ಈ ವಾರ ಬ್ಯಾಂಕ್ಗಳಿಗೆ ಸಾಲು ಸಾಲು ರಜೆ, ಸೇವೆಯಲ್ಲಿ ವ್ಯತ್ಯಯ
ನವದೆಹಲಿ, ಅಕ್ಟೋಬರ್ 11: ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಬ್ಯಾಂಕ್ಗಳ ರಜಾದಿನಗಳ ಪಟ್ಟಿ ಪ್ರಕಾರ ಈ ತಿಂಗಳಲ್ಲಿ ಒಟ್ಟು 21 ದಿನ ಬ್ಯಾಂಕ್ಗಳಿಗೆ ರಜೆ ಇರಲಿದೆ.
ಅದರಲ್ಲಿ ಈ ವಾರ 7 ದಿನಗಳಲ್ಲಿ 6 ದಿನ ಬ್ಯಾಂಕ್ಗಳಿಗೆ ರಜೆ ಇರಲಿದೆ ಎಂದು ಹೇಳಿದೆ. ಅಕ್ಟೋಬರ್ ತಿಂಗಳಲ್ಲಿ ಈಗಾಗಲೇ ಗಾಂಧಿ ಜಯಂತಿ ರಜೆ ಮುಗಿದಿದ್ದು, ಮುಂದೆ ವಿಜಯ ದಶಮಿ, ಈದ್ ಮಿಲಾದ್, ವಾಲ್ಮೀಕಿ ಜಯಂತಿ ಸೇರಿದಂತೆ ಹಲವು ಸರ್ಕಾರಿ ರಜೆಗಳಿವೆ. ರಾಜ್ಯದಿಂದ ರಾಜ್ಯಕ್ಕೆ ಬ್ಯಾಂಕ್ ರಜೆಗಳು ಬದಲಾಗಲಿವೆ. ಗೆಜೆಟೆಡ್ ರಜಾದಿನಗಳು ಮಾತ್ರ ದೇಶಾದ್ಯಂತ ಎಲ್ಲಾ ಬ್ಯಾಂಕ್ಗಳಿಗೆ ಅನ್ವಯವಾಗಲಿವೆ.
ಈ ಅಕ್ಟೋಬರ್ ತಿಂಗಳಿನಲ್ಲಿ 14 ದಿನಗಳು ಬ್ಯಾಂಕ್ಗಳಿಗೆ ರಜೆ ಇದೆ ಎಂದು ಆರ್ಬಿಐ ಹೇಳಿದೆ. ಇನ್ನುಳಿದ 7 ರಜಾದಿನಗಳಲ್ಲಿ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿವೆ.

ಎಲ್ಲಾ ಬ್ಯಾಂಕುಗಳು ಸಾರ್ವಜನಿಕ ರಜಾದಿನಗಳಲ್ಲಿ ಮುಚ್ಚಿರುತ್ತವೆ ಮತ್ತು ಕೆಲವು ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ರಜಾದಿನಗಳನ್ನು ಮೂರು ವರ್ಗಗಳಾಗಿ ವರ್ಗೀಕರಿಸಿದೆ. ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜಾದಿನ; ನೆಗೋಶಿಯಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್ಮೆಂಟ್ ರಜಾ ಅಡಿಯಲ್ಲಿ ರಜೆ; ಮತ್ತು ಅಕೌಂಟ್ಸ್ ಕ್ಲೋಸಿಂಗ್.
ರಜಾದಿನಗಳಲ್ಲಿ ಗ್ರಾಹಕರು ಬ್ಯಾಂಕ್ ವ್ಯವಹಾರ ಇಟ್ಟುಕೊಳ್ಳುವುದನ್ನು ಕ್ಯಾನ್ಸಲ್ ಮಾಡಿ ಎಂದು ಆರ್ಬಿಐ ಸಲಹೆ ನೀಡಿದೆ. ಈ ಮೇಲ್ಕಂಡ ರಜಾದಿನಗಳಲ್ಲಿ ಬ್ಯಾಂಕ್ಗಳು ಮುಚ್ಚಲ್ಪಟ್ಟಿರುತ್ತವೆ. ಮೊಬೈಲ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಗಮನಿಸಬೇಕಾದ ಇನ್ನೊಂದು ಪ್ರಮುಖ ವಿಷಯವೆಂದರೆ, ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರಗಳಲ್ಲಿ ಬ್ಯಾಂಕುಗಳು ಮುಚ್ಚಿರುತ್ತವೆ, ಏಕೆಂದರೆ ಇದನ್ನು ಆರ್ಬಿಐ ಕಡ್ಡಾಯಗೊಳಿಸಿದೆ. ಒಟ್ಟಾರೆಯಾಗಿ, ಬ್ಯಾಂಕುಗಳು ಅಕ್ಟೋಬರ್ ತಿಂಗಳಲ್ಲಿ ಸುಮಾರು 21 ರಜಾದಿನಗಳನ್ನು ನಿರೀಕ್ಷಿಸಬಹುದು.
ಇನ್ನು ಕರ್ನಾಟಕದಲ್ಲಿ ಅಕ್ಟೋಬರ್ 14ಕ್ಕೆ ಮಹಾನವಮಿ, ಅಕ್ಟೋಬರ್ 15ರಂದು ವಿಜಯದಶಮಿ, ಅಕ್ಟೋಬರ್ 19ರಂದು ಈದ್ ಮಿಲಾದ್, ಅಕ್ಟೋಬರ್ 20ರಂದು ಮಹರ್ಷಿ ವಾಲ್ಮೀಕಿ ಜಯಂತಿ, ಹಾಗೂ ಅಕ್ಟೋಬರ್ 23ರಂದು ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಕ್ಗಳಿಗೆ ರಜೆ ಇರಲಿದೆ.
ಅಕ್ಟೋಬರ್ 12: ದುರ್ಗಾ ಪೂಜಾ(ಮಹಾ ಸಪ್ತಮಿ)ಅಗರ್ತಲಾ, ಕೋಲ್ಕತಾ)
ಅಕ್ಟೋಬರ್ 13: ದುರ್ಗಾ ಪೂಜಾ(ಮಹಾ ಸಪ್ತಮಿ)(ಅಗರ್ತಲಾ, ಭುವನೇಶ್ವರ, ಗ್ಯಾಂಗ್ಟಾಕ್, ಗುವಾಹಟಿ, ಇಂಫಾಲ್, ಕೋಲ್ಕತಾ, ಪಾಟ್ನಾ, ರಾಂಚಿ)
ಅಕ್ಟೋಬರ್ 14: ದುರ್ಗಾ ಪೂಜಾ/ದಸರಾ/ಮಹಾ ನವಮಿ/ಆಯುಧಾ ಪೂಜಾ(ಅಗರ್ತಲಾ, ಬೆಂಗಳೂರು, ಚೆನ್ನೈ, ಗ್ಯಾಂಗ್ಟಾಕ್, ಗುವಾಹಟಿ, ಕಾನ್ಪುರ, ಕೊಚ್ಚಿ, ಕೋಲ್ಕತಾ, ಲಕ್ನೋ, ಪಾಟ್ನಾ, ರಾಂಚಿ, ಶಿಲ್ಲಾಂಗ್, ಶ್ರೀನಗರ, ತಿರುವನಂತಪುರಂ)
ಅಕ್ಟೋಬರ್ 15: ದುರ್ಗಾ ಪೂಜಾ/ದಸರಾ/ ವಿಜಯ ದಶಮಿ(ಇಂಫಾಲ್ ಮತ್ತು ಶಿಮ್ಲಾ ಹೊರತುಪಡಿಸಿ ಎಲ್ಲಾ ಬ್ಯಾಂಕುಗಳು)
ಅಕ್ಟೋಬರ್ 16: ದುರ್ಗಾ ಪೂಜೆ (ದಾಸೈನ್) / (ಗ್ಯಾಂಗ್ಟಾಕ್)
ಅಕ್ಟೋಬರ್ 17: ಭಾನುವಾರ
ಅಕ್ಟೋಬರ್ 18: ಕಟಿ ಬಿಹು(ಗುವಾಹಟಿ)
ಅಕ್ಟೋಬರ್ 19: ಈದ್ ಇ ಮಿಲಾದ್(ಅಹಮದಾಬಾದ್, ಬೇಲಾಪುರ, ಭೋಪಾಲ್, ಚೆನ್ನೈ, ಡೆಹ್ರಾಡೂನ್, ಹೈದರಾಬಾದ್, ಇಂಫಾಲ್, ಜಮ್ಮು, ಕಾನ್ಪುರ, ಕೊಚ್ಚಿ, ಲಕ್ನೋ, ಮುಂಬೈ, ನಾಗ್ಪುರ, ನವದೆಹಲಿ, ರಾಯ್ಪುರ್, ರಾಂಚಿ, ಶ್ರೀನಗರ, ತಿರುವನಂತಪುರಂ)
ಅಕ್ಟೋಬರ್ 20: ವಾಲ್ಮೀಕಿ ಜಯಂತಿ, ಲಕ್ಷ್ಮೀ ಪೂಜೆ(ಅಗರ್ತಲಾ, ಬೆಂಗಳೂರು, ಚಂಡೀಘಡ, ಕೋಲ್ಕತಾ, ಶಿಮ್ಲಾ)
ಅಕ್ಟೋಬರ್ 22: ಈದ್-ಇ-ಮಿಲಾದ್-ಉಲ್-ನಬಿ (ಜಮ್ಮು, ಶ್ರೀನಗರ)
ಅಕ್ಟೋಬರ್ 23: ನಾಲ್ಕನೇ ಶನಿವಾರ
ಅಕ್ಟೋಬರ್ 24: ಭಾನುವಾರ
ಅಕ್ಟೋಬರ್ 26: ಆ್ಯಕ್ಸೆಶನ್ ಡೇ(ಜಮ್ಮು & ಕಾಶ್ಮೀರ)
ಅಕ್ಟೋಬರ್ 31:ಭಾನುವಾರ
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications