Breaking- ಆರ್ಬಿಐ ತುರ್ತು ಸುದ್ದಿಗೋಷ್ಠಿ: ರೆಪೋ ದರ 40 ಅಂಕ ಏರಿಕೆ
ನವದೆಹಲಿ, ಮೇ 4: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಅಚಾನಕ್ಕಾಗಿ ಪತ್ರಿಕಾಗೋಷ್ಠಿ ಕರೆದು ಕೆಲ ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ.
ಹಲವು ಕಾಲದಿಂದ ಯಥಾಸ್ಥಿತಿಯಲ್ಲಿ ಉಳಿಸಿಕೊಂಡು ಬರಲಾಗಿದ್ದ ರೆಪೋ ದರದಲ್ಲಿ 40 ಮೂಲಾಂಕದಷ್ಟು ಏರಿಕೆ ಮಾಡುವ ನಿರ್ಧಾರವನ್ನು ಬುಧವಾರ ಪ್ರಕಟಿಸಿದರು. ಇದರೊಂದಿಗೆ ರೆಪೋ ದರ ಶೇ. 4.40ಕ್ಕೆ ಏರಿದಂತಾಗಿದೆ. 2018ರ ನಂತರ ಇದೇ ಮೊದಲ ಬಾರಿಗೆ ರೆಪೋ ದರದಲ್ಲಿ ಬದಲಾವಣೆ ಆಗಿದೆ.
ಮಾನಿಟರಿ ಪಾಲಿಸಿ ಕಮಿಟಿ ಮೇ 2ರಿಂದ ಸಭೆ ನಡೆಸಿ ಆರ್ಥಿಕ ಪರಿಸ್ಥಿತಿ ಹಾಗೂ ಅದನ್ನು ಎದುರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂಬುದನ್ನು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ದೇಶದಲ್ಲಿ ಹಣದುಬ್ಬರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆರ್ಬಿಐ ಅನಿವಾರ್ಯವಾಗಿ ಮಧ್ಯಪ್ರವೇಶಿಸಬೇಕಾಗಿದೆ.
ಅಮೆರಿಕದ ಸೆಂಟ್ರಲ್ ಬ್ಯಾಂಕ್ ಸೇರಿದಂತೆ ವಿಶ್ವಾದ್ಯಂತ ವಿವಿಧ ದೇಶಗಳ ಸೆಂಟ್ರಲ್ ಬ್ಯಾಂಕ್ಗಳು ಆರ್ಥಿಕ ಹಿನ್ನಡೆಗೆ ಕಡಿವಾಣ ಹಾಕಲು ವಿವಿಧ ದರಗಳನ್ನು ಏರಿಕೆ ಮಾಡುವ ಕಠಿಣ ಕ್ರಮ ಕೈಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಆರ್ಬಿಐ ಕೆಲ ಸೂಕ್ತ ಕ್ರಮಗಳಿಗೆ ಮುಂದಾಗಿದೆ. ಆ ಸಂಬಂಧ ಮೊನ್ನೆಯಿಂದ ಆರ್ಬಿಐನ ಎಂಪಿಸಿ ಸಭೆ ನಡೆಸಿ ಚರ್ಚಿಸಲಾಗಿತ್ತು.
ರೆಪೋ ದರ ಎಂದರೇನು?

ರೆಪೋ ದರ ಎಂದರೆ ಕಮರ್ಷಿಯಲ್ ಬ್ಯಾಂಕ್ಗಳಿಗೆ ಆರ್ಬಿಐ ನೀಡುವ ಸಾಲಕ್ಕೆ ವಿಧಿಸಲಾಗುವ ಬಡ್ಡಿ ದರವಾಗಿದೆ. ಅಂದರೆ, ಕಮರ್ಷಿಯಲ್ ಬ್ಯಾಂಕುಗಳು ಈಗ ಆರ್ಬಿಐನಿಂದ ಫಂಡಿಂಗ್ ಪಡೆದರೆ ಅದಕ್ಕೆ ಶೇ. 4.40ರಷ್ಟು ಬಡ್ಡಿ ಕಟ್ಟಬೇಕಾಗುತ್ತದೆ. ಇನ್ನು ರಿವರ್ಸ್ ರೆಪೋ ಎಂದರೆ, ವಾಣಿಜ್ಯ ಬ್ಯಾಂಕುಗಳು ಆರ್ಬಿಐನಲ್ಲಿ ಇರಿಸುವ ಹಣಕ್ಕೆ ಸಿಗುವ ಬಡ್ಡಿ ದರವಾಗಿದೆ. ರಿವರ್ಸ್ ರಿಪೇ ದರ ಸದ್ಯ ಶೇ. 3.35 ಇದೆ. ಇದೇ ವೇಳೆ, ಕ್ಯಾಷ್ ರಿಸರ್ವ್ ರೇಟ್ ಅನ್ನೂ 50 ಮೂಲಾಂಕಗಳಷ್ಟು ಆರ್ಬಿಐ ಏರಿಸಿದೆ.
ಬೆಚ್ಚಿಬಿದ್ದ ಷೇರುಪೇಟೆ: ಆರ್ಬಿಐ ಕಳೆದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ತನ್ನ ರೆಪೋ ದರವನ್ನು ಏರಿಕೆ ಮಾಡುತ್ತಿದ್ದಂತೆಯೇ ಸೆನ್ಸೆಕ್ಸ್ ಸೂಚ್ಯಂಕ 900 ಅಂಕಗಳನ್ನು ಕಳೆದುಕೊಂಡಿದೆ. ಇನ್ನೊಂದು ಪರಿಣಾಮವಾಗಿ ಸರಕಾರಿ ಬಾಂಡ್ಗಳ ಮೌಲ್ಯ ಶೇ. 7.42ರಷ್ಟು ಏರಿಕೆಯಾಗಿದೆ.
ಆರ್ಬಿಐ ಗವರ್ನರ್ ಹೇಳಿದ್ದೇನು?; ಜಾಗತಿಕ ಆರ್ಥಿಕತೆ ಹಿನ್ನಡೆಯಾಗುತ್ತಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಕಳವಳ ವ್ಯಕ್ತಪಡಿಸಿದ್ದಾರೆ. ಜಾಗತಿಕ ಆರ್ಥಿಕ ಚೇತರಿಕೆ ಹಳಿ ತಪ್ಪುತ್ತಿದೆ. ಇತ್ತೀಚಿನ ಜಿಡಿಪಿ ವಿವರಗಳು ಜಾಗತಿಕ ಆರ್ಥಿಕ ಹಿನ್ನಡೆಗೆ ಕೈಗನ್ನಡಿ ಹಿಡಿದಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆರ್ಥಿಕ ಪ್ರಗತಿಗೆ ಪುಷ್ಟಿ ಕೊಡುವ ಉದ್ದೇಶದಿಂದ ರೆಪೋ ಮತ್ತು ಸಿಆರ್ಆರ್ ದರಗಳನ್ನ ಏರಿಸಲಾಗಿದೆ ಎಂದು ಶಕ್ತಿಕಾಂತ್ ದಾಸ್ ಈ ವೇಳೆ ಹೇಳಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications