ಡಿಜಿಟಲ್ ಪಾವತಿ ಸಮಿತಿಯ ಮುಖ್ಯಸ್ಥರಾಗಿ ನಂದನ್ ನಿಲೇಕಣಿ ನೇಮಕ
ನವದೆಹಲಿ, ಜನವರಿ 8: ಇನ್ಫೋಸಿಸ್ ನ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ದೇಶದ ಡಿಜಿಟೈಸೇಷನ್ ಪಾವತಿಗಾಗಿ ರಚಿಸಿದ ವಿಶೇಷ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದೆ. ಉನ್ನತ ಮಟ್ಟದ ಐವರು ಸದಸ್ಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ನಿಲೇಕಣಿ ಮುನ್ನಡೆಸಲಿದ್ದಾರೆ.
ನಿಲೇಕಣಿ ಅವರನ್ನು ಹೊರತು ಪಡಿಸಿ ಆರ್ ಬಿಐನ ಮಾಜಿ ಡೆಪ್ಯೂಟಿ ಗವರ್ನರ್ ಎಚ್.ಆರ್.ಖಾನ್, ವಿಜಯಾಬ್ಯಾಂಕ್ ನ ಮಾಜಿ ಎಂ.ಡಿ. ಹಾಗೂ ಸಿಇಒ ಕಿಶೋರ್ ಸನ್ಸಿ, ಐಟಿ ಹಾಗೂ ಉಕ್ಕು ಸಚಿವಾಲಯದ ಮಾಜಿ ಕಾರ್ಯದರ್ಶಿ ಅರುಣ ಶರ್ಮಾ ಹಾಗೂ ಐಐಎಂ ಅಹಮದಾಬಾದ್ ನ ಸಂಜಯ್ ಜೈನ್ ಇರಲಿದ್ದಾರೆ.
ಸದ್ಯಕ್ಕೆ ದೇಶದಲ್ಲಿರುವ ಡಿಜಿಟೈಸೇಷನ್ ಪಾವತಿ ಸ್ಥಿತಿಗತಿ ಬಗ್ಗೆ ಈ ಸಮಿತಿಯು ಪರಿಶೀಲನೆ ನಡೆಸಲಿದೆ. ಎಲ್ಲಿ ಸಮಸ್ಯೆಗಳಿವೆ ಎಂಬುದನ್ನು ಪತ್ತೆ ಹಚ್ಚಿ, ಅದಕ್ಕೆ ಪರಿಹಾರ ಸೂಚಿಸಲಾಗುತ್ತದೆ. ಆರ್ಥಿಕತೆಯಲ್ಲಿ ಡಿಜಿಟಲ್ ವ್ಯವಸ್ಥೆ ತರುವಲ್ಲಿ ಯಾವುದು ಸೂಕ್ತ ಮಾರ್ಗ ಎಂದು ಇತರ ದೇಶಗಳಲ್ಲಿ ಸದ್ಯಕ್ಕೆ ಚಾಲ್ತಿಯಲ್ಲಿರುವ ಪದ್ಧತಿಗಳ ಅಧ್ಯಯನ ಮೂಲಕ ಪರಿಶೀಲಿಸಲಾಗುತ್ತದೆ.

ಡಿಜಿಟಲ್ ಪಾವತಿಯ ಸುರಕ್ಷತೆ ಹಾಗೂ ಭದ್ರತೆ ಹೆಚ್ಚಿಸುವ ದೃಷ್ಟಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಸಹ ಸೂಚಿಸಲಾಗುತ್ತದೆ. ಡಿಜಿಟಲ್ ಪಾವತಿ ಹೆಚ್ಚಾಗುವ ನಿಟ್ಟಿನಲ್ಲಿ ಮಧ್ಯಮಾವಧಿ ಯೋಜನೆಗಳನ್ನು ಸಹ ತಿಳಿಸಲಾಗುತ್ತದೆ.
ಈ ಸಮಿತಿಯ ಮೊದಲ ಸಭೆಯಿಂದ ಆರಂಭವಾಗಿ ತೊಂಬತ್ತು ದಿನದೊಳಗೆ ವರದಿ ಸಲ್ಲಿಸಲಿದೆ. ಈ ಹಿಂದೆ ನಂದನ್ ನಿಲೇಕಣಿ ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತಾವಧಿಯಲ್ಲಿ ಆಧಾರ್ ಕಾರ್ಡ್ ಅನುಷ್ಠಾನದ ಯುಐಡಿಎಐನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications