ಲೈಂಗಿಕ ಅಪರಾಧ ಪ್ರಕರಣ: ಪೊಲೀಸರಿಗೆ ಮತ್ತೆ ತರಬೇತಿ ಕೊಡಿ
ನವದೆಹಲಿ, ಏಪ್ರಿಲ್ 19: ಲೈಂಗಿಕ ಅಪರಾಧದ ವಿವಿಧ ಆಯಾಮಗಳ ಕುರಿತು ಪೊಲೀಸರಿಗೆ ಮತ್ತೆ ತರಬೇತಿ ನೀಡುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಅವರು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.
ಕತುವಾ ಮತ್ತು ಉನ್ನಾವೋದಲ್ಲಿ ಇತ್ತೀಚೆಗೆ ನಡೆದ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಆರಂಭದ ತನಿಖೆ ನಡೆಸಿರುವ ಪೊಲೀಸರ ಕಾರ್ಯವೈಖರಿ ಕುರಿತು ಪ್ರಶ್ನೆಗಳು ಉದ್ಭವವಾಗಿದ್ದವು. ಕತುವಾ ಅತ್ಯಾಚಾರದಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಭಾಗಿಯಾದ ಆರೋಪ ಎದುರಿಸುತ್ತಿದ್ದರೆ, ಉನ್ನಾವೋದಲ್ಲಿ ಅತ್ಯಾಚಾರ ಆರೋಪಿ ಬಿಜೆಪಿ ರಾಜಕಾರಣಿ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಲೈಂಗಿಕ ಅಪರಾಧ ಪ್ರಕರಣಗಳ ತನಿಖೆಯ ವಿವಿಧ ಆಯಾಮಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ಪೊಲೀಸರಿಗೆ ಮತ್ತೆ ತರಬೇತಿ ನೀಡಬೇಕು ಎಂದು ಮೇನಕಾ ಗಾಂಧಿ ಪತ್ರದಲ್ಲಿ ಸೂಚಿಸಿದ್ದಾರೆ.

ಮೇನಕಾ ಸೂಚಿಸಿದ ನಾಲ್ಕು ಕ್ರಮಗಳು
* ಸಾಕ್ಷ್ಯ ಸಂಗ್ರಹಣೆ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಬೇಕು.
* ಮಕ್ಕಳ ಮೇಲಿನ ಲೈಂಗಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಕಾನೂನಿನ ಅಡಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಪೊಲೀಸರು ಆದ್ಯತೆ ನೀಡುವಂತೆ ನಿರ್ದೇಶನ ನೀಡಬೇಕು.
* ಅಂತಹ ಪ್ರಕರಣಗಳಲ್ಲಿ ಆರೋಪಿಗಳ ಜತೆ ನಿಕಟ ಸಂಪರ್ಕ ಹೊಂದಿರುವ ಅಥವಾ ತನಿಖೆಗೆ ಅಡ್ಡಿಪಡಿಸುವುದು ಕಂಡುಬಂದರೆ ಅಂತಹ ಪೊಲೀಸ್ ಅಧಿಕಾರಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು.
* ಇವು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದ್ದು, ತ್ವರಿತ ಮತ್ತು ತಕ್ಷಣದ ತನಿಖೆ ಕೈಗೊಂಡರೆ ಮಾತ್ರ ಅಪರಾಧಿಯನ್ನು ಕೂಡಲೇ ಬಂಧಿಸಲು ಸಾಧ್ಯ. ಲೈಂಗಿಕ ಅಪರಾಧಗಳ ತನಿಖೆಗೆ, ಮುಖ್ಯವಾಗಿ ಮಕ್ಕಳ ಮೇಲಿನ ಲೈಂಗಿಕ ಅಪರಾಧದ ತನಿಖೆ ನಿರ್ವಹಣೆಗೆ ಪ್ರತ್ಯೇಕ ವಿಶೇಷ ಘಟಕ ಸ್ಥಾಪಿಸುವುದು ಒಳಿತು.
ಇಂತಹ ಪ್ರಕರಣಗಳಲ್ಲಿ ಸಲಹೆಗಳನ್ನು ನೀಡುವುದಲ್ಲದೆ, ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಮೇನಕಾ ಗಾಂಧಿ ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications