ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕಿಂಗ್ ವ್ಯವಸ್ಥೆ ಸರಿಪಡಿಸಲು 'ನೀಲಕಂಠ'ನಾಗಲೂ ಸಿದ್ಧ: ಊರ್ಜಿತ್

|
Google Oneindia Kannada News

ನವದೆಹಲಿ, ಮಾರ್ಚ್ 15: ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಇತ್ತೀಚೆಗೆ ಪದೇ ಪದೇ ಕೇಳಿಬರುತ್ತಿರುವ ವಂಚನೆ ಪ್ರಕರಣಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಊರ್ಜಿತ್ ಪಟೇಲ್, 'ಬ್ಯಾಂಕಿಂಗ್ ವ್ಯವಸ್ಥೆಯನ್ನು ಸರಿಪಡಿಸಲು ನೀಲಕಂಠನಾಗಲೂ ಸಿದ್ಧ' ಎಂದಿದ್ದಾರೆ!

ದುಷ್ಟಶಕ್ತಿಗಳ ಸಂಹಾರಕ್ಕಾಗಿ ಭಗವಂತ ಶಿವ ವಿಷ ಕುಡಿದು ನೀಲಕಂಠನಾದಂತೆ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ಹುಳುಕನ್ನು ಸರಿಪಡಿಸಲು ನಾವು ಎಂಥ ಸವಾಲುಗಳನ್ನೂ ಎದುರಿಸಲು ಸಿದ್ಧ ಎಂದು ಅವರು ಹೇಳಿದ್ದಾರೆ.

ನೀರವ್ ಮೋದಿ ಪರಿಣಾಮ: 'ಎಲ್ಒಯು', 'ಎಲ್ಒಸಿ' ಸೇವೆ ಸ್ಥಗಿತನೀರವ್ ಮೋದಿ ಪರಿಣಾಮ: 'ಎಲ್ಒಯು', 'ಎಲ್ಒಸಿ' ಸೇವೆ ಸ್ಥಗಿತ

RBI Governor Urijit Patel shows displeasure about Banking frauds in India

"ಬ್ಯಾಂಕುಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳು ದೇಶದ ಭವಿಷ್ಯಕ್ಕೆ ಮಾರಕವಾಗಿದೆ. ಬ್ಯಾಂಕರ್ ಮತ್ತು ಉದ್ಯಮಿಗಳ ನಡುವಿನ ಸಂಬಂಧ ಮಿತಿಯನ್ನು ದಾಟದಂತೆ ನೋಡಿಕೊಳ್ಳಬೇಕಿದೆ" ಎಂದು ಅವರು ಹೇಳಿದರು. ಇತ್ತೀಚೆಗೆ ಪಂಜಾಬ್ ನ್ಯಾಶನಲ್ ಬ್ಯಾಂಕ್ ನಲ್ಲಿ ನೀರವ್ ಮೋದಿ ನಡೆಸಿದ ಸುಮಾರು 11,000 ಕೋಟಿ ರೂ. ಅವ್ಯವಹಾರ ಮತ್ತು ಇದಕ್ಕೂ ಮುನ್ನ ಮದ್ಯ ದೊರೆ ವಿಜಯ ಮಲ್ಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆಸಿದ್ದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

13 ಸಾವಿರ ಕೋಟಿ ನಷ್ಟ 4 ತ್ರೈಮಾಸಿಕದಲ್ಲಿ ತೋರಿಸ್ತೀವಿ: ಪಿಎನ್ ಬಿ13 ಸಾವಿರ ಕೋಟಿ ನಷ್ಟ 4 ತ್ರೈಮಾಸಿಕದಲ್ಲಿ ತೋರಿಸ್ತೀವಿ: ಪಿಎನ್ ಬಿ

English summary
"If we need to face the brickbats and be the Neelakantha consuming this poison, we will do so as our duty" RBI governor Urjit Patel told. He expressed his displeasure towards banking frauds in India
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X