UPI Payment Limit Rise: ಆರ್ಬಿಐನಿಂದ ಯಪಿಐ ಪಾವತಿ ಮಿತಿ ಹೆಚ್ಚಳ, ಮಹತ್ವದ ನಿರ್ಧಾರ
ಬೆಂಗಳೂರು ಡಿಸೆಂಬರ್ 08: ಭಾರತೀಯ ರಿಸರ್ವ್ ಬ್ಯಾಂಕ್ (RBI) ಎರಡು ಕ್ಷೇತ್ರಗಳಿಗೆ ಸಿಮೀತವಾಗಿ ಯುಪಿಐ (UPI) ಪಾವತಿ ಮಿತಿಯನ್ನು ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಶುಕ್ರವಾರ ತಿಳಿಸಿದ್ದಾರೆ.
ಯುಪಿಐ ಮತ್ತು ಇ-ಮ್ಯಾಂಡೇಟ್ ಗಳ ಭಾಗವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಶೈಕ್ಷಣಿಕ ಮತ್ತು ಆರೋಗ್ಯ ಸೇವೆಗಳಲ್ಲಿ ಯುಪಿಐ ಆಧಾರಿತ ಪಾವತಿ ಮಿತಿಯನ್ನು ಏರಿಕೆ ಮಾಡಿದೆ. ಈ ಮೊದಲು 1 ಲಕ್ಷ ರೂಪಾಯಿ ಇದ್ದ ಮಿತಿಯನ್ನು ಇದೀಗ 05 ಲಕ್ಷ ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ.

ಆಸ್ಪತ್ರೆ ಸೇರಿದಂತೆ ಮುಂತಾದ ಆರೋಗ್ಯ ರಕ್ಷಣಾ ಘಟಕಗಳಿಗೆ ಮತ್ತು ಶಾಲಾ-ಕಾಲೇಜುಗಳಂತಹ ಶೈಕ್ಷಣಿಕ ಸೇವೆಗಳನ್ನು ಪಡೆಯುವಾಗ ಈ ಗರಿಷ್ಠ ಮಿತಿಯಲ್ಲಿ ಯುಪಿಐ ಮೂಲಕ ಐದು ಲಕ್ಷವರೆಗೆ ಹಣ ಪಾವತಿಗೆ ಅನುಮೋದನೆ ನೀಡಲು ಆರ್ಬಿಐ ನಿರ್ಧರಿಸಿದೆ ಎಂದು ಅವರು ಹಣಕಾಸು ನೀತಿ ಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.
ರೂ.1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ
ವಿವಿಧ ವರ್ಗಗಳ ಯುಪಿಐ ವಹಿವಾಟುಗಳ ಮಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸಲಾಗಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪಾವತಿಸುವ ಯುಪಿಐ ವಹಿವಾಟಿನ ಮಿತಿಯನ್ನು ಪ್ರತಿ ವಹಿವಾಟಿಗೆ 1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲು ಈಗ ಪ್ರಸ್ತಾಪಿಸಲಾಗಿದೆ. ಇದು ಯುಪಿಐ ಗ್ರಾಹಕರಿಗೆ ಹೆಚ್ಚು ಸಹಾಯ ಮಾಡುತ್ತದೆ.

ಮರುಪಾವತಿಗಳಿಗೆ RBI ಇ-ಆದೇಶದ ಹೊಸ ನಿಯಮ
ಆರ್ಬಿಐ ಇ ಆದೇಶದ ಹೊಸ ನಿಯಮಗಳ ಪ್ರಕಾರ, ಮ್ಯೂಚುವಲ್ ಫಂಡ್ಗಳ ಚಂದಾದಾರಿಕೆ, ವಿಮಾ ಪ್ರೀಮಿಯಂ ಚಂದಾದಾರಿಕೆಗಳು ಮತ್ತು ಕ್ರೆಡಿಟ್ ಕಾರ್ಡ್ ಮರುಪಾವತಿಗಳ ಮರುಪಾವತಿ ಮಿತಿ ಈ ಹಿಂದೆ ರೂ 15,000 ಇತ್ತು. ಇದೀಗ ಅದರ ನಿಯಮ ಬದಲಾಯಿತಿ ಮರುಪಾವತಿ ಮಿತಿಯನ್ನ 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.
ಆರ್ಬಿಐನ ಇ-ಆದೇಶದಡಿಯಲ್ಲಿ 15,000 ರೂ.ಗಿಂತ ಹೆಚ್ಚು ಮರುಪಾವತಿಯ ವಹಿವಾಟುಗಳಿಗೆ ಪ್ರಸ್ತುತ ಹೆಚ್ಚುವರಿ ಅಂಶದ ಪ್ರಮಾಣೀಕರಣದ (AFA) ಅಗತ್ಯವಿದೆ. ಇದನ್ನು ಪ್ರತಿ ವಹಿವಾಟಿಗೆ ಮಿತಿಯಾಗಿ 1 ಲಕ್ಷ ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ ಎಂದು ಶಕ್ತಿಕಾಂತ್ ದಾಸ್ ಅವರು ವಿವರಿಸಿದ್ದಾರೆ.
ಇನ್ನೂ ವಿತ್ತೀಯ ನೀತಿ ಸಮಿತಿಯು ಸತತ 5 ನೇ ಬಾರಿಗೆ ಪ್ರಮುಖ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications