IAS: ಆರ್ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ಗೆ ಮಹತ್ವದ ಹುದ್ದೆ
ನವದೆಹಲಿ, ಫೆಬ್ರವರಿ 23: ತಮಿಳುನಾಡು ಕೇಡರ್ನ ಐಎಎಸ್ ಅಧಿಕಾರಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಜಿ ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರಿಗೆ ಮಹತ್ವದ ಹುದ್ದೆಯನ್ನು ನೇಮಕ ಮಾಡಲಾಗಿದೆ. 2024ರ ಡಿಸೆಂಬರ್ 10ರಂದು ಶಕ್ತಿಕಾಂತ ದಾಸ್ ನಿವೃತ್ತರಾದರು ಮತ್ತು ಅವರ ಸ್ಥಾನಕ್ಕೆ ಸಂಜಯ್ ಮಲ್ಹೋತ್ರಾರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತ್ತು.
ಆರ್ಬಿಐನ 25ನೇ ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 2ನೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರ್ಕಾರ ಆದೇಶವನ್ನು ಹೊರಡಿಸಿದೆ. ಗುಜರಾತ್ ಕೇಡರ್ನ ಐಎಎಸ್ ಅಧಿಕಾರಿ ಪ್ರಮೋದ್ ಕುಮಾರ್ ಮಿಶ್ರಾ ನರೇಂದ್ರ ಮೋದಿ ಅವರ ಮೊದಲ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಶಕ್ತಿಕಾಂತ ದಾಸ್ ನೇಮಕಾತಿ: ಶಕ್ತಿಕಾಂತ ದಾಸ್ ನೇಮಕದ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ಐಎಎಸ್ ಅಧಿಕಾರಿಗಳು ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಶಕ್ತಿಕಾಂತ ದಾಸ್ ಮತ್ತು ಪ್ರಮೋದ್ ಕುಮಾರ್ ಮಿಶ್ರಾ ಇಬ್ಬರೂ ಸಹ ಒಡಿಶಾ ರಾಜ್ಯದವರು.
ಕೃಷಿ ಸಚಿವಾಲಯದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಮೋದ್ ಕುಮಾರ್ ಮಿಶ್ರಾ ಇ 2019ರ ಸೆಪ್ಟೆಂಬರ್ನಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಈಗ ಶಕ್ತಿಕಾಂತ ದಾಸ್ ಸಹ ಅವರ ಜೊತೆಗೆ ಕಾರ್ಯ ನಿರ್ವಹಿಸಲಿದ್ದಾರೆ.
1980ನೇ ಬ್ಯಾಚ್ನ ತಮಿಳುನಾಡು ಕೇಡರ್ನ ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್. ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಇತಿಹಾಸದಲ್ಲಿ ಎಂಎ ಪದವಿ ಪಡೆದಿದ್ದಾರೆ. ಬರ್ಮಿಗ್ ಹ್ಯಾಮ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
2018ರಲ್ಲಿ ಉರ್ಜಿತ್ ಪಟೇಲ್ ನಿವೃತ್ತಿಯ ಬಳಿಕ ಶಕ್ತಿಕಾಂತ ದಾಸ್ ಅವರನ್ನು ಆರ್ಬಿಐನ 25ನೇ ಗವರ್ನರ್ ಆಗಿ ನೇಮಕ ಮಾಡಲಾಯಿತು. 2021ರಲ್ಲಿ ಅವರ ಅಧಿಕಾರಾವಧಿಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗಿತ್ತು.
ಆರ್ಬಿಐನ ಇತಿಹಾಸದಲ್ಲಿಯೇ ಅತಿ ಹೆಚ್ಚು ದೀರ್ಘಾವಧಿ ಗವರ್ನರ್ ಆಗಿದ್ದ 2ನೇ ಅಧಿಕಾರಿ ಶಕ್ತಿಕಾಂತ ದಾಸ್. ಹಣದುಬ್ಬರವನ್ನು ನಿಯಂತ್ರಣ ಮಾಡಿ ಶಕ್ತಿಕಾಂತ ದಾಸ್ ದೇಶದ ಆರ್ಥಿಕ ಪ್ರಗತಿಯನ್ನು ಉತ್ತೇಜಿಸಿದ್ದರು. ಕೋವಿಡ್ ಸಮಯದಲ್ಲಿ ದೇಶದ ಆರ್ಥಿಕತೆ ಮೇಲೆ ಉಂಟಾದ ಪರಿಣಾಮವನ್ನು ಸರಿದೂಗಿಸಲು ಶಕ್ತಿಕಾಂತ ದಾಸ್ ಹಲವು ಕ್ರಮಗಳನ್ನು ಕೈಗೊಂಡಿದ್ದರು.
ಕೇಂದ್ರ ಸರ್ಕಾರ ಶಕ್ತಿಕಾಂತ ದಾಸ್ ಗವರ್ನರ್ ಆಗಿದ್ದ ಅವಧಿಯಲ್ಲಿ ಆರ್ಬಿಐಗೆ ದಾಖಲೆಯ 2.11 ಲಕ್ಷ ಕೋಟಿ ರೂ. ಡಿವಿಡೆಂಡ್ ನೀಡಿತ್ತು. ಈಗ ಶಕ್ತಿಕಾಂತ ದಾಸ್ ಪ್ರಧಾನಿ ನರೇಂದ್ರ ಮೋದಿ ಅವರು 2ನೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಶಕ್ತಿಕಾಂತ ದಾಸ್ ಗವರ್ನರ್ ಆಗಿದ್ದಾಗ ಹಲವಾರು ನೀತಿಗಳ ಮೂಲಕ ದೇಶದ ಹಣಕಾಸು ಸ್ಥಿತಿಯನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಂಡರು. ಹಲವಾರು ಸಾಂಪ್ರದಾಯಿಕ, ಅಸಾಂಪ್ರದಾಯಿಕ ಮತ್ತು ಹೊಸ ನೀತಿಗಳ ಮೂಲಕ ಆರ್ಬಿಐ ಮುನ್ನಡೆಸಿದರು. ಇದರಿಂದ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಂಡು, ಕೋವಿಡ್ ಮಹಾಮಾರಿಯ ಪರಿಣಾಮಗಳನ್ನು ಆರ್ಥಿಕ ಕ್ಷೇತ್ರದಲ್ಲಿ ಎದುರಿಸಲು ಸಹಕಾರಿಯಾಯಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications