ಜ.1ರಿಂದ ಎಟಿಎಂನಲ್ಲಿ ದಿನಕ್ಕೆ 4,500 ರು. ಸಿಗುತ್ತೆ!
ಜನವರಿ 1ರಿಂದ ಎಟಿಎಂಗಳಿಂದ ಹಣ ವಿದ್ಡ್ರಾ ಮಾಡುವ ಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೆಚ್ಚಿಸಿದೆ. ಹೊಸ ವರ್ಷದಿಂದ ಎಟಿಎಂಗಳಿಂದ ಪ್ರತಿದಿನ 4,500 ರು. ವಿದ್ಡ್ರಾ ಮಾಡಬಹುದು.
ನವದೆಹಲಿ, ಡಿಸೆಂಬರ್. 31: ನೋಟ್ ಬ್ಯಾನ್ ನಿಂದಾಗಿ ಹಣ ತೆಗೆಯಲು ಪರದಾಡುತ್ತಿದ್ದ ಜನರಿಗೆ ಆರ್ ಬಿಐ ಹೊಸ ವರ್ಷಾಚರಣೆಯ ಗಿಫ್ಟ್ ನೀಡಿದೆ.
ಜನವರಿ 1 ರಿಂದ ಎಟಿಎಂಗಳಲ್ಲಿ ಹಣ ವಿಥ್ ಡ್ರಾ 2500 ರು ಇದ್ದ ಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 4500 ರೂಪಾಯಿಗೆ ಏರಿಸಿದೆ. ಆದರೆ, ವಾರದ ಹಣ ವಿಥ್ ಡ್ರಾ ಮಿತಿಯಲ್ಲಿ ಯಾವುದೇ ಬದಲಾವಣೆಯಿಲ್ಲ.
ಹೀಗಾಗಿ ಓರ್ವ ವ್ಯಕ್ತಿ ವಾರದಲ್ಲಿ ಒಟ್ಟಾರೆ 24 ಸಾವಿರ ರು. ಮಾತ್ರ ತೆಗೆಯಬಹುದು. ಸದ್ಯ ಇರುವ ಪರಿಸ್ಥಿತಿಯನ್ನು ಅವಲೋಕಿಸಿ 2017ರ ಜನವರಿ 1ರಿಂದ ಎಟಿಎಂ ವಿಥ್ ಡ್ರಾ ಮಿತಿಯನ್ನು 2500 ರೂಪಾಯಿಯಿಂದ 4500 ರೂಪಾಯಿಗೆ ಪ್ರತಿ ಕಾರ್ಡ್ ಗೆ ಏರಿಕೆ ಮಾಡಲಾಗಿದೆ.

ಆದರೆ, ವಾರದ ವಿಥ್ ಡ್ರಾ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಅಲ್ಲದೆ ಎಟಿಎಂಗಳಲ್ಲಿ 500 ರೂ.ಗಳ ನೋಟು ಹೆಚ್ಚು ಸಿಗುವಂತೆ ವ್ಯವಸ್ಥೆ ಮಾಡಿ ಎಂದು ಆರ್ ಬಿಐ ತನ್ನ ಅಧೀನದಲ್ಲಿರುವ ಎಲ್ಲಾ ಬ್ಯಾಂಕ್ ಗಳಿಗೆ ಸೂಚಿಸಿದೆ.
ನೋಟ್ ಬ್ಯಾನ್ ನಿಂದಾಗಿ 50 ದಿನಗಳ ಕಾಲ ನೀವು ಸಮಸ್ಯೆ ಎದುರಿಸಬೇಕಾಗಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ಮೋದಿ ಹೇಳಿದ 50 ದಿನದ ಅವಧಿ ನಿನ್ನೆಗೆ ಮುಕ್ತಾಯವಾಗಿತ್ತು.
ಈ ಹಿನ್ನೆಲೆಯಲ್ಲಿ ಸ್ವಲ್ಪ ರಿಲೀಫ್ ಸಿಗಬಹುದು ಎಂದು ಜನರು ಕಾತರದಿಂದ ಕಾಯುತ್ತಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications