ರೆಪೋ ದರದಲ್ಲಿ ಶೇ.6.5ಕ್ಕೆ ಯಥಾಸ್ಥಿತಿ ಕಾಯ್ದುಕೊಂಡ ಆರ್ಬಿಐ
ಬೆಂಗಳೂರು, ಜೂನ್ 08: ಕೇಂದ್ರ ಬ್ಯಾಂಕ್ ವಾಣಿಜ್ಯ ಬ್ಯಾಂಕುಗಳಿಗೆ ಹಣವನ್ನು ನೀಡುವ ಬಡ್ಡಿ ದರವಾದ ರೆಪೊ ದರವನ್ನು 6.50ರಷ್ಟಕ್ಕೆ ಯಥಾಸ್ಥಿತಿಯಲ್ಲಿ ಇರಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗುರುವಾರ ನಿರ್ಧರಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರು, ಸೆಂಟ್ರಲ್ ಬ್ಯಾಂಕಿನ ಎರಡನೇ ಹಣಕಾಸು ನೀತಿ ಸಭೆಯ ನಂತರ ರೇಪೋ ದರ ಕುರಿತು ಪ್ರಕಟಿಸಿದರು. ಸತತ ಆರು ಏರಿಕೆಗಳ ನಂತರ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಕೇಂದ್ರ ಬ್ಯಾಂಕ್ ನಿರ್ಧರಿಸಿದೆ. ಕಳೆದ ವರ್ಷ ಮೇ ತಿಂಗಳಿನಿಂದ 250 ಬೇಸಿಸ್ ಪಾಯಿಂಟ್ಗಳು (2.50%) ಏರಿಕೆ ಕಂಡಿದೆ ಎಂದರು.

ರೆಪೊ ದರವನ್ನು ಬದಲಾಯಿಸದಿದ್ದರೂ, ವಿತ್ತೀಯ ನೀತಿ ಪರಿಸ್ಥಿತಿಯು ಒತ್ತಾಯಿಸಿದರೆ ಕೇಂದ್ರ ಬ್ಯಾಂಕ್ ಕಾರ್ಯನಿರ್ವಹಿಸಲು ಸಿದ್ಧವಾಗಿದೆ. ಆರ್ಬಿಐ 2023-24ರ ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನದ ಬೆಳವಣಿಗೆ ದರದ ಅಂದಾಜನ್ನು ಹಿಂದಿನ ಪ್ರಕ್ಷೇಪಣ 6.4ರಷ್ಟು ರಿಂದ 6.5ರಷ್ಟಕ್ಕೆ ಹೆಚ್ಚಿಸಲಾಗಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.
ಪ್ರಸ್ತಕ ಸಾಲಿನ (2023-24) ಹಣಕಾಸು ವರ್ಷದಲ್ಲಿ ಭಾರತ ಹಣದುಬ್ಬರ ದರವು 5.2% ರಷ್ಟಿದೆ. ಜನವರಿ 31 ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪನ್ನ ಅಥವಾ ಒಟ್ಟು ದೇಶಿಯ ಉತ್ಪನ್ನ (ಜಿಡಿಪಿ) ಶೇಕಡಾ 6ರಷ್ಟಿನಿಂದ ಶೇಕಡಾ 6.8 ರಷ್ಟು ಬೆಳವಣಿಗೆ ಹೊಂದುತ್ತದೆ ಎಂದು ಕೇಂದ್ರ ಬ್ಯಾಂಕ್ ಭವಿಷ್ಯ ನುಡಿದಿತ್ತು. ಈ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆಯು ಶೇಕಡಾ 7 ರಷ್ಟು ಬೆಳೆಯಲಿದೆ ಎಂದು ಹೇಳಲಾಗುತ್ತಿದೆ.

ಭಾರತದಲ್ಲಿ ಹಣದುಬ್ಬರ ಹಿನ್ನೆಲೆಯಲ್ಲಿ ಕಳೆದ ವರ್ಷ ಮೇ ತಿಂಗಳಿನಿಂದ ಸತತ ಆರು ಬಾರಿ ದರ ಏರಿಕೆ ಕಂಡಿದೆ. ಈ ಸಂಬಂಧ ಬೆಲೆ ಏರಿಕೆಯ ಸೂಚಕವು ಆರ್ಬಿಐನ ಕಡ್ಡಾಯ ಶ್ರೇಣಿಯು ಶೇಕಡಾ 2ರಿಂದ ಶೇಕಡಾ 6 ಕ್ಕಿಂತ ಹೆಚ್ಚಿಸಿದೆ.
ಸಾಮಾನ್ಯವಾಗಿ ಹಣದುಬ್ಬರದಂತಹ ಸಮಯದಲ್ಲಿ ಕೇಂದ್ರೀಯ ಬ್ಯಾಂಕುಗಳು ಸಾಲದ ದರಗಳನ್ನು ಹೆಚ್ಚಾಗುತ್ತವೆ. ಹೆಚ್ಚಿನ ಪ್ರಮುಖ ಸಾಲದ ದರಗಳು ವಾಣಿಜ್ಯ ಬ್ಯಾಂಕ್ಗಳು ವಿತರಿಸಿದ ಸಾಲಗಳ ಮೇಲಿನ ಹೆಚ್ಚಿನ ಬಡ್ಡಿಗೆ ಅನುವಾದಿಸುತ್ತವೆ. ಇದು ಪ್ರತಿಯಾಗಿ, ಹೆಚ್ಚಿನ ಹಣದುಬ್ಬರದಿಂದಾಗಿ ಬೆಲೆ ಏರಿಕೆಗೆ ನೆರವಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications