ಎಟಿಎಂ ಹಣ ವಿತ್ಡ್ರಾ ಶುಲ್ಕ ಹೆಚ್ಚಳ: ಮೋದಿ ಸರ್ಕಾರದ ಮೇಲೆ ಖರ್ಗೆ ಗಂಭೀರ ಆರೋಪ
ಮೇ 1ರಿಂದ ಎಲ್ಲ ಬ್ಯಾಂಕ್ಗಳ ಎಟಿಎಂ ವಿತ್ಡ್ರಾ ಶುಲ್ಕ ಏರಿಸುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಹೇಳಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ದುರದೃಷ್ಟವಶಾತ್ ದೇಶದ ಬ್ಯಾಂಕುಗಳನ್ನು ಪ್ರಧಾನಿ ಮೋದಿ ಅವರ ಸರ್ಕಾರ 'ಕಲೆಕ್ಷನ್ ಏಜೆಂಟ್'ಗಳನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ. 2018 ಮತ್ತು 2024ರ ನಡುವೆ ಕನಿಷ್ಠ ಮೊತ್ತ (ಮಿನಿಮಮ್ ಬ್ಯಾಲೆನ್ಸ್) ಕಾಯ್ದುಕೊಳ್ಳದ ಉಳಿತಾಯ ಖಾತೆಗಳು ಮತ್ತು ಜನಧನ ಖಾತೆಗಳಿಂದ ಕನಿಷ್ಠ 43,500 ಕೋಟಿ ರೂಪಾಯಿ ಸಂಗ್ರಹಿಸಿವೆ ಎಂದು ದೂರಿದ್ದಾರೆ.
ಪ್ರತಿ ವರ್ಷವೂ 100 ರೂಪಾಯಿಯಿಂದ 200 ರೂಪಾಯಿ ನಿಷ್ಕ್ರಿಯತೆಯ ಶುಲ್ಕ, ಬ್ಯಾಂಕ್ ಸ್ಟೇಟ್ಮೆಂಟ್ ವಿತರಣೆಗೆ ರೂ.50ರಿಂದ ರೂ 100 ರೂಪಾಯಿ, ಎಸ್ಎಂಎಸ್ ಎಚ್ಚರಿಕೆಗಳಿಗೆ ಪ್ರತಿ ತ್ರೈಮಾಸಿಕಕ್ಕೆ 20ರಿಂದ 25 ರೂಪಾಯಿ ಶುಲ್ಕ, ಎನ್ಇಎಫ್ಟಿ, ಡಿಮ್ಯಾಂಡ್ ಡ್ರಾಫ್ಟ್ ಶುಲ್ಕಗಳ ಹೆಚ್ಚುವರಿ ಹೊರೆ. ಸಹಿ ಬದಲಾವಣೆಗಳಂತಹ ಕೆವೈಸಿ ನವೀಕರಣಗಳಿಗೂ ಶುಲ್ಕ ಸೇರಿ ಹೀಗೆ ದೇಶದ ಜನರನ್ನು ಕೇಂದ್ರ ಸರ್ಕಾರ ಬ್ಯಾಂಕ್ ಶುಲ್ಕಗಳಿಂದ ಲೂಟಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಹಿಂದೆ, ಕೇಂದ್ರ ಸರ್ಕಾರವು ಬ್ಯಾಂಕ್ ಶುಲ್ಕಗಳಿಂದ ಸಂಗ್ರಹಿಸಲಾದ ಮೊತ್ತದ ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಒದಗಿಸುತ್ತಿತ್ತು. ಆದರೆ ಈಗ ಆರ್ಬಿಐನಂತಹ ದತ್ತಾಂಶವನ್ನು ನಿರ್ವಹಿಸುವುದಿಲ್ಲ ಎಂದು ಹೇಳುವ ಮೂಲಕ ಈ ಪದ್ಧತಿಯನ್ನು ಸಹ ನಿಲ್ಲಿಸಲಾಗಿದೆ. ಗ್ರಾಹಕರು ಎಟಿಎಂನಿಂದ ಹಣ ಪಡೆಯುವುದಕ್ಕೆ ನಿಗದಿಪಡಿಸಿರುವ ಶುಲ್ಕ ಹೆಚ್ಚಿಸಲು ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅನುಮತಿ ನೀಡಿದೆ ಎಂದು ಕಿಡಿಕಾರಿದ್ದಾರೆ. ನೋವಿನ ಬೆಲೆ ಏರಿಕೆ ಹಾಗೂ ಅನಿಯಂತ್ರಿತ ಲೂಟಿಯೇ ಸುಲಿಗೆಗಾಗಿ ಬಿಜೆಪಿಯ ಮಂತ್ರ ಎಂದು ದೂರಿದ್ದಾರೆ.
ಆರ್ಬಿಐ ಎಟಿಎಂ ಇಂಟರ್ಚೇಂಜ್ ಶುಲ್ಕವನ್ನು ಹೆಚ್ಚಿಸಿದ್ದು ಇದೇ ಮೇ 1ರಿಂದ ದೇಶದ ಎಲ್ಲ ಎಟಿಎಂಗಳಲ್ಲಿ ಹಣ ವಿತ್ಡ್ರಾ ದುಬಾರಿಯಾಗಲಿದೆ ಎಂದು ಹೇಳಿದೆ. ಹಣಕಾಸಿನ ವಹಿವಾಟುಗಳಿಗಾಗಿ ಎಟಿಎಂಗಳನ್ನು ಅವಲಂಬಿಸಿರುವ ಗ್ರಾಹಕರು ತಮ್ಮ ಉಚಿತ ವಹಿವಾಟು ಮಿತಿಯನ್ನು ಮೀರಿದಾಗ ಹೆಚ್ಚುವರಿ ಶುಲ್ಕ ಪಾವತಿಸಬೇಕು ಎಂದು ಆರ್ಬಿಐ ತಿಳಿಸಿದೆ.
ಎಟಿಎಂ ಸೇವೆ ಒದಗಿಸಲು ಒಂದು ಬ್ಯಾಂಕ್ ಮತ್ತೊಂದು ಬ್ಯಾಂಕ್ಗೆ ಪಾವತಿಸುವ ಶುಲ್ಕವೇ ಈ ಎಟಿಎಂ ಇಂಟರ್ಚೇಂಜ್ ಶುಲ್ಕ ಎನ್ನಲಾಗಿದೆ. ಸಾಮಾನ್ಯವಾಗಿ ಇದು ಪ್ರತಿ ವಹಿವಾಟಿಗೆ ನಿಗದಿತ ಮೊತ್ತವಾಗಿದ್ದು, ಇದನ್ನು ಗ್ರಾಹಕರಿಗೆ ಅವರ ಬ್ಯಾಂಕಿಂಗ್ ವೆಚ್ಚದ ಭಾಗವಾಗಿ ವರ್ಗಾಯಿಸಲಾಗುವುದು. ಈಗ ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚಗಳು ತಮ್ಮ ವ್ಯವಹಾರದ ಮೇಲೆ ಪರಿಣಾಮ ಬೀರುತ್ತಿವೆ ಎಂದು ಎಟಿಎಂ ಆಪರೇಟರ್ಗಳು ಹೇಳಿದ್ದರು. ಈ ಹಿನ್ನೆಲೆ ಆರ್ಬಿಐ ಈ ಶುಲ್ಕಗಳನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಮೇ 1ರಿಂದ ಎಟಿಎಂ ವಿತ್ಡ್ರಾ ದುಬಾರಿಯಾಗಲಿದೆ. ಆರ್ಬಿಐ ಶುಲ್ಕ ಹೆಚ್ಚಳಕ್ಕೆ ಅನುಮೋದನೆಯೂ ಸಿಕ್ಕಿದೆ.

ಈ ಶುಲ್ಕ ಹೆಚ್ಚಳವು ದೇಶದಾದ್ಯಂತ ಎಲ್ಲ ಎಟಿಎಂಗಳಿಗೆ ಅನ್ವಯವಾಗಲಿದೆ. ಬ್ಯಾಂಕುಗಳು ಎಟಿಎಂ ಮತ್ತು ಸಂಬಂಧಿತ ಸೇವೆಗಳಿಗಾಗಿ ದೊಡ್ಡ ಹಣಕಾಸು ಸಂಸ್ಥೆಗಳನ್ನು ಅವಲಂಬಿಸಿದ್ದು, ಇದರಿಂದಾಗಿ ಅವು ಹೆಚ್ಚುತ್ತಿರುವ ವೆಚ್ಚಗಳಿಗೆ ಗುರಿಯಾಗಲಿವೆ. ಹಾಗಾಗಿ ಮೇ 1ರಿಂದ ಗ್ರಾಹಕರು ತಮ್ಮ ಉಚಿತ ಮಿತಿಯನ್ನು ಮೀರಿದರೆ, ಪ್ರತಿ ಹಣಕಾಸು ವಹಿವಾಟಿಗೆ ಹೆಚ್ಚುವರಿಯಾಗಿ 2 ರೂಪಾಯಿಯನ್ನು ಪಾವತಿಸಬೇಕು ಎಂದು ತಿಳಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications