ಕಾಂಗ್ರೆಸ್ ತೊರೆಯುವ ಹಾದಿಯಲ್ಲಿ ಜಯಂತಿ ಬರೆದ ಪತ್ರ...
ನವದೆಹಲಿ, ಜ.30: ಕಾಂಗ್ರೆಸ್ ಆಘಾತಕಾರಿ ಬೆಳವಣಿಗೆಯೊಂದನ್ನು ಎದುರಿಸುತ್ತಿದೆ. ಪಕ್ಷದ ಹಿರಿಯ ನಾಯಕಿ ಜಯಂತಿ ನಟರಾಜನ್ ಅವರು ಪಕ್ಷ ತೊರೆಯುವ ಹೊಸ್ತಿಲಿನಲ್ಲಿ ನಿಂತುಕೊಂಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರವೊಂದನ್ನು 'ಶೂಟ್' ಮಾಡಿದ್ದಾರೆ.
ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರ ನಿರ್ಣಯಗಳಿಂದ ಪಕ್ಷದ 'ಇಮೇಜ್' ಹಾಳಾಗಲಿದೆ ಎಂಬ ಕಾರಣ ಜಯಂತಿ ಅವರು ನೀಡಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಜಯಂತಿ ನಟರಾಜನ್ ಹರಿಹಾಯ್ದಿದ್ದು, ಮುಂದೇನಾಗುವುದೋ ಕಾದು ನೋಡಬೇಕಿದೆ. ಸೋನಿಯಾಗೆ ಬರೆದ ಪತ್ರವನ್ನು ಮೊದಲಿಗೆ ದಿ ಹಿಂದೂ ಪ್ರಕಟಿಸಿದೆ.
ನವೆಂಬರ್ 4, 2014ರಂದು ಸೋನಿಯಾಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ಜಯಂತಿ ಅವರು ತಮ್ಮ ಕರ್ತವ್ಯ ನಿಷ್ಠೆ, ಪಕ್ಷದ ಹಿತಾಸಕ್ತಿ ಬಗ್ಗೆ ವಿಸ್ತಾರವಾಗಿ ಹೇಳಿದ್ದಾರೆ. ಕಳೆದ ಹತ್ತು ವರ್ಷಗಳಿಂದ ವಕ್ತಾರಳಾಗಿ ನಾನು ಯಾವುದೇ ತಪ್ಪು ಮಾಡಿಲ್ಲ ಅದು ನಿಮಗೂ, ಮನಮೋಹನ್ ಸಿಂಗ್ ಜೀ ಅವರಿಗೂ ಗೊತ್ತಿದೆ.ಆದರೆ, ನನ್ನನ್ನು ಕಡೆಗಣಿಸಕಾಗಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ. [ಜಯಂತಿ ನಟರಾಜನ್ ಯಾರು?]

ನಾನು ಸಚಿವೆಯಾಗಿದ್ದ ಕಾಲದಲ್ಲೂ ಅಜಯ್ ಮಾಕೇನ್ ಅವರು ದೆಹಲಿ ಬಂದು ವಕ್ತಾರಳಂತೆ ಸುದ್ದಿಗೋಷ್ಠಿ ನಡೆಸಲು ಹೇಳಿದರು. ಅದರೆ, ನಾನು ಅದನ್ನು ನಿರಾಕರಿಸಿದೆ.
ಒಡಿಶಾದಲ್ಲಿ ವೇದಾಂತ ಸಂಸ್ಥೆ ಗಣಿಗಾರಿಕೆ ವಿಷಯದಲ್ಲಿ ರಾಹುಲ್ ಗಾಂಧಿ ಅವರು ಮೂಗು ತೂರಿಸಿದರು. ಸುಮಾರು 30,000 ಕೋಟಿ ರು ಪ್ರಾಜೆಕ್ಟ್ ಕೈತಪ್ಪುತ್ತಿದೆ ಎಂದು ನನ್ನ ಸಹದ್ಯೋಗಿಗಳು ಒತ್ತಡ ಹೇರಿದರು.
ಅದರೆ, ನಾನು ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಿರಲಿಲ್ಲ. ನಾನು ಮಾಡಿದ್ದು ಸರಿ ಎಂದು ಸುಪ್ರೀಂಕೋರ್ಟ್ ಕೂಡಾ ತೀರ್ಪು ನೀಡಿತು. ಈ ಮೂಲಕ ಪಕ್ಷಕ್ಕೆ ಆಗುತ್ತಿದ್ದ ಮುಜುಗರವನ್ನು ತಪ್ಪಿಸಿದೆ. ಅದರೆ, ವಿನಾಕರಣ ನನ್ನನ್ನು ರಾಹುಲ್ ವಿರುದ್ಧ ಎತ್ತಿ ಕಟ್ಟಲಾಯಿತು ಎಂದು ಜಯಂತಿ ಬೇಸರ ವ್ಯಕ್ತಪಡಿಸಿದ್ದಾರೆ.
ಯುಪಿಎ ಸರ್ಕಾರದ ಕಾಲದಲ್ಲಿ ಪರಿಸರ ಖಾತೆ ಸಚಿವೆಯಾಗಿದ್ದ ಜಯಂತಿ ನಟರಾಜನ್ ಅವರು ಬರೆದಿರುವ ಪತ್ರದ ಪೂರ್ಣ ಸಾರಂಶ ಇಲ್ಲಿ ಓದಿ. ಜಯಂತಿ ನಟರಾಜನ್ ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡಸಿ ತಮ್ಮ ನಿರ್ಧಾರವನ್ನು ತಿಳಿಸುವ ಸಾಧ್ಯತೆಯಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications