ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಸಂತಸ ತಂದಿಲ್ಲ: ಬಂಡಾಯ ಶಾಸಕರು
ಮುಂಬೈ, ಜೂನ್ 30: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿರುವುದು ನಮಗೆ ಸಂತೋಷದ ವಿಷಯವಲ್ಲ ಎಂದು ಏಕನಾಥ್ ಶಿಂಧೆ ಪಾಳೆಯದ ಬಂಡಾಯ ಶಾಸಕ ಶಿವಸೇನೆ ಇಂದು ಹೇಳಿದ್ದಾರೆ.
ಈ ಬಿರುಕು, ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಜೊತೆಗಿನ ಪಕ್ಷದ ಮೈತ್ರಿಯ ಪತನ ಎಂದು ಹೇಳಿದ್ದಾರೆ. ಮೈತ್ರಿ ಸರ್ಕಾರದ ಪತನದಲ್ಲಿ ಶಿವಸೇನೆ ನಾಯಕ ಸಂಜಯ್ ರಾವುತ್ ಪಾತ್ರವನ್ನು ಒತ್ತಿಹೇಳಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ಸಂಜಯ್ ರಾವತ್ಗೆ ಹೆಚ್ಚು ಪ್ರಾಮುಖ್ಯತೆ ನೀಡುವುದು ಬಂಡಾಯ ನಾಯಕ ಏಕನಾಥ್ ಶಿಂಧೆ ನಿರ್ಧಾರಕ್ಕೆ ಕಾರಣಗಳಲ್ಲಿ ಒಂದು ಎಂದು ಹೇಳಲಾಗಿದೆ.
ಸಿಎಂ ಆಗಿದ್ದ ಉದ್ಧವ್ ಠಾಕ್ರೆ ನಾವು ಹೇಳಿದ ವಿಷಯಗಳನ್ನು ಗಮನಿಸಲಿಲ್ಲ ಎಂದು ಬಣದ ವಕ್ತಾರ ದೀಪಕ್ ಕೇಸರ್ಕರ್ ಹೇಳಿದ್ದಾರೆ. "ಎನ್ಸಿಪಿ ಮತ್ತು ಕಾಂಗ್ರೆಸ್ ವಿರುದ್ಧ ಹೋರಾಡುವಾಗ, ನಮ್ಮ ನಾಯಕನ ಮೇಲೂ ಕೋಪಗೊಂಡಿದ್ದಕ್ಕಾಗಿ ನಮಗೆಲ್ಲ ಬೇಸರವಾಗಿದೆ" ಎಂದಿದ್ದಾರೆ. ಇದಕ್ಕೆಲ್ಲ ಕಾರಣ, ಎನ್ಸಿಪಿ ಮತ್ತು ಸಂಜಯ್ ರಾವತ್, "ಕೇಂದ್ರ ಸರ್ಕಾರದ ವಿರುದ್ಧ ಪ್ರತಿದಿನ ಹೇಳಿಕೆಗಳನ್ನು ನೀಡುವುದು ಮತ್ತು ಕೇಂದ್ರ ಮತ್ತು ರಾಜ್ಯದ ನಡುವೆ ಕಂದಕ ಸೃಷ್ಟಿಸುವುದು ಅವರ ಕೆಲಸ" ಎಂದು ಬಂಡಾಯ ಶಾಸಕ ದೀಪಕ್ ಕೇಸರ್ಕರ್ ಆರೋಪಿಸಿದ್ದಾರೆ.

ಕೊನೆಗೂ ಮೈತ್ರಿ ಸರ್ಕಾರ ಕೆಡವಿದ ಬಂಡಾಯ ಶಾಸಕರು
ಶಿಂಧೆ ಪಾಳಯದಲ್ಲಿರುವ 50 ಬಂಡಾಯ ಶಾಸಕರಲ್ಲಿ 40 ಶಾಸಕರು ಶಿವಸೇನೆ ಶಾಸಕರಾಗಿದ್ದಾರೆ. ಬೆಂಬಲ ವಾಪಸ್ ಪಡೆಯುವ ಮೂಲಕ ಮಹಾರಾಷ್ಟ್ರದಲ್ಲಿ ಮಹಾ ಅಘಾಡಿ ವಿಕಾಸ ಸರ್ಕಾರ ಪತನವಾಗಿದೆ.
ಸೈದ್ಧಾಂತಿಕವಾಗಿ ಹೊಂದಿಕೆಯಾಗದ ಕಾಂಗ್ರೆಸ್ ಮತ್ತು ಎನ್ಸಿಪಿಯೊಂದಿಗಿನ ಅಸಹಜ ಮೈತ್ರಿಯನ್ನು ಕೈಬಿಡಲು ಮತ್ತು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಲು ಬಯಸುತ್ತಾರೆ ಎಂದು ಬಣ ವಾದಿಸಿದೆ.

ಬಹುಮತ ಸಾಬೀತಿಗೂ ಮುನ್ನವೇ ಉದ್ಧವ್ ಠಾಕ್ರೆ ರಾಜೀನಾಮೆ
ಎಂಟು ದಿನಗಳ ರಾಜಕೀಯ ದೊಂಬರಾಟದ ನಂತರ, ರಾಜ್ಯಪಾಲರ ಆದೇಶದಂತೆ ಗುರುವಾರ ಅವರ ಸರ್ಕಾರವು ವಿಶ್ವಾಸಮತ ಪರೀಕ್ಷೆಯನ್ನು ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದಾಗ ಉದ್ದವ್ ಠಾಕ್ರೆ ಬುಧವಾರ ಸಂಜೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದರು.
ಏಕನಾಥ್ ಶಿಂಧೆ ಬಂಡಾಯದ ನಂತರ ಶಿವಸೇನೆ ಶಾಸಕರ ಸಂಖ್ಯೆ 15ಕ್ಕೆ ಕುಸಿದಿದೆ. ಬಹುಮತ ಪರೀಕ್ಷೆಯನ್ನು ನಿಲ್ಲಿಸುವಂತೆ ನ್ಯಾಯಾಲಯವನ್ನು ಕೋರಿದ್ದರು. ಆದರೆ ಸುಪ್ರೀಂಕೋರ್ಟ್ ಇದನ್ನು ನಿರಾಕರಿಸಿತ್ತು.

ಕಾಂಗ್ರೆಸ್, ಎನ್ಸಿಪಿ ಮೇಲೆ ಬಂಡಾಯ ಶಾಸಕರ ಕಿಡಿ
"ಕಾಂಗ್ರೆಸ್ ಮತ್ತು ಎನ್ಸಿಪಿಯಿಂದಾಗಿ ಅನೇಕ ಶಾಸಕರು, ಸಂಸದರು ಕೋಪಗೊಂಡಿದ್ದಾರೆ" ಎಂದು ಕೇಸರ್ಕರ್ ಹೇಳಿದ್ದಾರೆ. ಎನ್ಸಿಪಿಯ ರಾಜ್ಯಾಧ್ಯಕ್ಷರು ನಮ್ಮ ಕ್ಷೇತ್ರಕ್ಕೆ ಹೋಗಿ ಅವರವರ ಹೆಸರುಗಳನ್ನು ಘೋಷಿಸುತ್ತಿದ್ದರು. ನಮ್ಮಿಂದಲೇ ಎನ್ಸಿಪಿ ಮತ್ತು ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದರು. ಆದರೆ ನಮ್ಮ ಸರ್ಕಾರದಲ್ಲಿ ನಮಗೆ ಪ್ರಾತಿನಿಧ್ಯ ದೊರೆಯುತ್ತಿರಲಿಲ್ಲ. ಠಾಕ್ರೆ ನಮ್ಮ ಮಾತಿಗೆ ಬೆಲೆ ನೀಡುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ.
ಪ್ರತಿದಿನ ಸಂಜಯ್ ರಾವತ್ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದರು. ಇದರಿಂದ ಜನ ಅಸಮಾಧಾನಗೊಂಡಿದ್ದರು. ರಾವತ್ನಂತಹ ವಕ್ತಾರರು ಯಾವುದೇ ಪಕ್ಷಕ್ಕೆ ಬರಬಾರದು ಎಂದು ನಾವು ಬಯಸುತ್ತೇವೆ ಎಂದು ಕೇಸರ್ಕರ್ ಹೇಳಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ
ಆರಂಭದಲ್ಲಿ ಸೂರತ್ನಲ್ಲಿ ಮತ್ತು ನಂತರ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದ ಬಂಡಾಯ ಶಾಸಕರು, ಬಹುದಿನದ ಬಹುಮತ ಪರೀಕ್ಷೆಯ ಸಸ್ಪೆನ್ಸ್ ನಡುವೆ ಗೋವಾಕ್ಕೆ ತೆರಳಿದ್ದಾರೆ. ಏಕನಾಥ್ ಶಿಂಧೆ ಬಣವು ನ್ಯಾಯಾಲಯದಲ್ಲಿ ನಿಜವಾದ ಶಿವಸೇನೆ ಎಂದು ವಾದಿಸಿದೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ.
ಉದ್ದವ್ ಠಾಕ್ರೆ ರಾಜೀನಾಮೆಯೊಂದಿಗೆ, ಬಹುಮತ ಪರೀಕ್ಷೆಯು ಈಗ ಅನೂರ್ಜಿತವಾಗಿದೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಸರ್ಕಾರ ರಚನೆಗೆ ಹಕ್ಕು ಸಾಧಿಸಲಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications