ಅಯೋಧ್ಯಾ, ಗಂಗಾ, ತಿರಂಗಾಕ್ಕಾಗಿ ಜೈಲಿಗೆ ಹೋಗಲು ಸಿದ್ಧ : ಉಮಾ
ಬಾಬ್ರಿ ಮಸೀದಿ ಧ್ವಂಸಗೊಳಿಸಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಪೈಕಿ ಮೊದಲ ಪ್ರತಿಕ್ರಿಯೆ ಹೊರ ಬಂದಿದೆ. ಕೇಂದ್ರ ಸಚಿವೆ ಉಮಾ ಭಾರತಿ ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.
ನವದೆಹಲಿ, ಏಪ್ರಿಲ್ 19: ಬಾಬ್ರಿ ಮಸೀದಿ ಧ್ವಂಸಗೊಳಿಸಲು ಸಂಚು ರೂಪಿಸಿದ ಆರೋಪ ಹೊತ್ತಿರುವ ಪೈಕಿ ಮೊದಲ ಪ್ರತಿಕ್ರಿಯೆ ಹೊರ ಬಂದಿದೆ. ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕಿ, ಗಂಗಾ ನದಿ ಪವಿತ್ರಗೊಳಿಸುವ ಕಾಯಕ ಹೊತ್ತಿರುವ ಕೇಂದ್ರ ಸಚಿವೆ ಉಮಾ ಭಾರತಿ ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.
ಗಂಗಾ, ಅಯೋಗಧ್ಯಾ ಹಾಗೂ ತ್ರಿವರ್ಣ ಧ್ವಜಕ್ಕಾಗಿ ನಾನು ಯಾವುದೇ ಕಠಿಣ ಶಿಕ್ಷೆ ಅನುಭವಿಸಲು ಸಿದ್ಧ. ಯಾವ ಪಿತೂರಿಯನ್ನು ನಾವು ಮಾಡಿಲ್ಲ. ಬೇಕಾದರೆ ಜೈಲಿಗೆ ತಳ್ಳಿ ಎಂದಿದ್ದಾರೆ.[ಬಾಬ್ರಿ ಮಸೀದಿ ಧ್ವಂಸ ಪ್ರಕರಣ : 8 ಪ್ರಮುಖ ಬೆಳವಣಿಗೆ]

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ(ಏಪ್ರಿಲ್ 19) ಮಹತ್ವದ ಆದೇಶ ನೀಡಿದ್ದು, ಎಲ್ ಕೆ ಅಡ್ವಾಣಿ, ಉಮಾ ಭಾರತಿ,ಮುರಳಿ ಮನೋಹರ ಜೋಶಿ ಸೇರಿದಂತೆ 13 ಮಂದಿ ಬಿಜೆಪಿ ಹಾಗೂ ಕರಸೇವಕರ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಲು ಸಿಬಿಐ ಕೋರಿದ್ದ ಮನವಿಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ.
25ವರ್ಷಗಳಿಗೂ ಅಧಿಕ ಕಾಲದ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚಿನ ಆರೋಪ ಸಾಬೀತಾದರೆ ಭಾರತೀಯ ಜನತಾ ಪಕ್ಷದ ಭೀಷ್ಮ ಎಲ್.ಕೆ ಅಡ್ವಾಣಿ ಸೇರಿದಂತೆ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ.[ಬಾಬ್ರಿ ಮಸೀದಿ ಧ್ವಂಸ ಕೇಸ್: ಅಡ್ವಾಣಿ ವಿರುದ್ಧ ವಿಚಾರಣೆಗೆ ಅಸ್ತು]
ರಾಜೀನಾಮೆ ನೀಡಲ್ಲ : ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ರಾಜೀನಾಮೆಗೆ ಎಲ್ಲೆಡೆಯಿಂದ ಒತ್ತಡ ಕೇಳಿ ಬರುತ್ತಿರುವುದಕ್ಕೆ ಖಾರವಾಗಿ ಉತ್ತರಿಸಿದ್ದಾರೆ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. 1984ರಲ್ಲಿ ಹಿಂಸಾಚಾರ, ಎಮರ್ಜೆನ್ಸಿಗೆ ಕಾರಣವಾದ ಪಕ್ಷವು ನನ್ನ ರಾಜೀನಾಮೆ ಕೇಳುವ ಹಕ್ಕು ಕಳೆದುಕೊಂಡಿದೆ ಎಂದು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ.
ಭಾರತೀಯತೆಯ ಮಂತ್ರ ಪಠಿಸಿದ ಉಮಾ ಭಾರತಿ, ರಾಮ, ಗಂಗಾ, ತಿರಂಗಾಕ್ಕಾಗಿ ಭಾರತ ಹಾಗೂ ಭಾರತಕ್ಕಾಗಿ ನಾನು ಯಾವುದೇ ಶಿಕ್ಷೆ ಅನುಭವಿಸಲು ಸಿದ್ಧ. ಭಾರತಕ್ಕೆ ಅಪಮಾನ ಮಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications