ನಾನು ರಾಜಕೀಯಕ್ಕೆ ಬಂದರೆ ಪತ್ನಿ ಜತೆ ಇರಲಾರಳು: ರಘುರಾಂ ರಾಜನ್
ನವದೆಹಲಿ, ಏಪ್ರಿಲ್ 26: ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ಧಾರಗಳ ಕಟು ಟೀಕಾಕಾರರಾಗಿರುವ ಆರ್ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಅವರು ರಾಜಕೀಯಕ್ಕೆ ಬರಲಿದ್ದಾರೆ ಎಂಬ ವದಂತಿ ಹರಡಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಡವರಿಗೆ ತಿಂಗಳಿಗೆ ಆರು ಸಾವಿರ ರೂಪಾಯಿ ನೀಡುವ 'ನ್ಯಾಯ್' ಯೋಜನೆಯ ರಚನೆಗೆ ರಘುರಾಂ ರಾಜನ್ ಸಲಹೆ ನೀಡಿದ್ದರು. ಹೀಗಾಗಿ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿತ್ತು. ಅದನ್ನು ಅವರು ನಯವಾಗಿ ನಿರಾಕರಿಸಿದ್ದಾರೆ.
'ಲೈವ್ ಮಿಂಟ್' ಮಾಧ್ಯಮದೊಂದಿಗೆ ಮಾತನಾಡಿರುವ ಅವರು, 'ನಾನು ರಾಜಕೀಯಕ್ಕೆ ಪ್ರವೇಶಿಸಿದರೆ ನಿಮ್ಮ ಜತೆ ಇರುವುದಿಲ್ಲ ಎಂದು ನನ್ನ ಹೆಂಡತಿ ಹೇಳಿದ್ದಾಳೆ' ಎಂದು ತಮ್ಮ ರಾಜಕೀಯ ಪ್ರವೇಶದ ಕುರಿತು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.
ರಾಜಕೀಯ ಎನ್ನುವುದು ಗದ್ದಲವಲ್ಲ. ಅದು ಎಲ್ಲ ಕಡೆಯೂ ಒಂದೇ. ಅದು ಗದ್ದಲ ಅಥವಾ ಇನ್ನೇನೋ ಅಲ್ಲ. ಆದರೆ, ನನಗೆ ಅದರ ರುಚಿ ಇಲ್ಲ. ಯಾರಾದರೂ ಭಾಷಣ ಮಾಡಿ ವೋಟು ಗಳಿಸಬಹುದು. ಒಳ್ಳೆಯ ಅವಕಾಶಗಳು ಸಿಕ್ಕರೆ ಭಾರತಕ್ಕೆ ಮರಳುತ್ತೇನೆ ಎಂದಿರುವುದು ಯಾರಿಗಾದರೂ ಅಗತ್ಯವಿದ್ದರೆ, ಅವರ ಅನುಕೂಲಕ್ಕೆ ಸರಿಯಾದ ನೆರವು ನೀಡುತ್ತೇನೆ ಎಂದು. ಅದನ್ನು ಮಾಡಲು ನನಗೆ ಸಂತೋಷವಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಜನರು ಸಲಹೆ ಬಯಸುತ್ತಾರೆ. ಅದನ್ನು ಹರ್ಷದಿಂದ ಕೊಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎಂಬ ಊಹಾಪೋಹಗಳಿವೆಯಲ್ಲ ಎಂಬ ಪ್ರಶ್ನೆಗೆ ರಾಜನ್, ಅದು ತುಂಬಾ ದೂರದ ಮಾತು. ನಾನು ಇದುವರೆಗೆ ಮಾಡಿರುವ ಕೆಲಸಗಳನ್ನು ಗಮನಿಸಿದಾಗ, ಸಾರ್ವಜನಿಕ ವಲಯದಲ್ಲಿ ನನ್ನ ಪ್ರಾಥಮಿಕ ಕಾರ್ಯಗಳ ಬಗ್ಗೆ ನಿರೀಕ್ಷೆಗಳಿವೆ. ಇಲ್ಲ, ನನ್ನ ಮೊದಲ ಕೆಲಸ ಅಕಾಡೆಮಿಕ್. ನನಗೆ ಈ ಕೆಲಸ ಇಷ್ಟ. ಅಕಾಡೆಮಿಕ್ ಆಗಿ ನಾನು ತೊಡಗಿಸಿಕೊಂಡಿದ್ದೇನೆ. ಇತ್ತೀಚೆಗೆ ಪುಸ್ತಕವೊಂದನ್ನು ಬರೆದಿದ್ದೇನೆ. ಈಗ ನಾನು ಇರುವ ಸ್ಥಾನವನ್ನು ಆನಂದಿಸುತ್ತೇನೆ ಎಂದು ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications