎಂದು ಅಣ್ಣಾಮಲೈ ಹೇಳಿದರು.
ಸಿಎಸ್ಕೆ ಗೆಲುವು 'ಗುಜರಾತ್ ಮಾದರಿಯ ಮೇಲೆ ದ್ರಾವಿಡ ಮಾದರಿಯ ವಿಜಯ' ಎಂದು ಡಿಎಂಕೆ ಸಂದೇಶದ ಕುರಿತು ಸಂದರ್ಶಕರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಗುಜರಾತ್ ಟೈಟಾನ್ಸ್ ಪರ ಆಡಿದ ತಮಿಳಿನ ಸಾಯಿ ಸುದರ್ಶನ್ ಅವರನ್ನು ಅಣ್ಣಾಮಲೈ ಶ್ಲಾಘಿಸಿದರು. '96 ರನ್ ಗಳಿಸಿದ ತಮಿಳಿಗ, ನಾವು ಅವರ ಬಗ್ಗೆಯೂ ಸಹ ಹೆಮ್ಮೆಪಡುತ್ತೇವೆ. ಸಿಎಸ್ಕೆಯಲ್ಲಿ ಒಬ್ಬ ತಮಿಳಿಗನೂ ಆಡಿಲ್ಲ. ಆದರೆ ಎಂಎಸ್ ಧೋನಿಯಿಂದಾಗಿ ನಾವು ಇನ್ನೂ ಸಿಎಸ್ಕೆಯನ್ನು ಇಷ್ಟಪಡುತ್ತೇವೆ. ಬಿಜೆಪಿ ಕಾರ್ಯಕರ್ತರೊಬ್ಬರು ಸಿಎಸ್ಕೆ ಗೆಲುವಿಗಾಗಿ ಶ್ರಮಿಸಿರುವುದು ನಮಗೆ ಹೆಮ್ಮೆ ತಂದಿದೆ ಎಂದರು.
ಜಡೇಜಾ ಅವರು ಬಿಜೆಪಿಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ. ಆದರೆ, ಅವರು ಬಿಜೆಪಿ ಸದಸ್ಯರಾಗಿದ್ದಾರೆ ಎನ್ನುವುದು ಸ್ಪಷ್ಟವಾಗಿಲ್ಲ. ಅವರ ಪತ್ನಿ ರಿವಾಬಾ ಜಡೇಜಾ ಗುಜರಾತ್ನ ಜಾಮ್ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿದ್ದಾರೆ. ರಿವಾಬಾ 2019 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು ಮತ್ತು 2022 ರಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ 80,000 ಮತಗಳ ಅಂತರದಿಂದ ಗೆದ್ದರು.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications